ಹಾವೇರಿ | ಕಲುಷಿತ ಆಹಾರ ಸೇವನೆ; ಹಾಸ್ಟೆಲ್ ವಿದ್ಯಾರ್ಥಿಗಳ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Date:

19 ವಿದ್ಯಾರ್ಥಿನಿಯರು ಖಾಸಗಿ ಪಿ.ಜಿ.ಸೆಂಟರ್ ನ ಕಲುಷಿತ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡು ವೀರಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳನ್ನು ಎಸ್ಎಫ್ಐ ನಿಯೋಗ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಮಾಹಿತಿ ಪಡೆದುಕೊಂಡು, ವೈದ್ಯರ ಹಾಗೂ ಪೋಷಕರ ಜೊತೆಗೆ ಚರ್ಚಿಸಿದೆ.

ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಖಾಸಗಿ ಪಿ.ಜಿ.ಸೆಂಟರ್ ಆಹಾರ ಸೇವಿಸಿ ಅಸ್ವಸ್ಥ ಆಗಿರುವ ಘಟನೆ ಶನಿವಾರ ನಡೆದಿದೆ.

“ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ವಿದ್ಯಾರ್ಥಿಗಳು ಆರೋಗ್ಯದಲ್ಲಿ ಏರುಪೇರು ತೀವ್ರಗೊಂಡ ನಂತರ ಒಬ್ಬೊಬ್ಬರಾಗಿ ಆಟೋದಲ್ಲಿ ಹೋಗಿ ವೀರಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಈ ವರೆಗೂ ಯಾವುದೇ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆಹಾರ ಇಲಾಖೆಯ ಅಧಿಕಾರಿಗಳು, ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಣೆ ಮಾಡದ ನಿರ್ಲಕ್ಷ್ಯವನ್ನು” ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲುಷಿತ ಆಹಾರದಿಂದ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರಿಗೆ ಸೂಕ್ತ ಚಿಕಿತ್ಸೆ ಮುಂದುವರೆಯಬೇಕು. 19 ವಿದ್ಯಾರ್ಥಿನಿಯರು ಪೈಕಿ 3-4 ವಿದ್ಯಾರ್ಥಿನಿಯರಿಗೆ ಅತ್ಯಂತ ಆರೋಗ್ಯದ ಸಮಸ್ಯೆ ಇದೆ ಅವರಿಗೆ ಉನ್ನತ ಚಿಕಿತ್ಸೆ ಒದಗಿಸಬೇಕು. ಒಟ್ಟಾರೆ ಘಟನೆಯ ಕುರಿತು ಸ್ವಯಂ ದೂರ ದಾಖಲು ಮಾಡಿಕೊಂಡು ಸಮಗ್ರ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದೆ.

“ದೂರದ ಜಿಲ್ಲೆಯಿಂದ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಗೆ ಬಂದ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಕಲ್ಪಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ ಆದರೆ ಸರ್ಕಾರಕ್ಕೆ ಅನೇಕ ಬಾರಿ ಹೋರಾಟ ಮಾಡಿ ಮನವಿ ಪತ್ರ ಕೊಟ್ಟರು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಿಕೊಡುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿವೆ. ಸರ್ಕಾರಿ ಹಾಸ್ಟೆಲ್ ಸೌಲಭ್ಯ ಸಿಗದೆ ಇರುವ ವಿದ್ಯಾರ್ಥಿಗಳು ಖಾಸಗಿ ವಸತಿ ನಿಲಯಗಳು ಹಾಗೂ ಬಾಡಿಗೆ ರೂಮ್ ಗಳ ಮೇಲೆ ಅವಲಂಬನೆ ಆಗಿದ್ದಾರೆ” ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.

“ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಬಾಡಿಗೆ ಬಿಲ್ಡಿಂಗ್ ನಲ್ಲಿ ನಡೆಯುತ್ತಿದ ವಸತಿ ನಿಲಯಕ್ಕೆ ಅಡ್ವಾನ್ಸ್ 5.000 ರೂ ಕಟ್ಟಿಸಿಕೊಂಡು ಪ್ರತಿ ತಿಂಗಳು 2.500 ರೂ ಮೆಸ್ ಬಿಲ್ ಪಾವತಿ ಮಾಡಿಸಿಕೊಂಡು ಬರುವ ಪದ್ಧತಿ ನಡೆಯುತ್ತಿದೆ. ಇದು ಬಡ ವಿದ್ಯಾರ್ಥಿಗಳಿಗೆ ಭಾರಿ ಹೊರೆಯಾಗುತ್ತಿದ್ದು ಹಣ ಸುಲಿಯುವ ಹುನ್ನಾರಕ್ಕೆ ಕಡಿವಾಣ ಹಾಕಿ. ಕಾಲೇಜಿನ ಹಿಂದುಗಡೆ ಅನೇಕ ಕೊಠಡಿಗಳು ಖಾಲಿ ಬಿದ್ದುರು ಖಾಸಗಿ ಪಿ.ಜಿ‌.ಸೆಂಟರ್ ಗಳಿಗೆ ಯಾಕೆ? ಲಕ್ಷಾಂತರ ರೂಪಾಯಿ ಬಾಡಿಗೆ ಕೊಡಬೇಕು? ಯಾರ? ಜೇಬು ತುಂಬಿಸಲು ಖಾಸಗಿ ಬಿಲ್ಡಿಂಗ್ ನಲ್ಲಿ ವಿದ್ಯಾರ್ಥಿನಿಯರನ್ನು ಇರಿಸಲಾಗಿತ್ತು? ಇದರ ಸಮಗ್ರ ತನಿಖೆ ನಡೆಯಬೇಕು” ಎಂದರು.

“ಕೂಡಲೇ ಕಾಲೇಜಿನ ಹಿಂದುಗಡೆ ಇರುವ ಬೃಹತ್ ಕಟ್ಟಡಗಳಲ್ಲಿಯೇ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳನ್ನು ತೆರೆಯಬೇಕು. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಬಸ್ಸಿನ ಬೇಡಿಕೆ ಹೆಚ್ಚಾಗಿದ್ದು ಕೂಡಲೇ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿಯಾಗಿ ಕನಿಷ್ಟ 20 ಬಸ್ ಗಳನ್ನು ಬಿಡಬೇಕು. ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಘಟನೆಯಿಂದ ಎಚ್ಚೆತುಕೊಂಡು ನಿಯಮಗಳನ್ನು ಗಾಳಿಗೆ ತೂರಿದ ಅನಧಿಕೃತ ಖಾಸಗಿ ಪಿ.ಜಿ.ಸೆಂಟರ್ ಗಳನ್ನು ಪರಿಶೀಲನೆ ನಡೆಸಬೇಕು. ಶಿಸ್ತು ಕ್ರಮ ಜರುಗಿಸಬೇಕು”ಎಂದು ಆಗ್ರಹಿಸಿದರು.

ಎಸ್ಎಫ್ಐ ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಹಾಸ್ಟೆಲ್ ವಿದ್ಯಾರ್ಥಿಗಳ ಉಪಸಮಿತಿ ರಾಜ್ಯ ಸಂಚಾಲಕ ಅರುಣ್ ನಾಗವತ್, ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ, ಮುಖಂಡರಾದ ಸಿದ್ದು ಹೆಚ್, ದಯನಾಂದ ಎಸ್ ಕೆ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...