ಹಾವೇರಿ | ಕನ್ನಡದ ಅಭಿವೃದ್ಧಿಗೆ ಶಿಕ್ಷಣ, ಉದ್ಯೋಗ ಬೇಕೇ ಹೊರತು ರಾಜಕಾರಣಿಗಳ ಭಾಷಣಗಳಲ್ಲ: ಬಸವರಾಜ ಪೂಜಾರ

Date:

ನಮ್ಮ ರಾಜ್ಯದ ಮಾತೃ ಭಾಷೆ ಕನ್ನಡ ಉಳಿವಿಗಾಗಿ, ಅಭಿವೃದ್ಧಿಗಾಗಿ ಕನ್ನಡಿಗರಿಗೆ ಶಿಕ್ಷಣ ಉದ್ಯೋಗಗಳನ್ನು ನೀಡಬೇಕೇ ಹೊರತು ರಾಜಕಾರಣಿಗಳ ಹುಸಿ ಭಾಷಣಗಳಲ್ಲ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

ಹಾವೇರಿ ಪಟ್ಟಣದ ಎಸ್‌ಎಫ್‌ಐ ಜಿಲ್ಲಾ ಕಚೇರಿ ಎದುರು 69ನೇ ಕನ್ನಡ ರಾಜ್ಯೋತ್ಸವದ, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

“ನೆಲ, ಜಲ, ಭಾಷೆ, ಆಹಾರ, ಆರೋಗ್ಯ ಸೇರಿದಂತೆ ಘನತೆಯ ಬದುಕು ಕಟ್ಟಿಕೊಳ್ಳಲು ಉದ್ಯೋಗಗಳಲ್ಲಿ ಕನ್ನಡಿಗರಿಗೆ ಬಹುಪಾಲು ಅವಕಾಶ ಕಲ್ಪಿಸಬೇಕು. ಸ್ಥಳೀಯರಿಗೆ ಉದ್ಯೋಗ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ಕರ್ನಾಟಕ ಏಕೀಕರಣ ಚಳುವಳಿಯ ಹೋರಾಟಗಾರರನ್ನು ಸ್ಮರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಸರ್ಕಾರಿ ಶಾಲೆ ವಿಲೀನದ ಹೆಸರಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಲು ಬಿಜೆಪಿ ಸರ್ಕಾರ ಮುಂದಾಗಿತ್ತು. ಆ ಸಂದರ್ಭದಲ್ಲಿ ಎಸ್ಎಫ್ಐ ಮಧ್ಯೆ ಪ್ರವೇಶ ಮಾಡಿ, ಹೋರಾಟ ಮಾಡಿತ್ತು. ಇದರ ಫಲವಾಗಿ ಸಾವಿರಾರು ಸರ್ಕಾರಿ ಕನ್ನಡ ಶಾಲೆಗಳು ಉಳಿದವು. ಮಾತೃಭಾಷ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಸರ್ಕಾರಿ ಕನ್ನಡ ಶಾಲೆಗಳಿಗೆ ಹೆಚ್ಚು ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಪಡಿಸಬೇಕು”‌ ಎಂದು ಒತ್ತಾಯಿಸಿದರು.

“ದೇಶದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇತರೆ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆ ಕನ್ನಡ ವಿರೋಧಿಯಾಗಿದ್ದು, ಈ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣವನ್ನು ಕೇಂದ್ರ ಸರ್ಕಾರ ತನ್ನ ಹಿಡಿತದಲ್ಲಿಟ್ಟುಕೊಳ್ಳುವ ಹುನ್ನಾರ ಅಡಗಿದೆ. ಈ ಪರೀಕ್ಷೆಯಲ್ಲಿ ಇಂಗ್ಲಿಷ್, ಹಿಂದಿ ಭಾಷೆಯ ಅಭ್ಯರ್ಥಿಗಳೇ ಹೆಚ್ಚು ಪ್ರವೇಶ ಪಡೆಯುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನಾಂಬ ಜಾತ್ರಾ ಮಹೋತ್ಸವ | ಪೌರಕಾರ್ಮಿಕರ ಮೇಲೆ ಹಲ್ಲೆ; ಪೊಲೀಸ್-ಕಂದಾಯ ಇಲಾಖೆ ವಿರುದ್ಧ ಪ್ರತಿಭಟನೆ

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ದುರುಗಪ್ಪ ಯಮ್ಮಿಯವರ, ಜಿಲ್ಲಾ ಮುಖಂಡರಾದ ಶೃತಿ ಆರ್ ಎಂ, ದೇವರಾಜ ಅಕ್ಕಸಾಲಿ, ಗೌತಮ ಸಾವಕ್ಕನವರ, ಕೀರ್ತನಾ ಹಿರಿಯಕ್ಕನವರ, ಮಹೇಶ್ ಮರೋಳ, ಧನುಷ್ ದೊಡ್ಡಮನಿ, ಮಾಲತೇಶ್ ರಾಣೇಬೆನ್ನೂರ, ತೇಜಸ್ ಎನ್ ಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...