ಹಾವೇರಿ | ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ನೇಮಕ; ಖಾಯಂ ನೇಮಕಾತಿಗೆ ಡಿವೈಎಫ್ಐ ಆಗ್ರಹ

Date:

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ 310 ಪ್ರಾಂಶುಪಾಲರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ನೇಮಕ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.

ಹಾವೇರಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಪ್ರಾಂಶುಪಾಲರ ನೇರ‌ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆಯ ಮೂಲಕ, ಸರ್ಕಾರ ಐದು ವರ್ಷಗಳ ಅವಧಿಗೆ ಮಾತ್ರ ಗುತ್ತಿಗೆಯಾಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದ 434 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 400 ಪ್ರಾಂಶುಪಾಲ ಹುದ್ದೆಗಳ ಪೈಕಿ 310 ಸ್ಥಾನಗಳಿಗೆ ಗುತ್ತಿಗೆ ಪದ್ಧತಿಯಡಿ ನೇಮಕ ಮಾಡಲು ಹೊರಟಿದೆ. ಗುತ್ತಿಗೆ ಪದ್ಧತಿ ಬದಲಿಸಿ ಖಾಲಿಯಿರುವ 400 ಪ್ರಾಂಶುಪಾಲರ ಹುದ್ದೆಗಳಿಗೆ ಖಾಯಂ ಆಗಿ ನೇಮಕಾತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ಕೇವಲ ಐದು ವರ್ಷಗಳ ಅವಧಿಗೆ ಆಯ್ಕೆ ಮಾಡಿಕೊಳ್ಳುವ ಸರ್ಕಾರ, ಈ ಅವಧಿ ನಂತರ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿದರೆ ಅತಂತ್ರರಾಗುವ ಅವರು ಏನು ಕೆಲಸ ಮಾಡಬೇಕು? ಇದರಲ್ಲಿ ಸರ್ಕಾರಕ್ಕೆ ಹೊಣೆಗಾರಿಕೆ ಇಲ್ಲವೇ? ಶಿಕ್ಷಣ ಕ್ಷೇತ್ರದಲ್ಲಿ ಈ ರೀತಿ ಬಳಸಿ ಬಿಸಾಡುವ ಜೀತಪದ್ಧತಿ ಸ್ವರೂಪದ ಕೆಲಸವನ್ನು ರಾಜ್ಯ ಸರ್ಕಾರ ಕೂಡಲೇ ರದ್ದುಪಡಿಸಬೇಕು”‌ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಂಜನಿಯರಿಂಗ್ ಸೇರಿದಂತೆ ಇತರೆ ಪದವಿ ಕಾಲೇಜುಗಳಲ್ಲಿ ಹದಿನೈದು ವರ್ಷಗಳ ಬೋಧನಾನುಭವ ಹೊಂದಿರುವವರಿಗೆ ನೇಮಕಾತಿಯಲ್ಲಿ ಅವಕಾಶವಿದೆ. ಎಂಜನಿಯರಿಂಗ್ ಕಾಲೇಜು ಮತ್ತು ಇತರ ಕಾಲೇಜುಗಳಲ್ಲಿ ಕೆಲಸ ಮಾಡಿದವರು ಆಯ್ಕೆಯಾದರೆ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಹೇಗೆ ಸಾಧ್ಯ? ತಾತ್ಕಾಲಿಕವಾಗಿ ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆ ಮಾಡುವುದರಿಂದ, ಆಯ್ಕೆಯಾದವರಿಗೆ ಸೇವಾ ಭದ್ರತೆ ಖಾತರಿಯೂ ಇಲ್ಲ. ಅಲ್ಲದೆ ವಿದ್ಯಾರ್ಥಿಗಳ ಪಾಠ, ಪ್ರವಚನಕ್ಕೆ ತೊಂದರೆಯಾಗುತ್ತದೆ” ಎಂದು ಹೇಳಿದರು.

ತನಿಖೆಗೆ ಆಗ್ರಹ: “ಸರ್ಕಾರ ನಿಗದಿಗೊಳಿಸಿರುವ ಹದಿನೈದು ವರ್ಷಗಳ ಸೇವಾನುಭವವಿಲ್ಲದವರೂ, ಹಲವು ದುರ್ಮಾರ್ಗದ ಪ್ರಭಾವ ಬಳಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹದಿನೈದು ವರ್ಷಗಳ ಸೇವಾ ದೃಢೀಕರಣ ಪಡೆದಿರುವ ವದಂತಿಗಳಿವೆ. ಸರ್ಕಾರದ ಉನ್ನತ ಅಧಿಕಾರಿಗಳ ಕುಟುಂಬಸ್ಥರೇ ಇಂತಹ ದುಷ್ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಂಬುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಿ ತಪಿತಸ್ಥರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ; ತನಿಖೆಗೆ ದಸಂಸ ಆಗ್ರಹ

“ಒಟ್ಟಾರೆಯಾಗಿ ಉನ್ನತ ಶಿಕ್ಷಣ, ಪಿಎಚ್‌ಡಿ ಪಡೆದು ಕೆಲಸ ಮಾಡಲು ಸಾಮರ್ಥ್ಯವಿರುವ ಲಕ್ಷಾಂತರ ಜನತೆಗೆ ಅವಕಾಶ ನೀಡಬೇಕು. ಸರ್ಕಾರ ಪರೀಕ್ಷಾ ಪ್ರಾಧಿಕಾರದ ಮೂಲಕ ಐದು ವರ್ಷದ ಅವಧಿಗೆ ಗುತ್ತಿಗೆಯಾಧಾರದಲ್ಲಿ ಪ್ರಾಂಶುಪಾಲರ ನೇಮಕ ಮಾಡಲು ಹೊರಟಿರುವುದನ್ನು ಕೂಡಲೇ ರದ್ದುಪಡಿಸಿ, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಖಾಯಂ ನೇಮಕ ಮಾಡಿಕೊಳ್ಳಲು ಮುಂದಾಗಬೇಕು.‌ ಇಲ್ಲವಾದರೆ ಡಿವೈಎಫ್ಐ ತೀವ್ರವಾದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...