ಹಾವೇರಿ | ಛತ್ರಪತಿ ಶಿವಾಜಿ ಮಹಾರಾಜ ಅಪ್ರತಿಮ ಶೂರ, ಉತ್ತಮ ಆಡಳಿತಗಾರ: ಎಸ್.ಎಫ್.ಎನ್. ಗಾಜಿಗೌಡ್ರ

Date:

“ಛತ್ರಿಪತಿ ಶಿವಾಜಿ ಮಹಾರಾಜ ಅಪ್ರತಿಮ ಶೂರ ಹಾಗೂ ಉತ್ತಮ ಆಡಳಿತಗಾರರಾಗಿದ್ದರು. ಇಂದಿನ ಯುವ ಸಮೂಹ ಇಂತಹ ಮಹಾನ್ ನಾಯಕರ ಆದರ್ಶಗಳನ್ನು ತಿಳಿದುಕೊಳ್ಳಬೇಕು. ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಫ್.ಎನ್. ಗಾಜಿಗೌಡ್ರ ಹೇಳಿದರು.

ಹಾವೇರಿ ನಗರದ ತಾಲೂಕು ಮರಾಠಾ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಮರಾಠಾ ಸಮಾಜದ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಹಿಂದೂ ಮರಾಠಾ ಸಾಮ್ರಾಜ್ಯದ ಸ್ಥಾಪಕ ಶಿವಾಜಿ ಮಹಾರಾಜರು, ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಬರಿ ಪುಸ್ತಕದಲ್ಲಿ ಓದುವಂತಾಗಿದೆ. ಇಂದಿನ ಮಕ್ಕಳು ಮೊಬೈಲ್‌ನಲ್ಲಿ ಮುಳುಗಿಹೋಗಿದ್ದು, ಮೊಬೈಲ್ ಬಳಕೆ ಕಡಿಮೆಮಾಡಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಘಾಟನೆ ನೆರವೇರಿಸಿದ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಎಲ್ ಅವರು ಮಾತನಾಡಿ, “ಶಿವಾಜಿ ಮಹಾರಾಜರು ಉತ್ತಮ ಆದರ್ಶ ಮೌಲ್ಯಗಳನ್ನು ಹೊಂದಿದ್ದು, ಶಿವಾಜಿ ಅವರ ಈ ಸಾಧನೆಗೆ ಅವರ ತಾಯಿ ಜೀಜಾಭಾಯಿ ಅವರ ಪಾತ್ರ ಬಹು ಮುಖ್ಯವಾಗಿದೆ.. ಶಿವಾಜಿ ಅವರು ಬಾಲ್ಯದಲ್ಲಿದ್ದಾಗಲೇ ಅವರಿಗೆ ರಾಮಾಯಣ, ಮಹಾಭರತ ಮತ್ತು ಧೀರ ಯೋಧರ ಕತೆಗಳನ್ನು ಹೇಳುವ ಮೂಲಕ ಸದಾ ಅವರಿಗೆ ಸ್ಫೂರ್ತಿ ನೀಡುತಿದ್ದರು. ನಿಜವಾದ ಹಿಂದೂ ರಾಷ್ಟ್ರದ ನಿರ್ಮಾತೃ ಎಂದರೆ ತಪ್ಪಾಗಲಾರದು” ಎಂದು ಹೇಳಿದರು.

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ. ಎಂ. ಮೈದೂರ ಮಾತನಾಡಿ, “ಶಿವಾಜಿ ಅವರ ಆಚಾರ-ವಿಚಾರ ಬಹಳ ಜನಪ್ರಿಯವಾಗಿವೆ. ತಾಯಿಯೇ ಮೊದಲು ಗುರು, ಜೀಜಾಭಾಯಿ ಅವರ ಬೋಧನೆಯಿಂದ ಶಿವಾಜಿ ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಿದರು. ಮಕ್ಕಳು ಇತಿಹಾಸವನ್ನು ಓದಬೇಕು, 12 ಮತ್ತು 16 ನೇ ಶತಮಾನದ ಮಹಾನ್ ವ್ಯಕ್ತಿಗಳನ್ನು ಸ್ಮರೀಸಬೇಕು” ಎಂದು ಹೇಳಿದರು.

ಶ್ರೀಮತಿ ರೇವತಿ ವಿವೇಕಾನಂದ ತಿಳುವಳ್ಳಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಹಿರೇಮಠ, ಜಿಲ್ಲಾ ಮಾರಾಠ ಸಮಾಜದ ಅಧ್ಯಕ್ಷ ವೆಂಕೋಜಿ, ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...