ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಬಳಿಯ ಕುಮ್ಮತ ಹಳ್ಳಿಯಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಗ್ರಾಮದ ಮನೆಯೊಂದರಲ್ಲಿ ಸಾಕು ನಾಯಿಯನ್ನು ಚಿರತೆ ಎಳೆದುಕೊಂಡು ಹೋಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಇದರ ಪಕ್ಕದಲ್ಲಿ ಸಕಲೇಶಪುರ ಪುರಸಭೆಯ ಎಂಜಿನಿಯರ್ ಕವಿತಾ ಅವರ ಸಹೋದರಿಯ ಜಮೀನಿನಲ್ಲೂ ಹೆಜ್ಜೆ ಗುರುತುಗಳು ಕಂಡುಬಂದಿವೆ. ಆ ಗ್ರಾಮದಲ್ಲಿ ಪರಿಶೀಲಿಸಿದಾಗ ಚಿರತೆ ಹೆಜ್ಜೆಯ ಗುರುತುಗಳು ಕಂಡು ಬಂದಿದೆಂದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಈ ಸುದ್ದಿ ಓದಿದ್ದೀರಾ? ಆಡಳಿತ ಪಕ್ಷದ ವಿರುದ್ಧ ಹೋರಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಮಾಜಿ ಸಿಎಂ ಬೊಮ್ಮಾಯಿ
“ಈ ಭಾಗದ ರೈತರು ತಮ್ಮ ಜಮೀನಿಗೆ ಹೋಗಲು ಭಯಪಡುವಂತಾಗಿದೆ. ಈಗಾಗಲೇ ಕಾಡಾನೆ-ಮಾನವ ಸಂಘರ್ಷ, ಕಾಟಿಗಳ ಉಪಟಳ ಹೆಚ್ಚಾಗಿದ್ದು, ರೈತರ ಬೆಳೆಗಳನ್ನು ಹಾಳು ಮಾಡುತ್ತಿವೆ. ಈ ನಡುವೆ ಚಿರತೆ ಪ್ರತ್ಯಕ್ಷವಾಗಿ ನಾಯಿ ಹೊತ್ತೊಯ್ದಿರುವುದು ಮತ್ತು ಹೆಜ್ಜೆಯ ಗುರುತುಗಳು ಕಂಡುಬಂದಿರುವುದರಿಂದ ಹೆತ್ತೂರು ಹೋಬಳಿಯ ಜನರಿಗೆ ಮತ್ತಷ್ಟು ಆತಂಕ ಎದುರಾಗಿದೆ. ಹೀಗೆ ಆದರೆ ಮುಂದಿನ ದಿನಗಳಲ್ಲಿ ರೈತರು ಕೃಷಿ ಮಾಡುವುದನ್ನೇ ಕೈಬಿಡಬೇಕಾದ ಪರಿಸ್ಥಿತಿ ಎದುರಾಗಿದೆ” ಎಂದು ಕುಮ್ಮತಳ್ಳಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.





