ಹಾವೇರಿ | ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

Date:

ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಬೇಕು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಧರಣಿ ಆರಂಭಿಸಿರುವ ರೈತರು, ತಮ್ಮ ಬೇಡಿಕೆ ಈಡೇರಿಸುವವರೆಗೂ ಸ್ಥಳದಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಹಾಕಿರುವ ಟೆಂಟ್’ನಲ್ಲೇ ಕುಳಿತು ಧರಣಿ ಮುಂದುವರಿಸಿದ್ದಾರೆ.

ಸ್ಥಳದಲ್ಲಿಯೇ ಅಡುಗೆ ಸಿದ್ಧಪಡಿಸಿ ಊಟ ಮಾಡುತ್ತಿರುವ ರೈತರು ರಾತ್ರಿಯೂ ಟೆಂಟ್ನಲ್ಲಿ ಮಲಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಜಿಲ್ಲೆಯ ತಾಲೂಕುವಾರು ರೈತರು ಧರಣಿಯಲ್ಲಿ ಪಾಲ್ಗೊಂಡಿದ್ದು, ಧರಣಿಯ ಐದನೇ ದಿನವಾಗಿದ್ದ ಬುಧವಾರ, ರಟ್ಟೀಹಳ್ಳಿ ತಾಲ್ಲೂಕು ರೈತರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಕೃಷಿ ಚಟುವಟಿಕೆ ಹಾಗೂ ನೀರಾವರಿಗೆ ಅನುಕೂಲ ಕಲ್ಪಿಸಲು ಬೇಡ್ತಿ-ವರದಾ ನದಿ ಜೋಡಣೆ ಮಾಡಬೇಕು. ನಬಾರ್ಡ್ನಿಂದ ರೈತರಿಗೆ ಸೂಕ್ತ ಸಾಲ ಸೌಲಭ್ಯ ಕಲ್ಪಿಸಬೇಕು. ಬೆಳೆ ಹಾನಿ ಅನುಭವಿಸಿರುವ ಜಿಲ್ಲೆಯ ರೈತರಿಗೆ ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿ, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗುತ್ತಿದ್ದಾರೆ. ರೈತರ ಜಮೀನಿನಲ್ಲಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಲಾಗುತ್ತಿದ್ದು, ಈ ಕೂಡಲೇ ರೈತರ ಜಮೀನಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹಾವೇರಿ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ಅಗತ್ಯವಿದ್ದು, ಇದಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಈ ಬಾರಿ ಡಿಸಿಸಿ ಬ್ಯಾಂಕ್ ಸ್ಥಾಪನೆ ಬಗ್ಗೆ ಸರ್ಕಾರ ತೀರ್ಮಾನ ತಿಳಿಸಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ಜಿಲ್ಲೆಯ ಪ್ರತಿ ತಾಲ್ಲೂಕಿನ ರೈತರು, ಸರದಿ ಪ್ರಕಾರ ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ಭೋವಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬೆಳಗಾವಿ ಚಲೋ ಪಾದಯಾತ್ರೆ

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೆರ, ಮಲ್ಲಿಕಾರ್ಜುನ ಬಳ್ಳಾರಿ, ಅಡಿವೆಪ್ಪ ಆಲದಕಟ್ಟಿ, ಶಿವಯೋಗಿ ಚ ಹೊಸಗೌಡ್ರ, ಜಾನ್ ಪುನಿತ್ಮ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ, ಬಸವರಾಜ ಕಡೂರ, ಲೋಕೆಶ ಸುತಾರ, ಸುರೇಶ್ ದುಳೆಹೊಳೆ, ರಮೇಶ್ ಮುಲಿಮನಿ, ಜಟ್ಟೆಪ್ಪ ಕನ್ನಪ್ಪನವರ, ಆನಂದಪ್ಪ ಬಣಕಾರ, ಸಂಜಿವ ಬಾತಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...