ಹಾವೇರಿ | ಪ್ರೀತಿ ವಂಚಿತ ಮಕ್ಕಳೊಂದಿಗೆ ಸರಳ ದೀಪಾವಳಿ

Date:

ಮನೆಯಿಂದ ದೂರವಾದ, ಪ್ರೀತಿ ವಂಚಿತ ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡುವ ಮೂಲಕ ಅರ್ಥಪೂರ್ಣ, ಸರಳ ದೀಪಾವಳಿಯನ್ನು ಆಚರಿಸಲಾಯಿತು.

ಹಾವೇರಿ ಪಟ್ಟಣದ ಉದಯ ನಗರ ಅಂಚಿನ ಹೊರ ವಲಯದಲ್ಲಿರುವ ಶ್ರೀಶಕ್ತಿ ತೆರತೆದ ತಂಗುದಾಣದಲ್ಲಿ ನಿರ್ಗತಿಕರ ಮಕ್ಕಳೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.

“ತಂದೆ ತಾಯಿ, ಮನೆ ಮಂದಿಯ ಪ್ರೀತಿಯಿಂದ ವಂಚಿತವಾಗಿರುವ ಮಕ್ಕಳ ಜೊತೆಗೆ ನಮ್ಮ ದೀಪಾವಳಿಯನ್ನು ಆಚರಿಸುವುದು ನಿಜ ಅರ್ಥದ ದೀಪಾವಳಿ ಆಗಿದೆ” ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“೧೯ ಮಕ್ಕಳಿಗೆ ಹೊಸ ಬಟ್ಟೆಗಳನ್ನು ವಿತರಿಸಿದ ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅವರು “ಅವಜ್ಞೆಗೆ ಈಡಾದ, ಮುಗ್ಧ ಮಕ್ಕಳೊಂದಿಗೆ ದೀಪಾವಳಿಯಂತಹ ಸಂತೋಷದ ಕ್ಷಣ ಕಳೆಯುವುದೇ ಸೌಭಾಗ್ಯ” ಎಂದರು.

ಸಾಮಾಜಿಕ ಕಾರ್ಯಕರ್ತೆ ಹಸೀನಾ ಹೆಡಿಯಾಲ ಮಾತನಾಡಿ,”ಮಕ್ಕಳು ಮಕ್ಕಳೇ, ಅವರಿಗೆ ದುಡ್ಡಿಗಿಂತ ಪ್ರೀತಿಯೇ ಮುಖ್ಯವಾಗಿರುತ್ತದೆ. ಸಮಾಜವನ್ನು ಪ್ರೀತಿಸುವವರು ಇಂತಹ ಪ್ರೀತಿಯನ್ನು ವಿಶೇಷವಾಗಿ ನಿರ್ಗತಿಕ ಮಕ್ಕಳಿಗೆ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯೋತ್ಸವ ಪ್ರಶಸ್ತಿ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರನ್ನೂ ನೇಮಕ ಮಾಡಲು ಆಗ್ರಹ

ಸಮಾರಂಭದಲ್ಲಿ ಸಾಂಸ್ಥಿಕ ರಕ್ಷಣಾಧಿಕಾರಿ ಶ್ರೀಮತಿ ಮಂಗಳಾ ಅಳಗುಂಡಗಿ, ತೆರೆದ ತಂಗುದಾಣದ ನಿರ್ವಾಹಕ ಪುಟ್ಟಪ್ಪ ಹರವಿ, ಮನೋಜ ಹಿರೇಮಠ, ಪ್ರಬಾ ಸಾಲಿಮಠ, ಉಮಾ ಹಂಚಿನಮನಿ, ದೀಪಾ ಹೊಳೆಯಪ್ಪನವರ, ಸಾಂತ್ವನ ಮಹಿಳಾ ಸಹಾಯಕ ಸಿಬ್ಬಂದಿಗಳಾದ ಪಾರ್ವತಿ ಎಲ್. ಲಕ್ಷ್ಮೀ ಸಿಂಗಣ್ಣನವರ ಹಾಗೂ ಜಿಲ್ಲಾ ಪೊಲೀಸ ಘಟಕದ ಹವಾಲ್ದಾರ ಎಚ್.ಡಿ. ಪವಾರ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...