ಗದಗ | ಆಳವಾದ ಅಧ್ಯಯನ ನಡೆಸಿ ‘ಹಾವಳಿ’ ಕಾದಂಬರಿ ರಚಿಸಲಾಗಿದೆ: ಪವಣ ಕುಮಾರ್ ಕೆ ಪಿ

Date:

‘ಹಾವಳಿ’ ಕಾದಂಬರಿಯು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯ ಕಾದಂಬರಿಯಾಗಿದೆ. ಆಳವಾದ ಅಧ್ಯಯನ ನಡೆಸಿ ‘ಹಾವಳಿ’ ಕಾದಂಬರಿಯನ್ನು ಪ್ರೊ ಮಲ್ಲಿಕಾರ್ಜುನ ಹಿರೇಮಠ್ ಅವರು ರಚಿಸಿದ್ದಾರೆ ಎಂದು ಪವಣಕುಮಾರ್ ಕೆ ಪಿ ಹೇಳಿದರು.

ಗದಗ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರೊ ಮಲ್ಲಿಕಾರ್ಜುನ ಹಿರೇಮಠ ಅವರ ಹಾವಳಿ ಕಾದಂಬರಿಯ ಅವಲೋಕನ ಕಾರ್ಯಕ್ರಮವನ್ನು ಕಸಾಪ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಹಾವಳಿ ಕಾದಂಬರಿಯ ಅವಲೋಕನ ಕುರಿತು ಪವನಕುಮಾರ್ ಕೆ ಪಿ ಉಪನ್ಯಾಸ ನೀಡಿ ಮಾತನಾಡಿ, ಹೈದರಾಬಾದ್ ವಿಮೋಚನಾ ಚಳುವಳಿಯ ಪ್ರಧಾನ ಅಂಶವೇ ಕಾದಂಬರಿ ಆಗಿರುತ್ತದೆ. ಈ ಪ್ರದೇಶದಲ್ಲಿ ಚಳುವಳಿಗಾರರನ್ನು ಭೇಟಿ ಮಾಡಿ, ಸುಮಾರು ವರ್ಷಗಳಿಂದ ಆಳವಾದ ಅಧ್ಯಯನ ನಡೆಸಿ ಹಾವಳಿ ಪ್ರೊ ಮಲ್ಲಿಕಾರ್ಜುನ ಹಿರೇಮಠ್ ಅವರು ರಚಿಸಿದ್ದಾರೆ. ಹಾವಳಿ ಕಾದಂಬರಿಯು ಗ್ರಾಮೀಣ ಭಾಷೆ ಹೊಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಎರಡು ಭಾಷೆಗಳ ಸಮ್ಮಿಲನಗೊಳಿಸಿ, ಐತಿಹಾಸಿಕ ಸಂಗತಿಯನ್ನು ವಾಸ್ತವಿಕವಾಗಿ ಕಾದಂಬರಿಯನ್ನು ರಚಿಸಿದ್ದಾರೆ. ಗ್ರಾಮೀಣ ಚೌಕಟ್ಟಿನಲ್ಲಿ ಭವ್ಯ ಭಾರತೀಯ ಚಿಂತನೆಯನ್ನು ಕಾದಂಬರಿಯಲ್ಲಿ ಬಸಾಪುರ ಗ್ರಾಮದ ಮೂಲಕ ಕಟ್ಟಿಕೊಟ್ಟಿದ್ದಾರೆ. ಐತಿಹಾಸಿಕ ವ್ಯಕ್ತಿಗಳಾದ ಸುಭಾಸ್ ಚಂದ್ರಬೋಸ್, ಮಹಾತ್ಮಾ ಗಾಂಧೀಜಿ, ಸರ್ದಾರ್ ವಲ್ಲಭಾಯಿ ಪಟೇಲ್ ಅವರನ್ನು ಪರೋಕ್ಷವಾಗಿ ಪಾತ್ರಗಳ ಮೂಲಕ ಕಾದಂಬರಿಯಲ್ಲಿ ಹೇಳುತ್ತಾ ಹೋಗುತ್ತಾರೆ” ಎಂದು ಹೇಳಿದರು.

ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಗಳಲ್ಲಿ ಗದಗ, ಮುಂಡರಗಿ, ಗಜೇಂದ್ರಗಡ ಮುಖ್ಯ ಆಗುತ್ತವೆ. ಇಲ್ಲಿ ಅನೇಕ ಹೋರಾಟ ಮಾಡುವ ಯುವಕರಿಗೆ ಇಲ್ಲಿ ಶಿಬಿರಗಳನ್ನು ಏರ್ಪಡಿಸಿ ತರಬೇತಿಯನ್ನು ನೀಡಲಾಗುತ್ತಿತ್ತು. ಅಷ್ಟೇ ಅಲ್ಲದೇ ಕಪ್ಪತ್ತಗುಡ್ಡದ ಹಸಿರು ಸಿರಿಯನ್ನು ಕಾದಂಬರಿಯಲ್ಲಿ ತುಂಬಾ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಕಾದಂಬರಿಯಲ್ಲಿ ಹಲವು ಪಾತ್ರಗಳ ಮೂಲಕ ಸೂಕ್ಷ್ಮ ಸಂವೇದನೆಯನ್ನು ಹೇಳುತ್ತಾ ಹೋಗುತ್ತಾರೆ ಎಂದರು.

ವಾಸ್ತವದಲ್ಲಿ ಕೋಮುವಾದ ಆವರಿಸಿಕೊಂಡಿದ್ದು ಅನಕ್ಷರಸ್ಥರ ಪಾತ್ರಗಳ ಮೂಲಕ ಮಲ್ಲಿಕಾರ್ಜುನ ಹಿರೇಮಠ್ ಅವರು ನೈತಿಕತೆ ಪಾಠವನ್ನು ಕಟ್ಟಿಕೊಡುತ್ತಾರೆ ಎಂದು ಪವಣಕುಮರ್ ಕೆ ಪಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳು ಪ್ರೊ ಅನ್ನದಾನಿ ಹಿರೇಮಠ್ ಮಾತನಾಡಿ, “ಹಾವಳಿ ಕಾದಂಬರಿಯು ಓದುತ್ತಿರುವವರಿಗೆ ಐತಿಹಾಸಿಕ ಕಾದಂಬರಿ ಅನಿಸಬಹುದು. ಆದರೆ ನಮ್ಮ ಸುತ್ತ ಮುತ್ತ ನಡೆಯುವ ಕೌಟುಂಬಿಕ ಜೀವನವೇ ಆಗಿದ್ದು, ಸ್ವಾತಂತ್ರ್ಯ ಪೂರ್ವದ ಕಥೆಯಾಗಿದೆ” ಎಂದರು.

ಕಸಾಪ ಅಧ್ಯಕ್ಷರಾದ ವಿವೇಕಾನಂದ ಪಾಟೀಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಸಾಪ ಗೌರವ ಕೋಶಾಧ್ಯಕ್ಷ ಡಿ ಎಸ್ ಭಾಪುರಿ, ಕಿಶೋರ್ ಕುಮಾರ್ ನಗರಕಟ್ಟೆ, ಶಿವಾನಂದ ಗಿಡ್ನಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...