ಹಾಸನ | ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ತೆರೆ; 6 ಕೋಟಿಗೂ ಅಧಿಕ ಆದಾಯ ಸಂಗ್ರಹ

Date:

ಈ ವ‍ರ್ಷದ ಹಾಸನಾಂಬೆ ಜಾತ್ರಾ ಮಹೋತ್ಸವ ತೆರೆ ಕಂಡಿದೆ. ಬುಧವಾರ ಮಧ್ಯಾಹ್ನ 12.23ಕ್ಕೆ ಹಾಸನ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ಮುಚ್ಚುವ ಮೂಲಕ ಉತ್ಸವವು ಕೊನೆಗೊಂಡಿದೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ ಎನ್ ರಾಜಣ್ಣ, ಶಾಸಕ ಹೆಚ್ ​ಪಿ ಸ್ವರೂಪ್‌ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ, ಎಸ್‌ಪಿ ಮಹಮದ್ ಸುಜೀತಾ ಅವರ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್ ಮಾಡಿದ್ದಾರೆ.

ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಸಲ್ಲಿಸಿ, ಗರ್ಭಗುಡಿಯಿಂದ ಅರ್ಚಕರು, ಅಧಿಕಾರಿಗಳು ಹೊರಬಂದು ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸಿ ಬೀಗ ಹಾಕಿದ್ದಾರೆ. ಮುಂದಿನ ವರ್ಷವೇ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ವರ್ಷ ನವೆಂಬರ್ 2ರಂದು ಹಾಸನಬಾಂಬೆ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಆದರೆ, ನವೆಂಬರ್ 3ರಿಂದ ನ.15ರ ಬೆಳಗ್ಗೆ 7 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ದಾಖಲೆ ಬರೆದ ಹಾಸನಾಂಬೆ: ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ 10 ಲಕ್ಷಕ್ಕೂ ಹೆಚ್ಚಿನ ಮಂದಿ ಹಾಸನಾಂಬೆ ದರ್ಶನ ಪಡೆದಿದ್ದು, ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದ್ದರಿಂದ ದೇವಾಲಯಕ್ಕೆ ಈ ವರ್ಷ 6 ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಮಂಗಳವಾರ ಮಧ್ಯಾಹ್ನ 5 ಗಂಟೆವರೆಗೆ ನೇರ ದರ್ಶನದ ಟಿಕೆಟ್‌ಗಳ ಮಾರಾಟ ಮತ್ತು ಲಾಡು ಪ್ರಸಾದದ ಮಾರಾಟದಿಂದಲೇ ದಾಖಲೆ ಮಟ್ಟದ ಆದಾಯ ಬಂದಿದೆ.

ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕ ನಿಗದಿ ಮಾಡಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಹಾಸನಾಂಬ ದೇವಾಲಯ; 9 ದಿನದಲ್ಲಿ 5.5 ಕೋಟಿ ರೂ. ಸಂಗ್ರಹ

ಪ್ರಸ್ತುತ ಸಾಲಿನಲ್ಲಿ ಒಟ್ಟು 12 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ  ಮಾಡಿಕೊಡಲಾಗಿತ್ತು. ಆದರೆ, ಮುಂದಿನ ವರ್ಷ 9 ದಿನ ಮಾತ್ರ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...