ಹಾವೇರಿ | ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ; ವಿಜ್ಞಾನಿಗಳ ಎಚ್ಚರಿಕೆ

Date:

ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಉಂಟಾದ ಮಳೆಯ ಅಭಾವದಿಂದ ಅಂತರ್ಜಲ ಮಟ್ಟದಲ್ಲಿ ಭಾರಿಕುಸಿತ ಉಂಟಾಗಿದ್ದು ಕಳೆದ ಐದು ವರ್ಷಗಳಲ್ಲೇ ಈ ವರ್ಷ ಗರಿಷ್ಠ ಕುಸಿತ ಕಂಡಿದೆ. 2019 ಅಕ್ಟೋಬರ್‌ ಅಂತ್ಯಕ್ಕೆ 6.95ಮೀಟರ್‌ ಇದ್ದ ಅಂತರ್ಜಲ ಮಟ್ಟವು 2023ರಲ್ಲಿ ಬರೋಬ್ಬರಿ 11.05 ಮೀಟರ್‌ಗೆ ಕುಸಿದಿದೆ.

ಅಂದರೆ ಬರೋಬ್ಬರಿ 4 ಮೀಟರ್‌ನಷ್ಟು ಇಳಿಕೆಯಾಗಿದೆ. ಜಿಲ್ಲೆಯ ವಾರ್ಷಿಕ ಸರಾಸರಿ ಅಂತರ್ಜಲ ಮಟ್ಟ 2019ರಲ್ಲಿ 17.12 ಮೀ., 2020ರಲ್ಲಿ 11.47 ಮೀ., 2021ರಲ್ಲಿ 9.59 ಮೀ., 2022ರಲ್ಲಿ 7.90 ಮೀಟರ್‌ನಷ್ಟು ಇದ್ದ ಅಂತರ್ಜಲ ಮಟ್ಟ 2023ರಲ್ಲಿ 12.24ಕ್ಕೆ ಕುಸಿದಿದೆ.

ಅಂತರ್ಜಲ ಮೌಲೀಕರಣ 2020ರ ಪ್ರಕಾರ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ, ಬ್ಯಾಡಗಿ, ಹಿರೇಕೆರೂರ ಮತ್ತು ರಾಣೆಬೆನ್ನೂರು ತಾಲೂಕುಗಳಲ್ಲಿ ಅಂತರ್ಜಲ ಅತಿ ಬಳಕೆಯಾಗುತ್ತಿದೆ. ಅಂತರ್ಜಲದ ಅತಿಯಾದ ಬಳಕೆಯಿಂದ ಕೊಳವೆಬಾವಿಗಳು ಬತ್ತುತ್ತಿದ್ದು, ರೈತರು ಬೇಸಿಗೆ ಮತ್ತು ಬರಗಾಲದ ಸಂದರ್ಭದಲ್ಲಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಭಾಗ ದಕ್ಷಿಣ ಪ್ರಸ್ಥಭೂಮಿಯಾಗಿದ್ದು, ರಾಜ್ಯದ ಮಧ್ಯಭಾಗದಲ್ಲಿದೆ. ಅರೆ ಮಲೆನಾಡು ಮತ್ತು ಅರೆ ಉಷ್ಣವಲಯ ಪ್ರದೇಶವಾಗಿದೆ. ಜಿಲ್ಲೆಗೆ ಮೇ ತಿಂಗಳಿಂದ ಅಕ್ಟೋಬರ್‌ ತಿಂಗಳವರೆಗೆ ನೈರುತ್ಯ ಮಾನ್ಸೂನ್‌ ಮಳೆ ಬೀಳುತ್ತದೆ. ನವೆಂಬರ್‌ನಿಂದ ಡಿಸೆಂಬರ್‌ವರೆಗೆ ಈಶಾನ್ಯ ಮಾನ್ಸೂನ್‌ಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತದೆ.

ಮಳೆಯ ಅಭಾವದಿಂದ ಜಿಲ್ಲೆಯ ಎಂಟು ತಾಲ್ಲೂಕುಗಳಲ್ಲಿ ಬರಗಾಲದ ಕಾರ್ಮೋಡ ಕವಿದಿದೆ. ಮಳೆಯ ಕೊರತೆಯೇ ಅಂತರ್ಜಲ ಮಟ್ಟ ವ್ಯಾಪಕವಾಗಿ ಕುಸಿಯಲು ಪ್ರಮುಖ ಕಾರಣ ಎನ್ನುತ್ತಾರೆ ಭೂವಿಜ್ಞಾನಿಗಳು.

ಜನವರಿಯಿಂದ ಮೇ ತಿಂಗಳವರೆಗೆ 120 ಮಿ.ಮೀ. ವಾಡಿಕೆ ಮಳೆಗೆ ಈ ಬಾರಿ ಜಿಲ್ಲೆಯಲ್ಲಿ 83 ಮಿ.ಮೀ. ಮಾತ್ರ ಮಳೆಯಾಗಿತ್ತು. ಅಂದರೆ, ಶೇ. 31ರಷ್ಟು ಕೊರತೆಯಾಗಿತ್ತು. ಜೂನ್ ತಿಂಗಳಲ್ಲಿ 119 ಮಿ.ಮೀ. ವಾಡಿಕೆ ಮಳೆಗೆ 48 ಮಿ.ಮೀ. ಮಳೆ ಬಿದ್ದು, ಶೇ. 60ರಷ್ಟು ಮಳೆ ಕೊರತೆ ಉಂಟಾಗಿದೆ.

ಜುಲೈನಲ್ಲಿ 164 ಮಿ.ಮೀ. ವಾಡಿಕೆ ಮಳೆಗೆ ಬರೋಬ್ಬರಿ 229 ಮಿ.ಮೀ. ಧಾರಾಕಾರ ಮಳೆ ಸುರಿಯಿತು. ಆಗಸ್ಟ್‌ನಲ್ಲಿ 127 ಮಿ.ಮೀ. ವಾಡಿಕೆ ಮಳೆಗೆ ಕೇವಲ 27 ಮಿ.ಮೀ. ಮಳೆಯಾದ ಕಾರಣ ಕೃಷಿ ಬೆಳೆಗಳು ಒಣಗಿದವು. ಸೆಪ್ಟೆಂಬರ್ ತಿಂಗಳಲ್ಲಿ 107 ಮಿ.ಮೀ. ವಾಡಿಕೆ ಮಳೆಗೆ ಕೇವಲ 39 ಮಿ.ಮೀ. ಮಳೆಯಾಗಿದ್ದು, ಶೇ 63ರಷ್ಟು ಮಳೆ ಕೊರತೆಯಾಗಿದೆ. ಅಕ್ಟೋಬರ್‌ನಲ್ಲಿ ಮುರ್ನಾಲ್ಕು ದಿನಗಳು ಮಾತ್ರ ತುಂತುರು ಮಳೆ ಬಿದ್ದಿದೆ.

ನೀರಿನ ಅಪವ್ಯಯ ಮತ್ತು ಅಂತರ್ಜಲದ ಅತಿ ಬಳಕೆ ಇದೇ ರೀತಿ ಮುಂದುವರಿದರೆ 2080ರ ವೇಳೆಗೆ ದೇಶದಲ್ಲಿ ಸದ್ಯದ ಸ್ಥಿತಿಗಿಂತ ಅಂತರ್ಜಲ ಮಟ್ಟ ಮೂರು ಪಟ್ಟು ಕುಸಿಯಲಿದೆ. ಇದು ಆಹಾರ ಮತ್ತು ನೀರಿನ ಅಭಾವ ಸೃಷ್ಟಿಗೂ ಕಾರಣವಾಗಲಿದೆ ಎಂದು ಅಧ್ಯಯನವೊಂದು ತಿಳಿಸಿದ್ದು, ಇದು ಎಚ್ಚರಿಕೆಯ ಗಂಟೆಯಾಗಿದೆ ಎನ್ನುತ್ತಿದ್ದಾರೆ ವಿಜ್ಞಾನಿಗಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...