ಹಾವೇರಿ | ವಿದ್ಯುತ್ ತಂತಿ ತುಂಡಾಗಿ ಬಿದ್ದು ಬಾಲಕನೋರ್ವ ಸಾವು

Date:

ಶಾಲೆಯ ಆವರಣದಲ್ಲಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಮೈ ಮೇಲೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಂಸಬಾವಿಯಲ್ಲಿ ನಡೆದಿದೆ.

ಗೌಸ್ ಮುಹಿಯುದ್ದೀನ್ ಎಂಬವರ ಪುತ್ರ ಮುಹಮ್ಮದ್ ಶಾ ಕಲಂದರ್(10) ಮೃತಪಟ್ಟ ಬಾಲಕ. ಹಂಸಬಾವಿಯ ಶಿವಯೋಗೇಶ್ವರ ಪ್ರೌಢಶಾಲೆಯ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕಲಂದರ್ ಶುಕ್ರವಾರ ಮಧ್ಯಾಹ್ನ ಊಟದ ವಿರಾಮದ ಸಂದರ್ಭ ಇನ್ನಿಬ್ಬರು ಗೆಳೆಯಯರಾದ ಶ್ರೇಯಸ್ ಮತ್ತು ಚೇತನ್ ಜೊತೆ ಶಾಲಾ ಆವರಣದಲ್ಲಿ ನಿಂತಿದ್ದರು. ಈ ವೇಳೆ ಅಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಕಲಂದರ್ ಮೈ ಮೇಲೆ ಬಿದ್ದಿದೆ. ಅಕ್ಕ–ಪಕ್ಕದಲ್ಲಿದ್ದ ಸ್ನೇಹಿತರಿಬ್ಬರಿಗೂ ವಿದ್ಯುತ್ ತಂತಿ ತಗುಲಿದೆ.

ತಕ್ಷಣ ಮೂವರೂ ವಿದ್ಯಾರ್ಥಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಕಲಂದರ್ ಕೊನೆಯುಸಿರೆಳೆದಿದ್ದರು. ಶ್ರೇಯಸ್ ಮತ್ತು ಚೇತನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...