ಹಾವೇರಿ | ಯುವಜನರ ಉದ್ಯೋಗ ಭರವಸೆ, ಭದ್ರತೆಯ  ಸ್ಪಷ್ಠ ಕಣ್ಣೋಟವಿಲ್ಲದ ಬಜೆಟ್: ಬಸವರಾಜ ಪೂಜಾರ

Date:

“ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 9ನೇ ಬಜೆಟ್ ಮಂಡಿಸಿದ್ದಾರೆ. ದೇಶದಲ್ಲಿ ಆಳವಾಗಿರುವ ನಿರುದ್ಯೋಗ ಸೇರಿದಂತೆ ಯುವಜನತೆ ಎದುರಿಸುತ್ತಿರುವ ಸಂಕಷ್ಟಗಳನ್ನು ಮರೆಮಾಚುವ ಅಂಕಿ ಸಂಖ್ಯೆ ಮೇಲಾಟದ ಬಜೆಟ್ ಆಗಿದೆ. ಇದರಿಂದ ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ಭಾರತದ ಕೋಟ್ಯಂತರ ಯುವಜನರಿಗೆ ಯಾವುದೇ ಉದ್ಯೋಗದ ನೈಜ ಭರವಸೆ ಹಾಗೂ ಭದ್ರತೆ ಮೂಡಿಸುವಲ್ಲಿ ವಿಫಲವಾಗಿದೆ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು “ಔಪಚಾರಿಕ ವಲಯಗಳಲ್ಲಿನ ಉದ್ಯೋಗದ ಅನಿಶ್ಚಿತೆಯು ಲಕ್ಷಾಂತರ ಜನರನ್ನು ಅಸುರಕ್ಷಿತ ಗಿಗ್ ಕೆಲಸಕ್ಕೆ ತಳ್ಳಿದೆ.  ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಕಾನೂನು ಮಾನ್ಯತೆ ನೀಡಿರುವುದನ್ನು ಹೊರತುಪಡಿಸಿ ಬಜೆಟ್ ಅನುದಾನದಲ್ಲಿ ಯಾವುದೇ ಹಂಚಿಕೆಯನ್ನು ಒದಗಿಸುವುದಿಲ್ಲ. ಅಸ್ತಿತ್ವದಲ್ಲಿರುವ ಬದ್ಧತೆಗಳನ್ನು ಗೌರವಿಸಲು ವಿಫಲವಾಗಿದೆ. ಇದೇ ರೀತಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕೋಟ್ಯಾಂತರ ಕಾರ್ಮಿಕರ ಕುರಿತು ಯಾವುದೇ ನಿರ್ದಿಷ್ಟ ಕಲ್ಯಾಣ ಕಾರ್ಯಕ್ರಮ ಹೊಂದಿಲ್ಲದ ಕಾರ್ಮಿಕ ವಿರೋಧಿ ಬಜೆಟ್ ಆಗಿದೆ” ಎಂದರು.

“ಈಗಾಗಲೇ ಅಸಮಾನತೆಯ ಸನ್ನಿವೇಶದಲ್ಲಿ ಆರ್ಥಿಕ ಬಿಕ್ಕಟ್ಟಿನ ನಡುವೆ ಬದುಕಲು ಹೆಣಗಾಡುತ್ತಿರುವ ದೇಶದ ಕಾರ್ಮಿಕರಿಗೆ ಯಾವುದೇ ಭದ್ರತೆ ಒದಗಿಸುವಲ್ಲಿ ವಿಫಲವಾಗಿರುವ ಜನವಿರೋಧಿ ಬಜೆಟ್ ಆಗಿದೆ. ಜನ ಸಾಮನ್ಯರ ಹಿತವನ್ನು ರಕ್ಷಿಸಲು ಕನಿಷ್ಠ ಕಾಳಜಿ ಹಾಗೂ ಮುತುವರ್ಜಿಯ ಅಂಶಗಳನ್ನು ಹೊಂದಿರದ ಈ ಬಜೆಟ್‌ನಲ್ಲಿ ಖಾಸಗಿ ಕಾರ್ಪೊರೇಟ್‌ ವರ್ಗಗಳಿಗೆ ಹೆಚ್ಚು ಪ್ರೋತ್ಸಾಹ ಹಂಚಿಕೆಗಳನ್ನು ಮತ್ತಷ್ಟು ವಿಸ್ತರಿಸುವ ಮತ್ತು ಹೆಚ್ಚಿಸುವ ಮೂಲಕ ಬಂಡವಾಳಶಾಹಿ-ಕಾರ್ಪೋರೇಟ್ ಸ್ನೇಹಿ ಬಜೆಟ್ ಆಗಿದೆಯಲ್ಲದೇ ಸಾಮಾನ್ಯ ಜನರ ಹಿತಾಸಕ್ತಿಗೆ ದ್ರೋಹ ಬಗೆದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯುವ ವಿರೋಧಿ, ಕಾರ್ಮಿಕ ವಿರೋಧಿ, ಕಾರ್ಪೊರೇಟ್ ಪರವಾದ ಬಜೆಟ್ ಅನ್ನು ಡಿವೈಎಫ್ಐ  ತಿರಸ್ಕರಿಸುತ್ತದೆ. ಮತ್ತು ಈ ನೀತಿಗಳ ವಿರುದ್ಧ ಒಗ್ಗಟ್ಟಿನ ಪ್ರತಿರೋಧವನ್ನು ತೀವ್ರಗೊಳಿಸಲು ದೇಶದ ಯುವಜನರಿಗೆ ಕರೆ ನೀಡುತ್ತದೆ” ಎಂದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...