ಹಾಸನ | ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹ; ತೆಂಗು ಬೆಳೆಗಾರರಿಂದ ಪ್ರತಿಭಟನಾ ಸಮಾವೇಶ

Date:

  • ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಿ
  • ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್‌ ಮೀಟರ್ ಅಳವಡಿಕೆ ಹಿಂಪಡೆಯಲಿ

ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ತೆಂಗು ಬೆಳೆಗಾರರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಚನ್ನರಾಯಪಟ್ಟಣ ತಾಲೂಕು ಸಮಿತಿ ನೇತೃತ್ವದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಇದಕ್ಕೂ ಮುನ್ನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ತೆಂಗು ಬೆಳೆಗಾರರ ಸಮಾವೇಶದಲ್ಲಿ ರೈತರು ಮತ್ತು ರೈತ ಮುಖಂಡರು ತೆಂಗು ಬೆಳೆಗಾರರ ಸಮಸ್ಯೆಗಳು ಮತ್ತು ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಹತ್ತಾರು ವರ್ಷಗಳ ಕಾಲ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಬೆಳೆದ ತೆಂಗಿನ ಫಸಲು ಕೈಗೆ ಬಂದ ಮೇಲೆ ಮಾರುಕಟ್ಟೆಯಲ್ಲಿ ತೆಂಗು ಮತ್ತು ಕೊಬ್ಬರಿಗೆ ಬೆಲೆಗಳು ಪಾತಾಳಕ್ಕೆ ಕುಸಿದಿದೆ ಎಂದು ತೆಂಗು ಬೆಳೆಗಾರರು ತಮ್ಮ ಅಳಲು ತೋಡಿಕೊಂಡರು.

ಕೃಷಿ ಉತ್ಪನ್ನಗಳಿಗೆ ಬಳಸುವ ಎಲ್ಲ ಸಾಮಗ್ರಿಗಳ ಬೆಲೆ ಏರಿಕೆಯಿಂದಾಗಿ ಕೃಷಿ ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ, ರೈತರ ಪರಿಸ್ಥಿತಿ ಅತ್ಯಂತ ದುಸ್ತರವಾಗುತ್ತಿದೆ. ನಷ್ಟವಾಗುತ್ತಿರುವ ಕಾರಣ ರೈತರು ಕೃಷಿಯನ್ನು ಬಿಟ್ಟು ನಗರಗಳಿಗೆ ಕೆಲಸಕ್ಕೆ ವಲಸೆ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ತಡೆಗಟ್ಟಬೇಕಿದ್ದರೆ ತೆಂಗು ಮತ್ತು ಕೊಬ್ಬರಿಗೆ ಕೃಷಿ ತಜ್ಞ ಡಾ. ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ತೆಂಗು ಬೆಳೆಗಾರರ ಪ್ರತಿಭಟನೆ
ಚನ್ನರಾಯಪಟ್ಟಣ ತಹಶೀಲ್ದಾರ್‌ ಕಚೇರಿ ಎದುರು ತೆಂಗು ಬೆಳೆಗಾರರು ಪ್ರತಿಭಟನೆ ನಡೆಸಿದರು.

ಒಂದು ಅಂದಾಜಿನ ಪ್ರಕಾರ ಒಂದು ತೆಂಗಿನ ಕಾಯಿಗೆ ಕನಿಷ್ಠ 50 ರೂಪಾಯಿ ಮತ್ತು ಒಂದು ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 25 ಸಾವಿರ ರೂಪಾಯಿ ಬೆಲೆಯನ್ನು ಸರ್ಕಾರವೇ ನಿಗದಿ ಮಾಡಬೇಕು. ಜೊತೆಗೆ ಸ್ಥಳೀಯ ಎಪಿಎಂಸಿಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಗಟ್ಟಿ ಎಪಿಎಂಸಿ ಮಾರುಕಟ್ಟೆಯನ್ನು ಬಲಪಡಿಸಬೇಕು, ರೈತರಿಗೆ ಸ್ಥಳೀಯ ಮಾರುಕಟ್ಟೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಗಾಯದ ಮೇಲೆ ಬರೆ

ರೈತರ ಗಾಯದ ಮೇಲೆ ಬರೆ ಎಳದಂತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್‌ ಮೀಟರ್ ಅಳವಡಿಸುವ ಮೂಲಕ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿದೆ. ಕೂಡಲೇ ಇಂತಹ ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ವಿಶೇಷ ಪ್ಯಾಕೇಜ್‌ ಘೋಷಿಸಿ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು, ಉತ್ತಮ ಮಾರುಕಟ್ಟೆ ಒದಗಿಸಲು ವಿಶೇಷ ಪ್ಯಾಕೇಜನ್ನು ಘೋಷಿಸಬೇಕು. ಹಾಗೆ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆಗಳನ್ನು ಬಲಪಡಿಸಿ ಕೃಷಿಗೆ ಪೂರಕವಾಗಿ ರೈತರಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರುಕಟ್ಟೆ ಬಲಪಡಿಸಿ, ಭ್ರಷ್ಟಾಚಾರ ನಿರ್ಮೂಲನೆ ಮಾಡಿ ತೆಂಗುಬೆಳೆಗಾರರ ಸಮಸ್ಯೆಗಳ ಬಗೆಹರಿಸಬೇಕು ಎಂದು ತೆಂಗು ಬೆಳೆಗಾರರು ತಮ್ಮ ಹಕ್ಕೊತ್ತಾಯ ಮಾಡಿದರು.

ತೆಂಗು ಬೆಳೆಗಾರರ ಸಮಾವೇಶ
ಚನ್ನರಾಯಪಟ್ಟಣದ ಅಂಬೇಡ್ಕರ್ ಭವನದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಯಿತು

ಬೇಡಿಕೆಗಳು

  • ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಕರ್ನಾಟಕ ಕೃಷಿ ಬೆಲೆ ಆಯೋಗದ ಶಿಫಾರಸ್ಸಿನಂತೆ ಕೂಡಲೇ ಒಂದು ಕ್ವಿಂಟಾಲ್ ದುಂಡು ಕೊಬ್ಬರಿಯ ಬೆಲೆಯು 16,730 ರೂ. ನಿಗದಿಯಾಗಬೇಕು.
  • ತೆಂಗಿನ ಬೆಲೆಯೂ ಮಾರುಕಟ್ಟೆಯಲ್ಲಿ ವಿಪರೀತ ಕುಸಿತ ಕಂಡಿರುವುದರಿಂದ ಕೃಷಿ ತಜ್ಞ ಡಾ. ಎಂ ಎಸ್ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸಿನಂತೆ ಉತ್ಪಾದನಾ ವೆಚ್ಚಕ್ಕೆ ಶೇ.50 ರಷ್ಟು ಲಾಭಾಂಶ ಸೇರಿಸಿ ಬೆಲೆ ನಿಗದಿ ಮಾಡಬೇಕು.
  • ತೆಂಗು ಮತ್ತು ಕೊಬ್ಬರಿಯನ್ನು ಎಪಿಎಂಸಿ ಮಾರುಕಟ್ಟೆಯ ಮೂಲಕ ರಾಜ್ಯ ಸರ್ಕಾರವೇ ಖರೀದಿಸಬೇಕು.
  • ಪ್ರಸ್ತುತ ನಫೆಡ್‌ (NAFED) ಮೂಲಕ ನಡೆಯುತ್ತಿರುವ ಕೊಬ್ಬರಿ ಮಾರುಕಟ್ಟೆಯಲ್ಲಿಯೂ ಕರ್ನಾಟಕ ಕೃಷಿ ಬೆಲೆ ಆಯೋಗದ ಶಿಫಾರಸ್ಸಿನಂತೆ ಕೂಡಲೇ ಒಂದು ಕ್ವಿಂಟಾಲ್ ದುಂಡು ಕೊಬ್ಬರಿಯ ಬೆಲೆಯು 16,730 ರೂ. ನಿಗದಿಯಾಗಬೇಕು ಮತ್ತು ವರ್ಷ ಪೂರ್ತಿ ಮಾರುಕಟ್ಟೆ ಚಾಲ್ತಿಯಲ್ಲಿರಬೇಕು. ಇಲ್ಲಿರುವ ಭ್ರಷ್ಟಾಚಾರ ತಡೆಗಟ್ಟಿ ರೈತಪರ ನೀತಿಗಳನ್ನು ಜಾರಿಗೊಳಿಸಬೇಕು.
  • ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಕೆಯನ್ನು ಕೈಬಿಡಬೇಕು, ಉಚಿತ ವಿದ್ಯುತ್ ಸೌಲಭ್ಯವನ್ನು ಮುಂದುವರೆಸಬೇಕು ಹಾಗೂ ಪಂಪ್‌ಸೆಟ್‌ಗಳ ಆರ್‌ಆರ್‌ ನಂಬರ್ ಮತ್ತು ಆಧಾರ್‌ ಜೋಡಣೆ ಕೈಬಿಡಬೇಕು.
  • ರೈತರಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರುಕಟ್ಟೆ ಬಲಪಡಿಸಿ, ಭ್ರಷ್ಟಾಚಾರ ತಡೆಗಟ್ಟಿ, ಮಾರುಕಟ್ಟೆಯ
    ಪ್ರಾಂಗಣದಲ್ಲಿ ರೈತರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು.
  • ತೆಂಗಿನ ಉತ್ಪನ್ನ ಮತ್ತು ಉಪ ಉತ್ಪನ್ನಗಳ ಮೌಲ್ಯವರ್ಧನೆಗೆ ಬೇಕಾದಂತೆ ಕೃಷಿ ಆಧಾರಿತ ಕೈಗಾರಿಕೆಗಳನ್ನು
    ಸ್ಥಾಪಿಸಬೇಕು.
  • ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು.
  • ತೆಂಗು ಬೆಳೆಗಾರರ ಸಮಸ್ಯೆಗಳನ್ನು ಆಲಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ರೈತ ಸಂಘಟನೆಗಳನ್ನು ಒಳಗೊಂಡ ಜಂಟಿ ಸಭೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಸಬೇಕು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಜೈನಮುನಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ

ತೆಂಗು ಬೆಳೆಗಾರರ ಪ್ರತಿಭಟನಾ ಸಮಾವೇಶದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್ ಆರ್ ನವೀನ್ ಕುಮಾರ್, ಮುಖಂಡರಾದ ಎಚ್ ಎಸ್ ಮಂಜುನಾಥ್, ತುಮಕೂರು ಜಿಲ್ಲಾ ಮುಖಂಡರಾದ ಚನ್ನಬಸಣ್ಣ, ತಾಲೂಕು ಮುಖಂಡರಾದ ವಾಸುದೇವ ಕಲ್ಕೆರೆ, ವಳಗೆರಳ್ಳಿ ರಾಮಚಂದ್ರ, ಕೃಷ್ಣೇಗೌಡ, ಕಬ್ಬಳಿ ದೊರೆಸ್ವಾಮಿ, ಚೌಡೇನಹಳ್ಳಿ ಕೃಷ್ಣೇಗೌಡ, ಮಿಲ್ಟ್ರಿ ಮಂಜು, ರಾಜ್ಯ ರೈತ ಸಂಘದ ಹರೀಶ್, ಮೀಸೆ ಮಂಜಣ್ಣ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...