ಹಾವೇರಿ | ಕಂಪನಿಗಳಿಂದ ಕೋಟ್ಯಂತರ ವಂಚನೆ: ಸಂತ್ರಸ್ತರಿಗೆ ಬರ್ಡ್ಸ್ ಕಾಯ್ದೆಯಡಿ ಹಣ ನೀಡಲು ಸರ್ಕಾರಕ್ಕೆ ಆಗ್ರಹ

Date:

ಕಡಿಮೆ ಅವಧಿಯಲ್ಲಿ ನಿಮ್ಮ ಹಣ ಡಬಲ್ ಮಾಡುತ್ತೇವೆ ಎಂದು ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರೂ. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ (ತಗಿ ಪೀಡಿತ ಜಮಾಕರ್ತ ಪರಿವಾರ) ವತಿಯಿಂದ ಹಾವೇರಿ ಜಿಲ್ಲೆಯ ದೇವಗಿರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ನಡೆಸಿದ್ದು ಹನ್ನೆರಡನೇ ದಿನಕ್ಕೆ ಕಾಲಿಟ್ಟಿದೆ.

ಈ ಧರಣಿಯಲ್ಲಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆಯ ರಾಜ್ಯಾಧ್ಯಕ್ಷ ಅಪ್ಪಾಸಾಹೇಬ್ ಬುಗಡೆ ಮಾತನಾಡಿ, “ಅನೇಕ ಕಂಪನಿಗಳು ಜಿಲ್ಲೆ ಸೇರಿದಂತೆ ದೇಶಾದ್ಯಂತ ಒಂದು ಸಲ ಹಣ ಠೇವಣಿ ಇಟ್ಟರೆ ಐದು, ಆರು ವರ್ಷಗಳಲ್ಲಿ ದುಪ್ಪಟ್ಟು ಮಾಡಿಕೊಡುತ್ತೇವೆ. ಷೇರು ಹಣ ಪಾವತಿಸಿದರೆ, ಹತ್ತಾರು ಪಟ್ಟು ಲಾಭ ದೊರೆಯುತ್ತದೆ ಎಂದೆಲ್ಲ ನಂಬಿಸಿ ಕೋಟ್ಯಂತರ ರೂ. ಪಾವತಿಸಿಕೊಂಡು ಕಚೇರಿಗಳನ್ನು ಬಂದ್ ಮಾಡಿಕೊಂಡು ಪರಾರಿಯಾಗಿವೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳೇ ಕಾರಣ” ಎಂದು ಆರೋಪಿಸಿದರು.

ಮೊದಲಿಗೆ ಸರಕಾರಗಳೆ ಈ ಕಂಪನಿಗಳಿಗೆ ಲೈಸೆನ್ಸ್ ಕೊಟ್ಟಿತು. 2014-15ರಲ್ಲಿ ಸೆಬಿ ಮುಖಾಂತರ ಎಲ್ಲ ಕಂಪನಿಗಳನ್ನು ಬಂದು ಮಾಡಿ, ಆ ಕಂಪನಿಯಲ್ಲಿರುವ ಹಣವನ್ನು ಜಪ್ತಿ ಮಾಡಿತು. ಈ ಎಲ್ಲ ಹಣ ಸರಕಾರ ವಶದಲ್ಲಿದೆ. ಹತ್ತು ವರ್ಷಗಳಾದರು ಗ್ರಾಹಕರಿಗೆ ಹಣ ಕೊಡುವ ನಿಟ್ಟಿನಲ್ಲಿ ಮನಸ್ಸು ಮಾಡಿಲ್ಲ. ಗ್ರಾಹಕರು ತುಂಬಿದ ಹಣ ಸರಕಾರ ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಕ್ರೂರ ಧೋರಣೆ ಹೊಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರಿಗೆ ಹಾವೇರಿ ಜಿಲ್ಲೆಯೊಂದರಲ್ಲೇ ಒಂದು ಕಂಪನಿ 40 ಕೋಟಿ ರೂ. ವಂಚಿಸಿದೆ. ಇಂತಹ ಅನೇಕ ಸಂಸ್ಥೆಗಳು ವಂಚನೆ ಮಾಡಿವೆ. ವಂಚನೆಗೀಡಾದವರಿಗೆ ಬರ್ಡ್ಸ್ ಕಾಯ್ದೆಯಡಿ ಅರ್ಜಿ ಸ್ವೀಕರಿಸಿ, 180 ದಿನದೊಳಗೆ ಎಲ್ಲ ಅರ್ಜಿದಾರರಿಗೆ ಹಣ ಕೊಡಿಸಬೇಕೆಂದು ಅಪ್ಪಾ ಸಾಹೇಬ್ ಬುಗಡಿ ಆಗ್ರಹಿಸಿದರು.

ಈ ಧರಣಿಯಲ್ಲಿ ಟಿಪಿಜೆಪಿ ಜಿಲ್ಲಾಧ್ಯಕ್ಷ ಸೋಮಶೇಖರೆಡ್ಡಿ ಮೈದೂರ, ಉಪಾಧ್ಯಕ್ಷರು ಸುರೇಶ ಬಸಪ್ಪ ವನಹಳ್ಳಿ, ಕಾರ್ಯದರ್ಶಿ : ಸೈಯ್ಯದಸಾಬ್ ಹುಲಗೂರು, ಶಿಗ್ಗಾವ್ ತಾಲೂಕು ಅಧ್ಯಕ್ಷ, ರಮೇಶ್ ಮರಿಯಪ್ಪ ಹರಿಜನ ಹಾಗೂ ವಂಚನೆಗೆ ಒಳಗಾದ ಸಂತ್ರಸ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...