ಹಾವೇರಿ | ದೆಹಲಿ ಕಾರು ಸ್ಫೋಟ ಘಟನೆ ಖಂಡಿಸಿ, ಮಡಿದವರಿಗೆ ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ

Date:

ದೆಹಲಿ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟ ಘಟನೆಯನ್ನು ಖಂಡಿಸಿ, ಘಟನೆಯಲ್ಲಿ ಮಡಿದವರಿಗೆ ಮೇಣದ ಬತ್ತಿ ಬೆಳಗಿ ಮಂಗಳವಾರ ಸಂಜೆ ಹಾವೇರಿಯ ಗಾಂಧಿ ವೃತ್ತದಲ್ಲಿ ಎಸ್ಎಫ್ಐ, ಡಿವೈಎಫ್ಐ, ಸಾಹಿತಿ ಕಲಾವಿದರ ಬಳಗ, ಸಮಾನಮನಸ್ಕರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ “ಕೆಂಪುಕೋಟೆ ಬಳಿ ರಕ್ತಹರಿಸಿದ ದುಷ್ಕರ್ಮಿಗಳ ಕುಕೃತ್ಯವನ್ನ ತೀವ್ರವಾಗಿ ಖಂಡಿಸುತ್ತೇವೆ. ಅಮಯಾಕರ ಜೀವ ಬಲಿ ಪಡೆದ ಪಾಪಿಗಳ ಕೃತ್ಯಕ್ಕೆ ತಕ್ಕಶಾಸ್ತಿ ಮಾಡಬೇಕು” ಎಂದು ಆಗ್ರಹಿಸಿದರು.

“ಘಟನೆಯಲ್ಲಿ ಗಾಯಗೊಂಡಿರುವ ಜೀವಗಳು ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಆಗಲಿ. ಈ ರೀತಿಯ ಕೃತ್ಯಗಳು ಮರುಕಳಿಸದಂತೆ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪದೇ ಪದೇ ಈ ರೀತಿಯ ಘಟನೆಗಳಲ್ಲಿ ಅಮಾಯಕರು ಜೀವಕಳೆದುಕೊಳ್ಳುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಅಮಾನವೀಯ ಘಟನೆಯನ್ನು ಮಾನವೀಯತೆಯ ಪರವಾಗಿರುವ ಎಲ್ಲಾ ಸಮಾನ ಮನಸ್ಕ ಸಂಘಟನೆಗಳ ಪರವಾಗಿ ತೀವ್ರವಾಗಿ ಖಂಡಿಸುತ್ತೇವೆ. ಅಮಾಯಕ ಜನರ ಜೀವ ಬಲಿ ಪಡೆದ ಕೆಟ್ಟ ಮನಸ್ಥಿತಿವರು ಈ ಜಾತ್ಯಾತೀತ, ಸೌಹಾರ್ದತೆ ನೆಲದ ಮನಸ್ಸುಗಳನ್ನು ಹೊಡೆಯುವುದು ಸಹಿಸುವುದಿಲ್ಲ. ಕೂಡಲೇ ಕೇಂದ್ರ ಸರ್ಕಾರ ನಿಷ್ಪಕ್ಷಪಾತ ತನಿಖೆ ಆದೇಶಿಸಬೇಕು ಎಂದು ಆಗ್ರಹಿಸಿದರು. ಈ ಕೃತ್ಯೆ ಎಸಗಿದವರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂದರೆ ಮುಂದೆ ಈ ರೀತಿಯ ಕೃತ್ಯವನ್ನು ಯಾರು ಮಾಡಬಾರದು ಆ ರೀತಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಅಲ್ಪಾ ಸಂಖ್ಯಾತರ ಆಯೋಗದ ಸದಸ್ಯರು ಪರಿಮಳ ಜೈನ್, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಸಾಹಿತಿ ಕಲಾವಿದರ ಬಳಗದ ಈರಣ್ಣ ಬೆಳವಡಿ, ಶಂಕರ್ ಮಡಿವಾಳ, ವಿರೂಪಾಕ್ಷ ಹಾವನೂರು, ಶಿವಯೋಗಿ, ಚಂದ್ರಶೇಖರ್ ಮಾಳಗಿ, ಅಂಬಿಕಾ ಹಂಚಾಟೆ, ನೇತ್ರಾವತಿ ಅಂಗಡಿ,ಶಶಿಕಲಾ ಅಕ್ಕಿ, ರೇಣುಕ ಗುಡಿಮನಿ, ರಾಜೇಶ್ವರಿ ಬಿಷ್ಮ್ನಗೌಡ, ಮಹೇಶ್ ಗುರುಲಿಂಗದೆವರಮಠ,  ಎಸ್ಎಫ್ಐ ಮುಖಂಡರಾದ ಅರುಣ್ ನಾಗವತ್, ಚೈತ್ರಾ ಕೊರವರ , ರವಿ ಬಂಕಾಪುರ, ಪಕಿರೇಷ ಮ್ಯಾಗಳಮನಿ, ಸಂಜೀವ್  ಕೆ, ಬಾಲಸಂಘಂನ ಧನುಷ್ ದೊಡ್ಡಮನಿ, ಪ್ರಜ್ವಲ್ ಕೊಪ್ಪದ, ಮೈನುದ್ದೀನ್ ಇಲಿಬುಡ್ಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...