ಹಾವೇರಿ | ಗುತ್ತಲ ಗ್ರಾಮದ ನೀರಿನ ಹೊಂಡ ಸ್ವಚ್ಛಗೊಳಿಸಲು ಕರವೇ ಮನವಿ

Date:

“ಗುತ್ತಲ ಪಟ್ಟಣ ಪಂಚಾಯತಿಗೆ ಸಂಬಂಧ ಪಟ್ಟ ರಾಣೇಬೆನ್ನೂರ ರಸ್ತೆಯಲ್ಲಿರುವ ನೀರಿನ ಹೊಂಡದಲ್ಲಿ ಅಂತರ ಗಂಗೆ(ಪಿಸಾಚಿ ಕಳೆ) ಬಳ್ಳಿಯು ಹೊಂಡದ ಪೂರ್ಣ ಪ್ರಮಾಣದಲ್ಲಿ ಹಬ್ಬಿದೆ. ಇದರಿಂದ ನೀರಿನ ಮಟ್ಟ ಕಡಿಮೆ ಆಗುತ್ತಿದೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಕುಡಿಯಲು ತೊಂದರೆ ಆಗುತ್ತಿದೆ” ಎಂದು ಕರವೇ ಹಾವೇರಿ ತಾಲ್ಲೂಕು ಅಧ್ಯಕ್ಷ ಹಾಲೇಶ ಹಾಲಣ್ಣವರ ಒತ್ತಾಯಿಸಿದರು.

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಗ್ರಾಮ ಮುಖ್ಯಧಿಕಾರಿಗಳಿಗೆ ಗುತ್ತಲ ಪಟ್ಟಣದ ರಾಣೇಬೆನ್ನೂರ ರಸ್ತೆಯಲ್ಲಿರುವ ನೀರಿನ ಹೊಂಡವನ್ನು ಸ್ವಚ್ಛಗೊಳಿಸಲು ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿ ಅವರು ಮಾತನಾಡಿದರು.

“ಕಾಲ ಬದಲಾದಂತೆ ಬೋರ್‌ವೆಲ್ ಕೊರೆವ ವ್ಯವಸ್ಥೆ ಬಂದ ಮೇಲೆ, ಮನೆ ಮನೆಗೆ ನಲ್ಲಿ ಮೂಲಕ ನೀರಿನ ವ್ಯವಸ್ಥೆ ಮಾಡಿದ ಪರಿಣಾಮ ಈ ಹೊಂಡಗಳು ನಿರ್ಲಕ್ಷಕ್ಕೆ ಒಳಗಾಗುತ್ತಿವೆ. ಹೊಂಡವನ್ನು ಸಂಪೂರ್ಣವಾಗಿ ಅಂತರ ಗಂಗೆ(ಪಿಸಾಚಿ ಕಳೆ) ಬಳ್ಳಿ ಆವರಿಸಿರುವುದರಿಂದ ಹಾಗೂ ಪಟ್ಟಣದ ಒಳಚರಂಡಿಯ ನೀರು ಹಲವು ತ್ಯಾಜ್ಯ ವಸ್ತುಗಳು ಹೊಂಡದಲ್ಲಿ ಸಂಗ್ರಹವಾಗುವುದರಿಂದ ಹೊಂಡದ ಸುತ್ತಮುತ್ತ ದುರ್ವಾಸನೆ ಹಾಗೂ ಸಾಂಕ್ರಾಮಿಕ ರೋಗ ಹರಡುವ ತಾಣವಾಗಿದೆ. ಈ ವಿಚಾರವಾಗಿ ಪ.ಪಂಚಾಯತಿ ಒಂಚೂರು ಗಮನ ಹರಿಸುತ್ತಿಲ್ಲ” ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದಲ್ಲದೆ ಕೆರೆ ಸುತ್ತಲೂ ಗಿಡಗಂಟೆಗಳು ಬೆಳೆದಿವೆ ಹೊಂಡದ ದಡವು ಬಯಲು ವಿಸರ್ಜನೆ ಜಾಗವಾಗಿ ಬಳಕೆಯಾಗುತ್ತಿದೆ. ಸೊಳ್ಳೆ, ಹಾವು, ಹುಳುಗಳು ಹಾಗೂ ದುರ್ನಾತದ ಹಾವಳಿ ಹೆಚ್ಚಾಗಿದೆ. ಪಟ್ಟಣದ ಹೊಂಡವನ್ನು ಅಭಿವೃದ್ಧಿ ಮಾಡಿದರೆ ನೀರಿನ ಅಭಾವ ತಡೆಯಬಹುದು ಹಾಗೂ ಅಂತರ್ಜಲ ಮಟ್ಟವನ್ನು ವೃದ್ಧಿಸಬಹುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಲು ಸಚಿವರು ಹೆಚ್. ಕೆ. ಪಾಟೀಲರಿಗೆ ಒತ್ತಾಯ

“ಕ್ಷೇತ್ರದ ಶಾಸಕರು, ಪ್ರಪಂಚಾಯತಿ ಆಡಳಿತ ಮಂಡಳಿ ಹಾಗೂ ಪ.ಪಂಚಾಯತಿ ಅಧಿಕಾರಿಗಳು ಹೊಂಡದ ಸ್ವಚ್ಚತೆಗೆ ಗಮನ ಹರಿಸಬೇಕು. ಈ ಸಮಸ್ಯೆ ಬೇಗನೆ ನಿವಾರಣೆ ಆಗದಿದ್ದರೆ ಊರಿನ ಹಿರಿಯರ ಸಮ್ಮುಖದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತ ರಿಂದ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...