ಹಾವೇರಿ | ಮೇ 26ರಿಂದ 28ರವಗೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ

Date:

“ಮೇ ೨೬ರಿಂದ ೨೮ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಅವಧಿಯಲ್ಲಿ ಸರ್ಕಾರವು ವಸತಿ ಶಾಲೆಗಳ ನೌಕರರ ಬೇಡಿಕೆಗಳ ಕುರಿತು ಸ್ಪಂದಿಸದೇ ಹೋದಲ್ಲಿ ಮೇ ೨೯ರಿಂದ ಜಿಲ್ಲಾ ಹಂತದಲ್ಲಿ ಸತ್ಯಾಗ್ರಹ ಮುನ್ನಡೆಸಲಿದ್ದೇವೆ. ಅದರಂತೆ ಮೇ ೨೯ರಂದು ಆಯಾ ವಸತಿ ಶಾಲೆಗಳಲ್ಲಿ ಸಿಬ್ಬಂದಿಗಳು ತಮ್ಮ ಕೈಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇಸಬೇಕು” ಎಂದು ಆರ್ ಎಸ್ ಇ ಎ ಸಂಘಟನಾ ಕಾರ್ಯದರ್ಶಿ ವಿರೇಶ ಮರಿಗೌಡ್ರ ಒತ್ತಾಯಿಸಿದರು.

ಹಾವೇರಿ ಪಟ್ಟಣದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಸತಿ ಶಾಲೆಗಳ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗೆ ಡಾ.ವಿಜಯಮಹಾಂತೇಶ ದಾನಮ್ಮನವರ ಮನವಿ ಸಲ್ಲಿಸಿ ಮಾತನಾಡಿದರು.

“ನಮ್ಮ ಬೇಡಿಕೆಗಳನ್ನು ಸ್ಪಂದಿಸದೆ ಹೋದಲ್ಲಿ ಮೇ ೩೦ರಂದು ತರಗತಿಗಳನ್ನು ಬಹಿಷ್ಕರಿಸಿ ಅಸಹಕಾರ ವ್ಯಕ್ತಪಡಿಸಲಾಗುವುದು. ಮೇ ೩೧ರಂದು ಆಯಾ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮೂಲಕ ಸಾಗಿ ಮನವಿ ಸಲ್ಲಿಸಲಿದ್ದೇವೆ. ಇದಕ್ಕೆ ಸ್ಪಂದಿಸದೇ ಹೋದಲ್ಲಿ ಜೂ.೨ರಿಂದ ಆಯಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಥವಾ ಆಯಾ ವಸತಿ ಶಾಲೆಗಳ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಚ್ಚರಿಕೆ ನೀಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು, ಅದಕ್ಕೆ ಪೂರಕ ಸ್ಪಂದನೆ ಸಿಕ್ಕಿಲ್ಲ. ಈಗಾಗಲೇ ವಸತಿ ಶಾಲೆಗಳು ಕ್ರೇಸ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸರ್ಕಾರಿ ನೌಕರರಿಗೆ ಸಿಗಬೇಕಾದ ನ್ಯಾಯಯುತ ಸೌಲಭ್ಯಗಳು ವಸತಿ ಶಾಲೆಗಳ ನೌಕರರಿಗೆ ಸಿಗುತ್ತಿಲ್ಲ. ಹೀಗಾಗಿ ‘ವಸತಿ ಶಿಕ್ಷಣ ನಿರ್ದೇಶನಾಲಯ’ ಎಂದು ಪ್ರತ್ಯೇಕವಾಗಿ ರಚಿಸಿ ರಾಜ್ಯದ ಪ್ರೌಢಶಾಲಾ ಶಿಕ್ಷಣ ಇಲಾಖೆಯಂತೆ, ನ್ಯಾಯೋಚಿತವಾದ ಗೌರವ ಮತ್ತು ಸೌಲಭ್ಯ ಕಲ್ಪಿಸಬೇಕು. ಈಗಾಗಲೇ ಕ್ರೇಸ್ ಅಡಿಯಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಯ ವಸತಿ ಶಾಲೆಗಳು ನಡೆಯುತ್ತಿದ್ದು, ವಸತಿ ಶಿಕ್ಷಣ ನಿರ್ದೇಶನಾಲಯ ಎಂದು ಪ್ರತ್ಯೇಕವಾಗಿ ರಚಿಸದೇ ಹೋದಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಯ ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನು ಸಬಂದಿಸಿದ ಇಲಾಖೆಗಳ ಮುಂದೆ ಬೃಹತ ಪ್ರತಿಭಟನೆ ಮಾಡಲಾಗುವುದು” ಎಂದರು.

“ಹೆಸರಿಗಷ್ಟೇ ಸರ್ಕಾರಿ ನೌಕರಿ. ವಸತಿ ಶಾಲೆಯ ಸಿಬ್ಬಂದಿಗಳಿಗೆ ಸರ್ಕಾರಿ ನೌಕರರ ಯಾವುದೇ ಸೌಲಭ್ಯಗಳಿಲ್ಲ. ಮರಣ ಅಥವಾ ನಿವೃತ್ತಿಯ ಪಿಂಚಿಣಿ ವ್ಯವಸ್ಥೆ ಇಲ್ಲ. ವಸತಿ ಶಾಲೆಗಳ ಸಿಬ್ಬಂದಿಗಳ ವೇತನದಿಂದ ಕಡಿತವಾಗುತ್ತಿರುವ ಮನೆ ಬಾಡಿಗೆ ಭತ್ಯೆಯಿಂದ ವಿನಾಯಿತಿ ನೀಡಬೇಕು. ಅಲ್ಲದೆ ವಸತಿ ಶಾಲಾ ಸಿಬ್ಬಂದಿಗಳ ಮೇಲೆ ವಾರಕ್ಕೆ ಒಂದು ದಿನ ಎಂಒಡಿ ಎಂಬ ಹೆಚ್ಚುವರಿ ಕರ್ತವ್ಯ, ವಸತಿ ಶಾಲೆಯಾಗಿದ್ದರಿಂದ ಮಕ್ಕಳ ಓದು, ಬರಹ, ಆಟೋಟ ಸೇರಿದಂತೆ ಅವರ ಜೊತೆಗೆ ಹೆಚ್ಚಿನ ಸಮಯ ಕಳೆಯಬೇಕಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಕಾರ್ಯಭಾರ ನಿರ್ವಹಿಸುವ ಕಾರಣಕ್ಕೆ ಶೇ.೧೦ರಷ್ಟು ವಿಶೇಷ ಭತ್ಯೆ ನೀಡಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ವಿಕಲಚೇತನರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿಯಾಗಬೇಕು: ಗೋವಿಂದಪ್ಪ

ಮನವಿ ಸಮಯದಲ್ಲಿ ವಸತಿ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ರಮಾ ಗಲಗಲಿ, ಪದಾಧಿಕಾರಿಗಳು ಮಲ್ಲಯ್ಯ ಇಂಗಳಗಿಮಠ, ಮಂಜುನಾಥ ಮಲ್ಲಪ್ಪನವರ, ಸಲೀಂ ಮಲಿಕ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...