ಹಾಸನ | ಬರಪೀಡಿತ ತಾಲೂಕುಗಳ ಪಟ್ಟಿ; ಅರಸೀಕೆರೆ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕಿಡಿ

Date:

ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಅರಸೀಕೆರೆ ತಾಲೂಕನ್ನು ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಅರಸೀಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ. ಈ ಕಷ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಬರಬೇಕಿತ್ತು, ಸಭೆ ಮಾಡಬೇಕಿತ್ತು. ಆದರೆ, ಯಾವುದೇ ಸಭೆ ಮಾಡಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಾಸನದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, “ಇವತ್ತು ರಾಜ್ಯ, ಜಿಲ್ಲೆಯಲ್ಲಿ ಬರಗಾಲ ತಾಂಡವವಾಡುತ್ತಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಗೈಡ್‌ಲೈನ್ಸ್‌ ಮೂಲಕ ರಾಜ್ಯವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಗೈಡ್‌ಲೈನ್ಸ್‌ನಿಂದ ಕೇಂದ್ರ ಸರ್ಕಾರ ರೈತರಿಗೆ ಮಣ್ಣು ಎರಚುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಇವತ್ತು ರೈತರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಆದರೆ ಗೈಡ್‌ಲೈನ್ಸ್‌ ಬದಲಾವಣೆ ಮಾಡುತ್ತಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈನ್ ಗೇಜ್ ಇಡ್ತಾರೆ. ಅವು ಸರಿಯಾಗಿ ವರ್ಕ್ ಆಗುತ್ತವೋ, ಇಲ್ಲವೋ ಗೊತ್ತಿಲ್ಲ. ಏಪ್ರಿಲ್‌ನಲ್ಲಿ ಸರಿಯಾಗಿ ಮಳೆ ಬರಲಿಲ್ಲ. ಬಂದ ಅಲ್ಪಸ್ವಲ್ಪ ಮಳೆಗೆ ರೈತರು ಬಿತ್ತನೆ ಮಾಡಿದ್ದರು. ʼಸಂಪೂರ್ಣವಾಗಿ ಮುಂಗಾರು ಮಳೆ ಬಾರದಿದ್ದರಿಂದ ಬೆಳೆ ನಾಶವಾಗಿದೆʼ ಎಂದು ಸರ್ಕಾರವೇ ಘೋಷಣೆ ಮಾಡಿದೆ. ಮೇ.15 ರಿಂದ ಜುಲೈ ಅಂತ್ಯದವರೆಗೂ ಸ್ವಲ್ಪ ಮಳೆ ಬಂತು, ರೈತರು ಮನೆಯಲ್ಲಿದ್ದಿದ್ದನ್ನೆಲ್ಲಾ ಅಡವಿಟ್ಟು ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ. ಮಳೆ ಇಲ್ಲದೆ ಬೆಳೆ ಹಾನಿಯಾಗಿದೆ. ಇತ್ತ ಸರ್ಕಾರವು ಬರ ತಾಲೂಕು ಪಟ್ಟಿಯಿಂದ ಕೈಬಿಟ್ಟಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“40 ಸಾವಿರ ಎಕರೆ ಪ್ರದೇಶದಲ್ಲಿ ರಾಗಿ, 9 ಸಾವಿರ ಎಕರೆ ಪ್ರದೇಶದಲ್ಲಿ ಜೋಳ, 15 ರಿಂದ 16 ಸಾವಿರ ಎಕರೆ ಪ್ರದೇಶದಲ್ಲಿ ಉಳಿದ ಬೆಳೆ ಬಿತ್ತನೆ ಮಾಡಿದ್ದರು. ಆಗಸ್ಟ್‌ನಿಂದ ಈವರಗೂ ಒಂದು ಹನಿ ಮಳೆ ಬಂದಿಲ್ಲ. ಮೇ, ಜೂನ್‌ನಲ್ಲಿ ಮಳೆ ಆದರೆ ಬಂದಿರುವ ಬೆಳೆ ಯಾವುದು? ನಮ್ಮ‌ ಅರಸೀಕೆರೆ ತಾಲೂಕನ್ನು ಏಕೆ ಬರಪೀಡಿತವೆಂದು ಘೋಷಣೆ ಮಾಡಿಲ್ಲ. ನಮ್ಮ ತಾಲೂಕನ್ನು ಎ ಗ್ರೇಡ್‌ಗೆ ಸೇರಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದಿದ್ದರೆ ಮೀಸಲಾತಿಯ ಉದ್ದೇಶವೇ ವಿಫಲ: ಸಿದ್ದರಾಮಯ್ಯ

“ನಿಮ್ಮ ರೈನ್ ಗೇಜ್ ಕಿತ್ತು ಎಸೆಯಿರಿ. ಸ್ಥಳಕ್ಕೆ ಬಂದು ಅಧ್ಯಯನ ಮಾಡಿ. ನಮ್ಮಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಬರಪೀಡಿತ ಪ್ರದೇಶವೆಂದು ಘೋಷಿಸಿ. ಈ ಕಷ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಸಭೆಯನ್ನು ಮಾಡಲಿಲ್ಲ. ಅಧಿಕಾರಿಗಳು ಖಾಲಿ ಡಬ್ಬಗಳನ್ನು ಇಟ್ಟುಕೊಂಡಿದ್ದಾರೆ. ಖಾಲಿ ಡಬ್ಬಗಳನ್ನು ಇಟ್ಕೊಂಡು ರಿಸಲ್ಟ್ ನೀಡುತ್ತಿದ್ದಾರೆ” ಎಂದು ಟೀಕಿಸಿದರು.

“ಅರಸೀಕೆರೆ ತಾಲೂಕಿನಲ್ಲಿ ಶೇ.33ರಷ್ಟು ಬೆಳೆ ಬಂದಿದಿಯಾ ಚಾಲೆಂಜ್ ಮಾಡುತ್ತೇನೆ. ಎನ್‌ಡಿಆರ್‌ಎಫ್ ಗೈಡ್‌ಲೈನ್ಸ್ ಚೇಂಜ್ ಮಾಡಲೇಬೇಕು. ಇದರ ಬಗ್ಗೆ ಹೋರಾಟ ಮಾಡುತ್ತೇನೆ. ಗುರುವಾರ ಹನ್ನೆರಡು ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇನೆ. ನಮ್ಮ ತಾಲೂಕನ್ನು ಬರಪೀಡಿತವೆಂದು ಘೋಷಣೆ ಮಾಡಲೇಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಕವಯಿತ್ರಿ, ಅನುವಾದಕಿ, ಕಲಾವಿದೆ- ಎಂ.ಆರ್. ಕಮಲ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...