ಹಾವೇರಿ | ಯುವಜನರಿಗೆ ಸಾಮರ್ಥ್ಯ ಬಲವರ್ಧನೆ ತರಬೇತಿ  ಕಾರ್ಯಾಗಾರ 

Date:

“ಯುವಜನರು ಸಮುದಾಯದಲ್ಲಿ ನಾಯಕ ಆಗಬೇಕಾದರೆ ತಮ್ಮಲ್ಲಿರುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿಯೇ ಯುವಜನರು ಹೆಚ್ಚು ಹೆಚ್ಚು ತರಬೇತಿಗಳನ್ನು ಪಡೆದಕೊಳ್ಳಬೇಕು. ಸಮಾಜದ ಆಗು ಹೋಗುಗಳ ಅವಲೋಕನ ಮಾಡಬೇಕು. ಸದೃಡ ಸಮಾಜ ಕಟ್ಟಲು ಬದ್ಧರಾಗಬೇಕು” ಎಂದು ಯುವಜನರಿಗೆ ಸಾಮರ್ಥ್ಯ ಬಲವರ್ಧನೆ ತರಬೇತಿ  ಕಾರ್ಯಗಾರದಲ್ಲಿ ಫಾದರ್ ಜೇಸನ್ ಪೈಸ್ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ ವಿಕಾಸ ಕೇಂದ್ರದಲ್ಲಿ ಲೊಯೋಲ ವಿಕಾಸ ಕೇಂದ್ರ, ರೋಶನಿ ಸಮಾಜ ಸೇವಾ ಸಂಸ್ಥೆ ಹಾನಗಲ್ಲ, ಇಂಡಿಯನ್ ಸೋಶಿಯಲ್  ಇನ್ಸ್ಟಿಟ್ಯೂಟ್, ಅಕ್ಕಮಹಾದೇವಿ ಸಂಸ್ಥೆ ಹಾನಗಲ್ಲ ಇವರ ಆಶ್ರಯದಲ್ಲಿ ಸಾಮರ್ಥ್ಯ ಬಲವರ್ಧನೆ ತರಬೇತಿ ಕಾರ್ಯಗಾರದಲ್ಲಿ  ಪ್ರಸ್ತಾವಿಕವಾಗಿ ಫಾದರ್ ಜೇಸನ್ ಪೈಸ್ ಮಾತನಾಡಿದರು.

“ಯುವಜನತೆ ಈ ದೇಶದ ಶಕ್ತಿ ಅದು ಅನುಪಯುಕ್ತ ವಿಷಯಗಳಿಗೆ ಬೆಂಬಲ ನೀಡದೆ,  ದೇಶದ ಅಭಿವೃದ್ಧಿ ವಿಚಾರಗಳಿಗೆ ದ್ವನಿ ಗುಡಿಸಿದರೆ, ಖಂಡಿತವಾಗಿಯೂ ನವ ಸಮಾಜದ ನಿರ್ಮಾಣದ ಕನಸು ನನಸಾಗುತ್ತದೆ”  ಎಂದು ತಿಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಸ್ಟರ್ ಶಾಂತಿ  ರೋಶನಿ ಸಮಾಜ ಸೇವಾ ಸಂಸ್ಥೆ ಇವರು ಮಾತನಾಡಿ, “ಯುವಜನರು ಸಮುದಾಯದಲ್ಲಿ ಬೆಳದು ನಿಲ್ಲಬೇಕಾದರೆ ಅವರಿಗೆ ಶಕ್ತಿಯ ಜೊತೆಗೆ ಯುಕ್ತಿಯು ಬೇಕು. ಯುಕ್ತಿ ಜ್ಞಾನ, ತಿಳಿವಳಿಕೆ, ಮತ್ತು ಅನುಭವದ ಮೂಲಕ ಸಿಗುತ್ತದೆ. ಹಾಗಾಗಿ ಯುವಜನರು ತಮ್ಮಲ್ಲಿರುವ ಜ್ಞಾನ ಮತ್ತು ಶಕ್ತಿ ಬೆಳಲಿಸಿಕೊಳ್ಳಲು ಸಾಮರ್ಥ್ಯ ವೃದ್ಧಿಸಿಕೊಳ್ಳುವುದು ಬಹು ಮುಖ್ಯ” ಎಂದು ತಿಳಿಸಿದರು.

ಕಾರ್ಯಗಾರದಲ್ಲಿ ಸಂವಾದ ಸಂಸ್ಥೆ  ಹಕೀಮ್ ಅವರು ಯುವಜನರ ಹಕ್ಕುಗಳು ಮತ್ತು ಯುವಜನ ಆಯೋಗದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜನಾರ್ಧನ ಕೇಸರಗದ್ದೆ ಕೋ ಎಕ್ಸಿಕ್ಯೂಟಿವ್ ಡೈರೆಕ್ಟರ್ ಸಂವಾದ ಬೆಂಗಳೂರು, ಪ್ರಗತಿಪರ ಸಂಘಟಕರು ಫೈರೋಜ್ ಅಹ್ಮದ ಶಿರಬಡಗಿ ಸೇರಿದಂತೆ ಐವತ್ತಕ್ಕೂ ಹೆಚ್ಚು ಯುವಜನರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಪಕ್ಕೀರೇಶ್ ಗೌಡಳ್ಳಿ ನಿರೂಪಿಸಿದರು, ಗೀತಾ ಬಿಸಗಣ್ಣನವರ ಸ್ವಾಗತಿಸಿದರು, ಮೈಲಾರಿ ಜಾಡರ ಅವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...