ಹಾವೇರಿ | ಸೋಲು ಜೀವನದ ಪಾಠ ಕಲಿಸುತ್ತದೆ: ಶಾಸಕ ಶ್ರೀನಿವಾಸ ಮಾನೆ

Date:

“ಗೆಲುವು, ಯಶಸ್ಸಿನಲ್ಲಿ ಕಲಿಕೆ ಏನೂ ಇಲ್ಲ. ಆದರೆ ಸೋಲು ಜೀವನದ ಪಾಠ ಕಲಿಸುತ್ತದೆ. ಹಿನ್ನಡೆ ಆದರೆ ಆಲೋಚಿಸಲು ಆರಂಭಿಸುತ್ತೇವೆ. ಆಗ ಮಾತ್ರವೇ ನಮಗೆ ಯಶಸ್ಸಿನ ದಾರಿ. ಗೆಲುವಿನ ಮಂತ್ರ ಸಿಗಲಿದೆ” ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ತಿಳವಳ್ಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

“ನಮ್ಮ ಮುಂದಿನ ಭವಿಷ್ಯವನ್ನು ವಿದ್ಯಾರ್ಥಿ ಜೀವನವೇ ನಿರ್ಧರಿಸುತ್ತದೆ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನೂ ಸದ್ಬಳಕೆ ಮಾಡಿಕೊಳ್ಳಬೇಕು. ತಂತ್ರಜ್ಞಾನವನ್ನು ಮನೋರಂಜನೆಗೆ ಮಾತ್ರ ಸೀಮಿತ ಮಾಡಿಕೊಳ್ಳದೇ ಅಧ್ಯಯನಕ್ಕೆ ಬಳಸಿಕೊಳ್ಳಬೇಕು. ಜಗತ್ತಿನ ಆಗು, ಹೋಗುಗಳನ್ನು ಅರಿಯಬೇಕು. ಜ್ಞಾನಾರ್ಜನೆ ಸರಿಯಾದರೆ ಉತ್ತಮ ಭವಿಷ್ಯ ಲಭಿಸಲಿದೆ. ಯಾವುದಕ್ಕೆ ಸಮಯ ಎಷ್ಟು ಕೊಡಬೇಕು ಎನ್ನುವುದನ್ನು ಮೊದಲೇ ನಿರ್ಧರಿಸಿಕೊಳ್ಳಿ, ಸಮಯ ವ್ಯರ್ಥ ಮಾಡಿದರೆ ಸಾಧನೆ ಆಗದು. ನಿಶ್ಚಿತ ಗುರಿಯ ಕಡೆಗೆ ಮುನ್ನುಗ್ಗಿ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ” ಎಂದು ಕಿವಿಮಾತು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿ ಉಪನ್ಯಾಸಕ ಡಾ.ವಿಶ್ವನಾಥ ಬೋಂದಾಡೆ ಮಾತನಾಡಿ, “ಸಿಕ್ಕ ಅವಕಾಶ, ಸಮಯವನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸು ಸಾಧಿಸುವುದು ಜಾಣತನ. ವಿದ್ಯಾರ್ಥಿ ಜೀವನದಲ್ಲಿ ಸಮಯ ಹರಣ ಮಾಡಿದರೆ ಭವಿಷ್ಯದಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ. ಜಾಗತಿಕ ಪೈಪೋಟಿ ಹೆಚ್ಚಿರುವ ಈ ಸಂದರ್ಭದಲ್ಲಿ ಸಾಮರ್ಥ್ಯ ನಿರೂಪಿಸುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ” ಎಂದರು.

ಪ್ರಾಚಾರ್ಯ ಸೀತಾಳದ ಎಸ್. ಎಂ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ರೇಖಾ ಕುರುಬರ, ಮಾಜಿ ಅಧ್ಯಕ್ಷ ಆರೀಫ್ ಲೋಹಾರ, ತಾಪಂ ಮಾಜಿ ಸದಸ್ಯ ಫಯಾಜ್ ಲೋಹಾರ, ಕೆಎಂಎಫ್ ನಿರ್ದೇಶಕ ಚಂದ್ರಪ್ಪ ಜಾಲಗಾರ, ಶಿವಯೋಗಿ ಒಡೆಯರ, ಮಹ್ಮದ್‌ ಫಾರೂಕ್ ಮೂಡಿ, ಬಸವರಾಜ ಒಬಣ್ಣನವರ, ಶೇಕಪ್ಪ ಬಮ್ಮನಹಳ್ಳಿ, ನಾಗರಾಜ ಭೈರೋಜಿಸಮೀವುಲ್ಲಾ ಲೋಹಾರ, ರಾಜೂ ಶೇಷಗಿರಿ, ಗಣೇಶ ಹಳ್ಳೇರ, ಬಸವರಾಜ ಚವ್ಹಾಣ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...