ಹಾಸನ | ಮಾ. 7, 8ಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನ; ಜಾಥಾ, ಬೃಹತ್ ಸಮಾವೇಶ

Date:

ಹಾಸನ ನಗರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ವತಿಯಿಂದ ಮಾರ್ಚ್ 7 ಮತ್ತು 8ರಂದು ಹಾಸನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತದೆ ಎಂದು ಒಕ್ಕೂಟದ ಡಾ. ಎಚ್. ಎಸ್ ಅನುಪಮಾ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಹಾಸನ ನಗರದ ಮಹಾರಾಜ ಉದ್ಯಾನವನದಲ್ಲಿರುವ ಬಯಲು ರಂಗಮಂದಿರದಲ್ಲಿ ಬೆಳಗ್ಗೆ 9.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಲಾತಂಡಗಳಿಂದ ಹೋರಾಟದ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಸಾಮಾಜಿಕ ಹೋರಾಟಗಾರ್ತಿ, ಲೇಖಕಿ ಹಾಗೂ ನ್ಯಾಯವಾದಿ ತೀಸ್ತಾ ಸೆಟಲ್ವಾಡ್ (ಮುಂಬಯಿ) ಮತ್ತು ಸಾಮಾಜಿಕ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ (ಬೆಂಗಳೂರು) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಡಾ. ಎಚ್. ಎಸ್ ಅನುಪಮಾ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಯಲಕ್ಷ್ಮಿ ರಾಜಣ್ಣಗೌಡ, ರತಿ ರಾವ್, ಡಾ. ವೀರಭದ್ರಪ್ಪ, ಗೀತಾ ವಿ., ಡಾ. ರಂಗಲಕ್ಷ್ಮಿ, ರಾಜಶೇಖ‌ರ್ ಹುಲಿಕಲ್, ರಾಜು ಗೊರೂರು, ಪುಷ್ಪಾ ಎಂ.ಬಿ., ಮಂಗಳಮ್ಮ, ಮಮತಾ, ಎಚ್.ಬಿ. ಪೂರ್ಣಿಮಾ ಹಾಗೂ ಧರ್ಮೇಶ್ ಸೇರಿದಂತೆ ಹಲವರು ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ. ಇದಾದ ನಂತರ ಮಹಾರಾಜ ಉದ್ಯಾನವನದಿಂದ ಆರಂಭವಾಗುವ ಹಕ್ಕೊತ್ತಾಯ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಮಾಪ್ತಿಯಾಗಲಿದೆ. ಬಳಿಕ ಬೆಳಗ್ಗೆ 11.30ಕ್ಕೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಯಶೋಧರಾ ದಾಸಪ್ಪ ವೇದಿಕೆಯಲ್ಲಿ ಬೃಹತ್‌ ಸಾರ್ವಜನಿಕ ಮಹಿಳಾ ಸಮಾವೇಶ ನಡೆಯಲಿದೆ ಎಂದು ಒಕ್ಕೂಟದಿಂದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಡಾ. ಸುಕನ್ಯಾ ಕನಾರಳ್ಳಿ ಮಹಿಳಾ ಚೈತನ್ಯದ ಕುರಿತು ಮಾತನಾಡಲಿದ್ದು, ತೀಸ್ತಾ ಸೆಟಲ್ವಾಡ್‌ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಇದೇ ವೇಳೆ “ಹಾಸನ ಮಣ್ಣಿನ ಹೆಣ್ಣು ದನಿಗಳು” ಎಂಬ ಸಾಂದರ್ಭಿಕ ಗ್ರಂಥವನ್ನು ಬಿಡುಗಡೆ ಮಾಡಲಾಗುತ್ತದೆ. ಕಾರ್ಯಕ್ರಮದ ಅಂಗವಾಗಿ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಜಿಲ್ಲೆಯ ಚಿತ್ರಕಲಾವಿದೆಯರಿಂದ ಚಿತ್ರಕಲಾ ಪ್ರದರ್ಶನ ಹಾಗೂ ಪುಸ್ತಕ ಮಾರಾಟದ ವ್ಯವಸ್ಥೆಯೂ ಇರಲಿದೆ. ಇದಲ್ಲದೆ ಮಾರ್ಚ್ 8ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ “ಮಹಿಳಾ ದೌರ್ಜನ್ಯ: ಸವಾಲುಗಳು ಮತ್ತು ಬಿಡುಗಡೆಯ ಸಾಧ್ಯತೆಗಳು” ಎಂಬ ವಿಷಯದ ಕುರಿತಾಗಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದರು.

ಇದನ್ನೂ ಓದಿದ್ದೀರಾ?ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಈ ವೇಳೆ ಡಾ. ಸಬಿತಾ ಬನ್ನಾಡಿ,ಶೈಲಜಾ, ಕಲಾವತಿ,ಮಧುಸೂಧನ, ಭಾನುಮತಿ, ಲೀಲಾವತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...