ಹಾವೇರಿ | ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ ಅವೈಜ್ಞಾನಿಕ ರ‌್ಯಾಂಪ್‌ ನಿರ್ಮಾಣ: ಕರವೇ ಸ್ವಾಭಿಮಾನಿ ಬಣ ಆರೋಪ

Date:

ಶಾಲೆಗಳಲ್ಲಿ(ಚುನಾವಣೆ ಮತಗಟ್ಟೆ) ಕೇಂದ್ರಗಳ ಮುಂಭಾಗದಲ್ಲಿ ನಿರ್ಮಿಸಲಾಗಿರುವ ryampaಗಳು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕೂಡಲೇ ಇವುಗಳನ್ನು ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಪಂಚಾಯಿತಿ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ ಮತ್ತು ತಹಸೀಲ್ದಾ‌ರ್ ಕಚೇರಿಯ ಶಿರಸ್ತೆದಾರ ಜಗತಾಫ್ ಅವರಿಗೆ ಮನವೆ ಸಲ್ಲಿಸಿದರು.

ಮನವಿ ಸಲ್ಲಿಸಿ ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠ ಮತ್ತು ಉಪಾಧ್ಯಕ್ಷ ಯೂಸೂಫ್ ಸೈಕಲ್‌ಗಾರ ಮಾತನಾಡಿ, “ರಟ್ಟಿಹಳ್ಳಿ ಪಟ್ಟಣದಲ್ಲಿ  ಸರಿ ಸುಮಾರು 10-12 ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಯಲ್ಲಿರುವ ಚುನಾವಣಾ ಮತಗಟ್ಟೆ ಹೆಸರಿನಲ್ಲಿ ನಿರ್ಮಿಸಲಾಗಿರುವ ರಾಂಪ್‌ಗಳು ಸಂಪೂರ್ಣವಾಗಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಯ ಮಕ್ಕಳಿಗೆ, ಶಿಕ್ಷಕರುಗಳಿಗೆ ವಿಶೇಷವಾಗಿ ಗರ್ಭೀಣಿಯರು, ಬಾಣಂತಿಯರು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

“ಚುನಾವಣಾ ಮತಗಟ್ಟೆಗೆಂದು ಶಾಲೆಯಲ್ಲಿ ನಿರ್ಮಿಸಿರುವ ರ‌್ಯಾಂಪ್‌ಗಳು ವೃದ್ಧರಿಗೆ ವಿಶೇಷ ಚೇತನರಿಗೆ ಅನುಕೂಲವಾಗುವ ಬದಲು ಸಮಸ್ಯೆಯಾಗುವಂತೆ ಕಂಡು ಬರುತ್ತಿವೆ. ಕೂಡಲೇ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ತೊಂದರೆಯಾಗುವಂತಿರುವ ರ‌್ಯಾಂಪ್‌ಗಳನ್ನು ತೆರವುಗೊಳಿಸಿ ಪುನಃ ಅನುಕೂಲವಾಗುವಂತೆ ರ‌್ಯಾಂಪ್‌ಗಳನ್ನು ನಿರ್ಮಿಸಬೇಕು. ಇಲ್ಲದೇ ಇದ್ದರೆ ಕರವೇ ಯಿಂದ ಕ್ಯಾಂಪ್‌ಗಳನ್ನು ತೆರವುಗೊಳಿಸುವುದಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ, ಮುಖಂಡರು ರಾಮಚಂದ್ರಪ್ಪ ಹಿಂಡಸಗಟ್ಟಿ, ಖಲಂದರ ಎತ್ತಿನಹಳ್ಳಿ,, ಪ್ರಕಾಶ ಡಂಬರ್, ರಾಜೇಸಾಬ ಮಾನೇಗಾರ, ಈರಪ್ಪ ಅಂಗಡಿ, ಶೇಖಪ್ಪ ಕಟ್ಟೇಕಾರ, ಆಶೀಫ್ ಬಣಕಾರ, ಶಫಿ ಹಾವೇರಿ, ಅಲತಾಫ್ ಜಂಬೂರ, ಇರ್ಪಾನ್ ಪುರದಕೇರಿ, ತೌಶೀಫ್ ಸೈಕಲ್‌ಗಾರ, ನೂರ್ ಮಕಂದಾರ, ಜ್ಯೋತಿ ಅಂಸಾಲಿ, ಅನೀಲ್ ಬಾವರ್‌ಕ‌ರ್, ಯಾಸೀನ್ ರಟ್ಟಿಹಳ್ಳಿ, ಹೆಡಿಯಾಲ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...