ಹಾವೇರಿ | ರೈತರ, ಬಡವರ ಸಂಕಷ್ಟಕ್ಕೆ ಸ್ಪಂದಿಸಲು ಸಹಕಾರ ಕ್ಷೇತ್ರ ಜನ್ಮ ತಾಳಿತು: ಶಾಸಕ ಶ್ರೀನಿವಾಸ ಮಾನೆ

Date:

“ರೈತರು ಮತ್ತು ಬಡವರು ಶ್ರೀಮಂತರ ಎದುರು ತಲೆ ಬಾಗಿ ನಿಲ್ಲುವಂಥ ಸ್ಥಿತಿ ಹಿಂದೆ ಇತ್ತು. ಸಾಲ ಮರುಪಾವತಿ ಮಾಡದಿದ್ದರೆ ಶ್ರೀಮಂತರ ಮನೆಗಳಲ್ಲಿ ಜೀತದಾಳುಗಳಾಗಿ ತಲೆ ತಲಾಂತರದಿಂದ ಕೆಲಸ ಮಾಡಬೇಕಿತ್ತು. ಇದನ್ನು ತಪ್ಪಿಸಲು ಕಣಗಿನಹಾಳದ ಸಿದ್ಧನಗೌಡ ಪಾಟೀಲ ಅವರು ಸಹಕಾರಿ ಸಂಘ ಸ್ಥಾಪಿಸಿದರು. ಸಹಕಾರದ ಮೂಲಕ ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ” ಎಂದು ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಡೂರು ಗ್ರಾಮದ ಮಾಲತೇಶ ದೇವಸ್ಥಾನದ ಆವರಣದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಸಂಘದ ಉಗ್ರಾಣ ನಿರ್ಮಾಣಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ 10 ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದರು. ಆಡೂರಿನ ಸಂಘ ನೂರು ವರ್ಷ ಪೂರೈಸಿರುವುದು ಖುಷಿಯ ಸಂಗತಿ, ಸಂಘದ ಬೆಳವಣಿಗೆಯ ವಿಚಾರದಲ್ಲಿ ರಾಜಕಾರಣ ಮಾಡದೇ ಕೈ ಜೋಡಿಸಿ, ಶ್ರಮ ವಹಿಸಿರುವ ಗ್ರಾಮಸ್ಥರು ಅಭಿನಂದನೆಗೆ ಅರ್ಹರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, “ಗ್ರಾಮೀಣ ಜನರು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲು ಮತ್ತು ಉಳಿತಾಯ ಮನೋಭಾವ ಹೆಚ್ಚಿಸಿಕೊಳ್ಳಲು ಸಹಕಾರ ಕ್ಷೇತ್ರ ವರದಾನವಾಗಿದೆ. ಅನಗತ್ಯ ಹಸಕ್ಷೇಪ ಮತ್ತು ಮೇಲಾಟಗಳಿಂದ ಸಹಕಾರ ಕೇತಕ್ಕೆ ತೀವ್ರ ಹಿನ್ನಡ ಉಂಟಾಗುತ್ತಿದೆ” ಎಂದರು.

ಜಿಪಂ ಮಾಜಿ ಸದಸ್ಯ ಎನ್.ಬಿ.ಪೂಜಾರ, ತಾಪಂ ಮಾಜಿ ಉಪಾಧ್ಯಕ್ಷ ಸಿದ್ದಲಿಂಗಪ್ಪ ಶಂಕರಿ ಕೊಪ್ಪ ಮಾತನಾಡಿ, “ಉತ್ತಮ ಸೇವೆಗಾಗಿ ಸಂಘ ರಾಜ್ಯಮಟ್ಟದ ಹತ್ತು, ಹಲವು ಪ್ರಶಸ್ತಿಗಳಿಗೆ ಭಾಜನವಾಗಿದೆ. ಕೂಡಿ ಬಿದ್ದ ಹಾನಿಯನ್ನು ಕಳೆದು ಲಾಭದತ್ತ ಮುಖ ಮಾಡಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಕಾರಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : ಔರಾದ್‌ ತಾಲ್ಲೂಕಿಗೆ ಆದರ್ಶ‌ ಟಾಪರ್

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ದೊಡ್ಡಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಹಾವೇರಿಯ ಮಾಜಿ ಶಾಸಕ ಶಿವರಾಜ ಸಜ್ಜನರ, ಕೆಎಂಎಫ್ ಅಧ್ಯಕ್ಷ ಮಂಜನಗೌಡ ಪಾಟೀಲ, ಕೆಸಿಸಿ ಬ್ಯಾಂಕ್ ನಿರ್ದೇಶಕ ಸದಾನಂದ. ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಮಹೇಶ ಬಣಕಾರ, ಟಿಎಪಿಸಿಎಂಎಸ್ ಅಧ್ಯಕ್ಷ ವಿಜಯೇಂದ್ರ ಕನವಳ್ಳಿ, ಗ್ರಾಪಂ ಅಧ್ಯಕ್ಷ ಮಾಲತೇಶ ಬಾರ್ಕಿ, ಡಾ. ಕೆ. ಎಸ್. ಕುಲಕರ್ಣಿ, ಶಿವಬಸಪ್ಪ ಪೂಜಾರ, ಭರಮಣ್ಣ ಶಿವೂರ. ಶಂಕರಗೌಡ ಸುಂಕದ, ಪುಟ್ಟಪ ನರೇಗಲ್, ಮಹದೇವಪ್ಪ ಬಾಗಸರ, ಕವಿತಾ ಕಡೇರ, ಗುಡ್ಡಪ ಮನ್ನಂಗಿ ಸೇರಿದಂತೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...