ಹಾಸನ | ಮದ್ಯ ಸೇವಿಸುವ ಪಂದ್ಯ; ಓರ್ವನ ಸಾವಿನಲ್ಲಿ ಅಂತ್ಯ

Date:

ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮದ್ಯ ಸೇವಿಸುವ ಪಂದ್ಯ​​ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ತಿಮ್ಮೇಗೌಡ (60) ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜು ಹಾಗೂ ತಿಮ್ಮೇಗೌಡ ಎಂಬುವವರ ನಡುವೆ ಪಂದ್ಯ ನಡೆದಿದ್ದು, ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೆಟ್ ಮದ್ಯ ಕುಡಿಯುವಂತೆ ಪಂದ್ಯದಲ್ಲಿ ಸೂಚಿಸಲಾಗಿತ್ತು.

ಕೃಷ್ಣೇಗೌಡ ಎಂಬವರು ಇಬ್ಬರಿಗೂ ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದರು. ಚಾಲೆಂಜ್‌ಗಾಗಿ ಮದ್ಯ ಕುಡಿದು ರಕ್ತ ವಾಂತಿ ಮಾಡಿಕೊಂಡು ಬಸ್ ನಿಲ್ದಾಣದಲ್ಲೇ ತಿಮ್ಮೇಗೌಡ ಬಿದ್ದಿದ್ದಾರೆ. ತಿಮ್ಮೇಗೌಡ ವಾಂತಿ ಮಾಡುತ್ತಿದ್ದಂತೆಯೇ ದೇವರಾಜು ಮತ್ತು ಕೃಷ್ಣೇಗೌಡ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಸ್ಥರು ತಿಮ್ಮೇಗೌಡನನ್ನು ಎತ್ತಿಕೊಂಡು ಬಂದು ಮನೆಯಲ್ಲಿ ಮಲಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ‌ ನಿತ್ರಾಣವಾಗಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ತಿಮ್ಮೇಗೌಡನ ಪುತ್ರಿ ಹಬ್ಬಕ್ಕಾಗಿ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಗೆ ಬಂದು ತನ್ನ ತಂದೆ ರಕ್ತಕಾರಿ ಮಲಗಿದ್ದನ್ನ ಕಂಡು ಎಬ್ಬಿಸಲು ಯತ್ನಿಸಿದಾಗ ಮೃತಪಟ್ಟಿರುವುದು ತಿಳಿದಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ; ತಂಬಾಕು ಉತ್ಪನ್ನ ಖರೀದಿ ವಯೋಮಿತಿ 21 ವರ್ಷಕ್ಕೆ ಏರಿಕೆ: ದಿನೇಶ್ ಗುಂಡೂರಾವ್

ಘಟನೆ ಸಂಬಂಧ ತಿಮ್ಮೇಗೌಡನ ಪುತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹೊಳೆನರಸೀಪುರ ನಗರ ಠಾಣೆ ಪೊಲೀಸರು ದೇವರಾಜು ಹಾಗೂ ಕೃಷ್ಣೇಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಕವಯಿತ್ರಿ, ಅನುವಾದಕಿ, ಕಲಾವಿದೆ- ಎಂ.ಆರ್. ಕಮಲ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...