ಹಾಸನ | ಪೌರಕಾರ್ಮಿಕರಿಗೆ ಮೂಲ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು: ಸಾಮಾಜಿಕ ಹೋರಾಟಗಾರ ನೂರ್ ಅಹ್ಮದ್

Date:

ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಗುರುವಾರ ರಾತ್ರಿ 8 ಗಂಟೆಯ ಸುಮಾರಿನಲ್ಲಿ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ 24X7 ಸಮಾಜಸೇವಾ ತಂಡದ ಕಾರ್ಯಕರ್ತರು ಬೀದಿಗಳನ್ನು ಸ್ವಚ್ಛಗೊಳಿಸುವುದರ ಮೂಲಕ ‘ಪೌರಕಾರ್ಮಿಕರಿಗೆ ವಿನೂತನ ಗೌರವ ಸಲ್ಲಿಸಿದರು.

ಶುಕ್ರವಾರ ಪೌರಕಾರ್ಮಿಕರ ದಿನಾಚರಣೆ ಇದ್ದ ಕಾರಣ ಇಡೀ ದಿನ ಅವರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದ 24X7 ಸಮಾಜಸೇವಾ ತಂಡದ ಸದಸ್ಯರು ಒಗ್ಗೂಡಿ ರಾತ್ರಿ ಗುರುವಾರ 8 ಗಂಟೆಯಿಂದಲೇ ಬೇಲೂರು ಪಟ್ಟಣದ ಪುರಸಭೆ ಮುಂಭಾಗದಿಂದ, ಬಸ್ ಸ್ಟಾಂಡ್ ಮುಂಬಾಗ, ಹರ್ಡೀಕರ್ ವೃತ್ತ, ಸರ್ಕಾರಿ ಆಸ್ಪತ್ರೆಯಿಂದ ಕೆಂಪೇಗೌಡ ಸರ್ಕಲ್ ಮತ್ತು ದೇವಸ್ಥಾನ ರಸ್ತೆ ಮೂಲಕ ಚನ್ನಕೇಶವ ದೇವಸ್ಥಾನದ ಸುತ್ತಮುತ್ತಲಿನ ಕಸವನ್ನು ಟ್ರಾಕ್ಟರ್‌ಗೆ ತುಂಬುವ ಮೂಲಕ, ಜನಜಾಗೃತಿ, ಸ್ವಚ್ಛತೆಯ ಅರಿವನ್ನು ಮೂಡಿಸಿದರು.

ಸಾಮಾಜಿಕ ಹೋರಾಟಗಾರ ನೂರ್ ಅಹ್ಮದ್ ಮಾತನಾಡಿ, “ಪೌರಕಾರ್ಮಿಕ ದಿನಾಚರಣೆ ಪ್ರಯುಕ್ತ, ಅಂದು ಬೇಲೂರಿನ ಪೌರಕಾರ್ಮಿಕರ ಶ್ರಮವನ್ನು ಕಂಡು ಅವರಿಗೆ ಇಡೀ ದಿನ ವಿಶ್ರಾಂತಿ ಪಡೆಯುವ ಸಲುವಾಗಿ ಅವರ ಶ್ರಮವನ್ನು ಗಮನಿಸಿ ನಮ್ಮ ತಂಡ ಈ ಕಾರ್ಯದಲ್ಲಿ ತೊಡಗಿದೆ. ಈ ಕಾರ್ಯದಲ್ಲಿ ವರ್ತಕರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬೇಲೂರು ಪಟ್ಟಣದ ಸ್ವಚ್ಛತೆ ಕಡೆಗೆ ಹೆಚ್ಚು ಗಮನ ಹರಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೌರಕಾರ್ಮಿಕರೇನು ಬೇರೆಯವರಲ್ಲ. ನಮ್ಮ ಅಣ್ಣ ತಮ್ಮಂದಿರೆ, ಸಹೋದರಿಯರೆ. ಹಾಗಾಗಿ ಅವರ ಶ್ರಮಕ್ಕೆ ಕನಿಷ್ಠ ಬೆಲೆಕಟ್ಟಲಾಗದು. ಆದರೆ ಹಲವಾರು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳು ಕನಿಷ್ಠ ಮೂಲ ಸೌಕರ್ಯಗಳನ್ನೂ ಕಲ್ಪಿಸದೆ ಅವರಿಂದ ದುಡಿಸಿಕೊಳ್ಳುತ್ತಿವೆ. ಸುಮಾರು 30 ವರ್ಷಗಳಿಂದ ಬೇಲೂರು ಪಟ್ಟಣದ ಕೊಳೆ ತೊಳೆಯುತ್ತಿರುವ ಇವರಿಗೆ ಸ್ವಂತ ಮನೆ ಇಲ್ಲ. ಅವರ ಆರೋಗ್ಯ ರಕ್ಷಣಾ ಪರಿಕರಗಳನ್ನು ಒದಗಿಸುತ್ತಿಲ್ಲ. ಇಂದಿಗೂ ಹಲವಾರು ರೋಗ ರುಜಿನಗಳಿಗೆ ತುತ್ತಾಗಿ ಮರಣ ಹೊಂದುತ್ತಿದ್ದು, ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಪೌರಕಾರ್ಮಿಕರ ಜಯಂತಿಯನ್ನು ಒಂದು ದಿನದ ಮಟ್ಟಿಗೆ ಕಾಟಾಚಾರಕ್ಕೆ ಆಚರಿಸುವುದರಿಂದ ಪ್ರಯೋಜನವಿಲ್ಲ. ಅವರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಕಾರ್ಯಪ್ರವೃತ್ತರಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ವಿದ್ಯುತ್‌ ಉತ್ಪಾದನೆ ಕುಸಿದಿರುವುದು ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಎಸ್ ಡಿ ಮಂಜುನಾಥ್, ಪುರಸಭಾ ಆರೋಗ್ಯಧಿಕಾರಿ ಜ್ಯೋತಿ ಲೋಹಿತ್, ಶಿಕ್ಷಕ ಸಂಪತ್, ಪ್ರದೀಪ್, ಮೆಜೆಸ್ಟಿಕ್ ಅಕ್ಬರ್, ಕೀರ್ತಿ ಬಿ ಎ, ಸುನಿಲ್ ರಾಯಪುರ, ವಿಶ್ವ ಓಬಳೇಶ್, ಶಿವಣ್ಣ ಹಾಗೂ ಪುರಸಭಾ ಸಿಬ್ಬಂದಿ ಇದ್ದರು.

ಗುರುವಾರ ರಾತ್ರಿ 8 ಗಂಟೆಗೆ 24×7 ಸಮಾಜಸೇವಾ ತಂಡದ ಸದಸ್ಯರು ಎರಡು ಟ್ರಾಕ್ಟರ್‌ಗೆ ತಲಾ 4 ಮಂದಿ ಸಮಾಜಸೇವಾ ತಂಡದ ಸದಸ್ಯರು ಪೌರಕಾರ್ಮಿಕರೊಡಗೂಡಿ ಕ್ಷಣಮಾತ್ರದಲ್ಲಿ ಬೇಲೂರಿನ ಬೀದಿಗಳ ಕಸ ತೆಗೆದು ಸ್ವಚ್ಛಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...