ಹಾವೇರಿ | ಚಂಸು ವಿಶಾಲ ವ್ಯಾಪ್ತಿಯ ಕವಿ: ಸಾಹಿತಿ ಮಲ್ಲಿಕಾರ್ಜುನಗೌಡ ತೂಲಹಳ್ಳಿ

Date:

“ಚಂಸು ಅವರ ಕವಿತೆಗಳನ್ನು ಒಂದು ಚೌಕಟ್ಟಿನಲ್ಲಿ ಇಟ್ಟು ಮಾತನಾಡುವುದೇ ಅಸಾಧ್ಯ. ಚಂಸು ವಿಶಾಲ ವ್ಯಾಪ್ತಿಯ ಕವಿ. ಅವನೊಳಗೊಬ್ಬ ಪತ್ರಕರ್ತ ಇರುವಂತೆ, ತನ್ನ ಜನರನ್ನು ಪ್ರೀತಿಸುವ ರೈತನೂ ಇದ್ದಾನೆ” ಎಂದು ಸಾಹಿತಿ ಮಲ್ಲಿಕಾರ್ಜುನಗೌಡ ತೂಲಹಳ್ಳಿ ಹೇಳಿದರು.

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ನಗರದಲ್ಲಿ ರವಿವಾರ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಮಾತೋಶ್ರೀ ಮಹದೇವಕ್ಕ ಮಂಗಳವಾದ್ಯ ಮತ್ತು ತರಬೇತಿ ಸಂಸ್ಥೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಗ್ರಾಮ ಘಟಕ ಮೇಡ್ಲೆರಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕವಿ ಚಂಸು ಪಾಟೀಲರ ‘ಕುಳದ ಸಂಗಾತ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ವರ್ತಮಾನದ ಬದುಕನ್ನು ತೀವ್ರವಾಗಿ ವಿಡಂಬಿಸುತ್ತಲೇ ಅಚ್ಚರಿ ಹುಟ್ಟಿಸುವ ಚಂಸು ಕಾವ್ಯ ಎಚ್ಚರದ ಗಂಟೆಯಾಗಿಯೂ ಮಾರ್ದನಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಕಾಲೀನ ಜಗತ್ತಿನ ಎಲ್ಲ ಆಗುಹೋಗುಗಳನ್ನು ಸಾಮಾನ್ಯನೊಬ್ಬನ ಕಣ್ಣಿನಿಂದ ನೋಡಿ, ಜನಪರವಾಗಿ ಪ್ರತಿನುಡಿಯುವ ಧಾವಂತ ಕುಳದ ಸಂಗಾತದ ಕವಿತೆಗಳಲ್ಲಿದೆ. ಕೃಷಿ ಸಮಸ್ಯೆಗಳೂ ಸೇರಿದಂತೆ, ಜನಸಾಮಾನ್ಯರ ದೈನಂದಿನ ನಿಟ್ಟುಸಿರನ್ನೆ ಪಿಸುಗುಡುವಂತೆ ಇಲ್ಲಿನ ಕವಿತೆಗಳು ಎದೆ ತಟ್ಟುತ್ತವೆ. ಕಾವ್ಯದ ವಿನ್ಯಾಸದಲ್ಲಿ ಹೊಸ ಪ್ರಯೋಗ ಹಾಗೂ ವಸ್ತುವಿಷಯ ವೈವಿಧ್ಯತೆಗಳಿಂದ ‘ಕುಳದ ಸಂಗಾತ’ ವಿಶೇಷ ಎನಿಸುತ್ತದೆ” ಎಂದು ಅವರು ವಿವರಿಸಿದರು.

“ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿದ್ಯಮಾನಗಳ ಜೊತೆಗೇ ಸ್ಥಳೀಯ ಘಟನಾವಳಿಗಳೂ ಇಲ್ಲಿ ಕಾವ್ಯಕ್ಕೆ ವಸ್ತು ಆಗಿವೆ. ಚಂಸು ಅವರ ಕವಿತೆಗಳು ಸಮಕಾಲೀನ ರಾಜಕೀಯದ ಬಗ್ಗೆ ಮಾತನಾಡುತ್ತಲೇ ಬಂಡವಾಳಶಾಹಿಯ ಧೋರಣೆಗಳ ಬಗ್ಗೆ ಎಚ್ಚರಿಸುತ್ತವೆ” ಎಂದು ಹೇಳಿದರು.

ಹಿರಿಯ ರೈತರೂ, ಪಿಎಲ್‌ಡಿ ಬ್ಯಾಂಕಿನ ಮಾಜಿ ನಿರ್ದೆಶಕರಾದ ಶಿವಪುತ್ರಪ್ಪ ಕೊಪ್ಪದ ಅವರು ಪುಸ್ತಕ ಬಿಡುಗಡೆ ಮಾಡಿದರು.

ಕಸಾಪ ತಾಲೂಕ ಅಧ್ಯಕ್ಷರಾದ ಪ್ರಭಾಕರ್ ಶಿಗ್ಲಿ, ಎಸ್ ಎಫ್ ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಶ್ರೀಮತಿ ಮಾದೇವಮ್ಮ ಸಾವಕ್ಕನವರ್, ಕಸಾಪ ಮೆಡ್ಲೇರಿ ಗ್ರಾಮ ಘಟಕದ ಅಧ್ಯಕ್ಷರಾದ ಮಾರುತಿ ತಳವಾರ್, ಸಂಗೀತ ತರಬೇತಿ ಸಂಸ್ಥೆಯ  ಅಧ್ಯಕ್ಷರಾದ ಬಸವರಾಜ್ ಸಾವಕ್ಕನವರ್, ಕವಿ ಚಂಸು ಪಾಟೀಲ, ಮಲ್ಲೇಶಪ್ಪ ಮದ್ಲೇರ ಮೊದಲಾದವರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ನೋಟಿಸ್ ಜಾರಿ, ಪ್ರಕರಣ ದಾಖಲು

ಇದೇ ಸಂದರ್ಭದಲ್ಲಿ ಪಿಎಚ್‌ಡಿ ಪುರಸ್ಕೃತ ಡಾ. ಮಂಜಪ್ಪ ಚಲವಾದಿ, ಡಾ. ಗುರು ಎಸ್ ಚಲವಾದಿ ಹಾಗೂ ಕಲಾವಿದರು ಮೈಲಾರಪ್ಪ ಚಲವಾದಿ, ಸಂಜೀವಪ್ಪ ದೊಡ್ಡ ಕಾಳೇರ್, ಹನುಮಂತಪ್ಪ ದೊಡ್ಡ ಕಾಳೇರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...