ಅಮೇಜಾನ್ ಸಹಭಾಗಿತ್ವದ ಪ್ಲಿಪ್ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು, ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಹಾಸನ ಜಿಲ್ಲಾ ಸಮಿತಿಯ ಕರ್ನಾಟಕ ಪ್ರಾಂತ ರೈತ ಹಾಗೂ ಕೆಪಿಆರ್ಎಸ್ ಸಂಘ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೋಮವಾರ ಅಗ್ರಹಿಸಿದೆ.
ರಾಜ್ಯದಲ್ಲಿ ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಇದನ್ನೇ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು, ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುಲು ಸಾಧ್ಯವಾಗದೆ ಪ್ರಯಾಸ ಪಡುತ್ತಿದೆ. ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಪ್ಲಿಪ್ಕಾರ್ಟ್ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸದಿದ್ದರೆ ಅಮೇಜಾನ್ ಕಛೇರಿಗಳ ಎದುರು ಹೈನುಗಾರಿಕೆ ರೈತರ ತೀವ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತಸಂಘ ಕೆಪಿಆರ್ಎಸ್ ಹಾಸನ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ.
ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ, ಕೇಂದ್ರ ಸಹಕಾರಿ ಸಚಿವ ಅಮಿತ್ಷಾರವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕೆಪಿಆರ್ಎಸ್ ಹಾಸನ ಜಿಲ್ಲಾ ಸಮಿತಿಯಿಂದ ಒತ್ತಾಯಿಸಲಾಯಿತು.
ಈ ಹಿಂದೆ ರಿಲಯನ್ಸ್ ಕಂಪನಿ ಜಿಯೋ ಮೊಬೈಲ್ ಸಿಮ್ಗಳನ್ನು ಉಚಿತವಾಗಿ ಕೊಟ್ಟು ಅತ್ಯಂತ ಕಡಿಮೆ ದರದಲ್ಲಿ ಆಕರ್ಷಕ ಡಾಟಾ ಪ್ಯಾಕ್ಗಳನ್ನು ಘೋಷಿಸಿ, ಗ್ರಾಹಕರನ್ನು ಸೆಳೆದು ಸರ್ಕಾರಿ ದೂರ ಸಂಪರ್ಕ ಸಂಸ್ಥೆಯಾದ ಬಿಎಸ್ಎನ್ಎಲ್ನ್ನು ನಷ್ಟಕ್ಕೆ ತಳ್ಳಿ ಕ್ರಮೇಣ ಅದನ್ನು ಮುಚ್ಚುವಂತೆ ಮಾಡುವ ಹುನ್ನಾರ ನಡೆದಿದೆ ಜೊತೆಗೆ ಖಾಸಗೀ ದೂರಸಂಪರ್ಕ ಕಂಪನಿಗಳು ಡಾಟಾ ಪ್ಯಾಕ್ಗಳ ದರವನ್ನು ಹೆಚ್ಚಳ ಮಾಡಿ ಗ್ರಾಹಕರಿಂದ ಸುಲಿಗೆ ಮಾಡುತ್ತಿವೆ. ಇದೇ ರೀತಿ ಒಂದು ರೂ ದರದಲ್ಲಿ ಒಂದು ಲೀಟರ್ ಹಾಲನ್ನು ಮಾರಾಟ ಮಾಡುವುದು ಮುಂದೊAದು ದಿನ ರೈತರ ಜೀವನಾಡಿಗಳಾಗಿರುವ ಹಾಲು ಉತ್ಪಾದಕ ಸಹಕಾರ ಸಂಘಗಳನ್ನು ಸಂಪೂರ್ಣ ನಾಶ ಮಾಡುವುದೇ ಆಗಿದೆ. ಹಾಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ಮಧ್ಯಪ್ರವೇಶ ಮಾಡಿ ರೈತರ ಹೈನುಗಾರಿಕೆಯನ್ನು ಉಳಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಕೆಪಿಆರ್ಎಸ್ ಆಗ್ರಹಿಸಿದೆ.
ಇದನ್ನೂ ಓದಿದ್ದೀರಾ?ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು
ಈ ವೇಳೆ ಹೆಚ್.ಎಸ್. ಮಂಜುನಾಥ್, ಹೆಚ್.ಆರ್. ನವೀನ್ ಕುಮಾರ್ ಹಾಗೂ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.





