ಹಾವೇರಿ | ಕಚವಿ ಪಿಡಿಓ ವಿರುದ್ಧ ಜಾತಿ ನಿಂದನೆ ಆರೋಪ; ವರ್ಗಾವಣೆಗೆ ಆಗ್ರಹ

Date:

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕಚವಿ ಗ್ರಾಮ ಪಂಚಾಯತಿ ಪಿಡಿಓ ಪರಮೇಶ್ವರಪ್ಪ ಗಿರಿಯಣ್ಣನವರ ವಿರುದ್ಧ ಜಾತಿ ನಿಂದನೆ ಹಾಗೂ ಕರ್ತವ್ಯಲೋಪ ಆರೋಪ ಕೇಳಿಬಂದಿದ್ದು, ಕೂಡಲೇ ವರ್ಗಾವಣೆ ಮಾಡುವಂತೆ ಮಾಜಿ ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ ಚಂದ್ರಪ್ಪ ಹರಿಜನ ಆಗ್ರಹ ಮಾಡಿದ್ದಾರೆ.

ಜಿಲ್ಲಾ ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಅವರ ನೇತೃತ್ವದಲ್ಲಿ ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ರುಚಿ ಬಿಂದಾಲ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿಲಾಯಿತು. ನಂತರ ಮಾತನಾಡಿದ ಕಚವಿ ಗ್ರಾಪಂನ ಹಾಲಿ ಸದಸ್ಯೆಯೂ ಆಗಿರುವ ಗಿರಿಜಮ್ಮ, “ಪಿಡಿಒ ಪರಮೇಶ್ವರಪ್ಪ, ಪಂಚಾಯತಿ ಅಭಿವೃದ್ಧಿ ಕೆಲಸಗಳ ಕಡೆ ಕಿಂಚಿತ್ತೂ ಗಮನ ಹರಿಸುವುದಿಲ್ಲ. ಪಂಚಾಯತಿಗೆ ಬರೋದಿಲ್ಲ. ಬಂದರೂ ಕೆಲಸ ಮಾಡಲ್ಲ. ಯಮ್ಮಿಗನೂರು ಮತ್ತು ಪುರಪುಂಡಿಕೊಪ್ಪ ಕಚವಿ ತಾಂಡಾಗಳಿಗೆ 2021ರಲ್ಲಿ 14-15 ನೇ ಹಣಕಾಸು ಯೋಜನೆಯಡಿ ಮನರೇಗಾ ಅನುದಾನದಲ್ಲಿ ಅಕ್ರಮ ಎಸಗಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು. ಗ್ರಾಮಗಳ ಅಭಿವೃದ್ಧಿಗೆ ಬಂದ ಸರ್ಕಾರದ ಅನುದಾನಗಳ ಬಗ್ಗೆ ಯಾವುದೇ ಮಾಹಿತಿ‌ ನೀಡದೇ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ. ಅವರ ವಿರುದ್ಧ ಸೂಕ್ತ ಕ್ರಮ ಆಗಬೇಕು” ಎಂದರು.

“ಉದ್ದೇಶ ಪೂರ್ವಕವಾಗಿ ಅಭಿವೃದ್ಧಿ ಕಾರ್ಯಗಳ ವಿಳಂಬ ಮಾಡುತ್ತಾರೆ. ಜಾತಿ ಮತ್ತು ಹಣದ ಆಮಿಷಕ್ಕೆ ಒಳಗಾಗಿದ್ದಾರೆ. ನಾವೇನಾದರೂ‌ ಕೆಲಸದ ಬಗ್ಗೆ ಕೇಳಿದರೆ ಏಕ ವಚನದಿಂದ ಮಾತನಾಡಿ‌ ಜಾತಿ ನಿಂದನೆ ಮಾಡುತ್ತಾರೆ. ಅಲ್ಲದೇ ಅನೇಕ ಬಾರಿ ಅಪಮಾನ ಮಾಡಿದ್ದಾರೆ. ಸರ್ಕಾರದಿಂದ ಬರುವ ಮಾಹಿತಿ ಕೇಳಿದಾಗ ನಮಗೆ ಸ್ಪಂದಿನೆ ನೀಡುವುದಿಲ್ಲ. ಮನರೇಗಾ ಯೋಜನೆಯ ಕೆಲಸದಲ್ಲಿ ಕೂಲಿ‌ ಕಾರ್ಮಿಕರಿಗೆ ಇದು ವರೆಗೂ ಕೆಲಸ ಕೊಟ್ಟಿಲ್ಲ. ಯಮ್ಮಿಗನೂರು ಗ್ರಾಮದ ಎಸ್ಸಿ‌ ಮತ್ತು ಎಸ್ಟಿ ಸೋಲಾರ ಕೂಡಾ ನೀಡಿಲ್ಲ. 2021 ರಲ್ಲಿ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡವರಿಗೆ ಬಿಲ್ ಪೆಂಡಿಂಗ್ ಇಟ್ಟುಕೊಂಡಿದ್ದಾರೆ. ಪಂಚಾಯತಿಗೆ ಬರುವ ಸಾರ್ವಜನಿಕರೊಂದಿಗೆ ಉದ್ದಟತನದಿಂದ ನಡೆದುಕೊಳ್ಳುತ್ತಾರೆ. ‌ಗ್ರಾಪಂ ಸದಸ್ಯರಲ್ಲಿ ತಾರತಮ್ಯವನ್ನು ಮಾಡಿಕೊಂಡು ಬಂದಿದ್ದಾರೆ. ನಾನು ಹೇಳಿದ ಒಂದು ಕೆಲಸವನ್ನು ಇದು ವರಗೂ ಸರಿಯಾಗಿ ಮಾಡುತ್ತಿಲ್ಲ. ಕೀಳು ಜಾತಿಯವರನ್ನು ನಾವೇಕೆ ಭೇಟಿ ಮಾಡಬೇಕು ಅವರು ಹೇಳಿದಂತೆ ನಾವು ಕೆಲಸ ಮಾಡಬೇಕಾ ಅನ್ನುವ ಮನಸ್ಥಿತಿ ಇವರಿಗಿದೆ. ತಕ್ಷಣ ಇವರನ್ನು ಇಲ್ಲಿಂದ ವರ್ಗಾವಣೆ ಮಾಡಲೇಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ:ಹಾವೇರಿ | ಅಸಮಾನತೆ ವಿರುದ್ಧ  ಧ್ವನಿ ಎತ್ತಲು ಶಿಕ್ಷಣ ಬೇಕು: ಭವ್ಯ ನರಸಿಂಹಮೂರ್ತಿ

ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ಮುಖಂಡರಾದ ಚಂದ್ರಪ್ಪ ಹರಿಜನ, ಜಗದೀಶ್ ಹರಿಜನ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...