ಹಾವೇರಿ | ಸಮೀಕ್ಷೆ ವೇಳೆ ಮಾದಾರ, ಮಾದಿಗ ಎಂದು ನಮೂದಿಸಲು ಸಮುದಾಯಕ್ಕೆ ಮನವಿ

Date:

ಪರಿಶಿಷ್ಟ ಜಾತಿಗಳ ಎಲ್ಲಾ ಕುಟುಂಬಗಳ ನಿಖರ ಮಾಹಿತಿಗಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗುತ್ತಿದ್ದು, ಅಧಿಕಾರಿಗಳು ಸಮೀಕ್ಷೆಗೆ ಬಂದಾಗ ಮಾದಿಗ ಅಥವಾ ಮಾದರ ಎಂದು ನಮೂದಿಸಬೇಕು ಎಂದು ಮಾದಿಗರ ಸಮಾಜದ ಮುಖಂಡ ಉಡಚಪ್ಪ ಮಾಳಗಿ ಹೇಳಿದರು.

ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ಕುರಿತು ಕರೆಯಲಾದ ಜಿಲ್ಲಾ ಮಟ್ಟದ ಮಾದಿಗ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು.

ಒಳಮೀಸಲಾತಿ ಸಮೀಕ್ಷೆ ಏ.6 ರಿಂದ ಪ್ರಾರಂಭವಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಸಮೀಕ್ಷೆಯ ಅಧಿಕಾರಿಗಳು ಆಗಮಿಸಿದಾಗ ಪರಿಶಿಷ್ಟ ಜಾತಿಗಳ ಸಮೀಕ್ಷೆಗೆ ಸಹಕಾರ ನೀಡುವ ಕೆಲಸವಾಗಬೇಕು. ಪರಿಶಿಷ್ಟ ಜಾತಿಯ ಆದಿ ಜಾಂಬವ, ಆದಿ ಡ್ರಾವಿಡ, ಎಸ್‌ಸಿ, ಆದಿ ಕರ್ನಾಟಕ ಹಾಗೂ ಹರಿಜನ ಪದಗಳನ್ನು ಬರೆಸಿರುವ ಮಾದಿಗ ಹಾಗೂ ಮಾದರ ಸಮುದಾಯದವರು ಜಾತಿ ಕಾಲಂನಲ್ಲಿ ಮಾದಿಗ ಅಥವಾ ಮಾದರ ಎಂದು ಬರೆಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಬೇರೆ ಪದಗಳನ್ನು ಬಳಸಿ ನಮಗೆ ಸಿಗಬಹುದಾಗ ಸೌಲಭ್ಯಗಳನ್ನು ಪಡೆಯುವ ಪ್ರಸಂಗಗಳು ಕಂಡು ಬರುತ್ತಿದೆ. ನಮ್ಮ ಸಮುದಾಯ ಸರ್ಕಾರಗಳ ಸೌಲಭ್ಯ ಪಡೆದು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕಾಗಿದೆ. ಸಮೀಕ್ಷೆ ಸಮಯದಲ್ಲಿ ಜಾಗೃತಿವಹಿಸುವುದು ಅಗತ್ಯವಾಗಿದ್ದು, ಏನಾದರೂ ತಮಗೆ ಹೆಚ್ಚಿನ ಮಾಹಿತಿ ಬೇಕಾದರೆ ಮಾದಿಗ ಸಮುದಾಯದ ಮುಖಂಡರುಗಳನ್ನು ಸಂಪರ್ಕಿಸಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹಾವೇರಿ | ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕೊಳೆತ ಆಹಾರ ಪೂರೈಕೆ: ಎಸ್ಎಫ್ಐ ಆರೋಪ

ಸಭೆಯಲ್ಲಿ ಸಮುದಾಯದ ಮುಖಂಡ ಬಸವರಾಜ ಹೆಡಿಗೊಂಡ, ಎಸ್ ಜಿ ಹೊನ್ನಪ್ಪನವರ, ಏಳಕೊಟೆಪ್ಪ ಎಸ್ ಪಾಟೀಲ, ಅಶೋಕ ಮರೆಯಣ್ಣನವರ, ಸಂಜಯಗಾಂಧಿ ಸಂಜೀವಣ್ಣನವರ, ಮಾರುತಿ ಸೊಟ್ಟಪ್ಪನವರ, ಸುರೇಶ ಅಳ್ಳಳ್ಳಿ, ಭೀಮಣ್ಣ ಯಲ್ಲಾಪುರ, ಶಿವಣ್ಣ ನಾಗಮ್ಮನವರ, ಮಂಜು ವಡ್ಡರ, ಯಲ್ಲಪ್ಪ ಅಂದಲಗಿ, ನಾಗರಾಜ ಮಾಳಮ್ಮನವರ, ಹನಮಂತ ಹಲಗೇರಿ, ಮಂಜು ದಿಡಗೂರ, ಗುಡ್ಡಪ್ಪ ಬಣಕಾರ, ಸುನೀಲ ಕಡೂರ, ನೀಲಪ್ಪ ದೇವರಮನಿ, ನಿಂಗಪ್ಪ ಹರಿಜನ, ಫಕ್ಕಿರೇಶ ಪುರದ, ಮಾರುತಿ ಬಣಕಾರ, ಗುತ್ತೆಪ್ಪ ಆಲದಕಟ್ಟಿ, ನವೀನ ಸಿದ್ದಣ್ಣನವರ, ಜಗದೀಶ ಹರಿಜನ, ನಾಗರಾಜ ಬಣಕಾರ ಸೇರಿದಂತೆ ಮಾದಿಗರ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...