ಹಾವೇರಿ | ಗೋವಾದಲ್ಲಿ ಕನ್ನಡಿಗರ ಕಾರ್ಮಿಕರ ಮೇಲೆ ಹಲ್ಲೆ: ಕರವೇ ಸ್ವಾಭಿಮಾನಿ ಖಂಡನೆ

Date:

“ಗೋವಾ ರಾಜ್ಯದಲ್ಲಿ ಫ್ರೇಡ್ನೆ ಹತ್ತಿರದ ರಸ್ತೆಯಲ್ಲಿ ಟ್ರಕ್ ಅಡ್ಡಗಟ್ಟಿ ಕನ್ನಡಿಗರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೆಯ” ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಕಿಡಿಕಾರಿದರು.

ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಎದುರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಗೋವಾ ರಾಜ್ಯದಲ್ಲಿ ಕನ್ನಡಿಗರ ಮೇಲೆ ಪದೇ ಪದೇ ಹಲ್ಲೆ ಮಾಡುತ್ತಿರುವುದನ್ನು  ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಕೆಲವೊಂದು ಗೋವ ಗುಂಡಾಗಳು ಕನ್ನಡಿಗರನ್ನೇ ಟಾರ್ಗೆಟ್ ಮಾಡಿ ಇಂತಹ ಕೃತ್ಯವನ್ನು ಎಸೆಸುತ್ತಿದ್ದಾರೆ. ಇದೆಲ್ಲಾ ಗೊತ್ತಿದ್ದರೂ ಗೋವಾ ಸರ್ಕಾರ ಮೌನಕ್ಕೆ ಶರಣಾಗಿದೆ. ಕೂಡಲೇ ಗೋವಾ  ಸರ್ಕಾರ ಇಂಥಾ ಗುಂಡಾಗಳಿಗೆ ಕಡಿವಾಣ ಹಾಕಬೇಕು. ಇದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರ ಗೋವಾ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿ ಇಂಥ ಘಟನೆಗಳು  ಮರುಕಳಿಸದಂತೆ ನೋಡಿಕೊಳ್ಳಬೇಕು. ಗೋವಾ ರಾಜ್ಯದಲ್ಲಿ ಇರುವ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂದಿನ ದಿನಗಳಲ್ಲಿ ಹೀಗೆ ಕನ್ನಡಿಗ ಕಾರ್ಮಿಕರ ಮೇಲೆ ಹಲ್ಲೆ ನಡೆದರೆ ಅಥವಾ ಅಲ್ಲಿ ವಾಸವಾಗಿರುವ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆದರೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಂಸ್ಥಾಪಕರಾಧ್ಯಕ್ಷರ ಪಿ ಕೃಷ್ಣೇಗೌಡರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳ ಒಳಗೊಂಡಂತೆ ಗೋವಾದಲ್ಲಿ ಹಲ್ಲೆ ಮಾಡಿರುವವರಿಗೆ ಸರಿಯಾದ ಪಾಠವನ್ನು ಕಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮಹಿಳೆಯರ ಸುರಕ್ಷತೆಗೆ ತಗಡುಗಳೇ ಆಸರೆ: ಮೂಲಸೌಕರ್ಯ ಒದಗಿಸುವಲ್ಲಿ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ಈ ಮನವಿ ಸಂದರ್ಭದಲ್ಲಿ  ಜಿಲ್ಲಾ ಮಹಿಳಾ ಅಧ್ಯಕ್ಷru ಗೀತಾಬಾಯಿ ಲಮಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೊಸುಫ್ ಸೈಕಲಗಾರ, ಜಿಲ್ಲಾ ಉಪಾಧ್ಯಕ್ಷರು ರಾಜೇಸಾಬ ಮನೆಗಾರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರು ಕಲಂದರ್ ಎಲೆದಹಳ್ಳಿ , ಹಾವೇರಿ ತಾಲೂಕ ಮಹಿಳಾ ಅಧ್ಯಕ್ಷೆ ನಾಗಮ್ಮ ಕಾಳೇರ, ಹಾನಗಲ್ ತಾಲೂಕ್ ಅಧ್ಯಕ್ಷೆ ನೇತ್ರಾ ಕಟ್ಟೀಮನಿ, ಹಜರತ್ ತಳಗೇರಿ, ಅನಿಲ್ ಮಾವರ್ಕರ್, ದಾದಾಪೀರ್ ಮಲ್ಲಾಡ, ಎಂ ಎ ಬಳೆಗಾರ, ಲಲಿತಾ ವಾಲ್ಮೀಕಿ, ವೀಣಾ ಕಲಾಲ್, ಶಾಂತ ಬಡಿಗೇರ್, ನೀಲವ್ವ ಕಟ್ಟಿಮನಿ, ಚನ್ನಬಸವ ಕುಸುನೂರ, ಭಾಷಾ ಬಾಳೂರು, ಕಮಲಾ ಲಕ್ಷ್ಮಪುರ್, ಚಂದ್ರಕಲಾ ಕಟ್ಟೀಮನಿ, ಶರೀಫ್ ತಳಕೇರಿ, ಸೇರಿದಂತೆ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...