ಹಾವೇರಿ | ಎಲ್ಲರೂ ವ್ಯಸನದ ವಿರುದ್ಧ ಹೋರಾಡುವ ದಿಟ್ಟ ನಿರ್ಧಾರ ಮಾಡಬೇಕಾಗಿದೆ: ಅನಿತಾ ಡಿಸೋಜಾ

Date:

“ಇಂದಿನ ದಿನಮಾನಗಳಲ್ಲಿ ಯುವಜನತೆ ದುಶ್ಚಟಗಳ ಹಿಂದೆ ಬಿದ್ದಿದೆ. ಸ್ಥಳೀಯವಾಗಿ ವಿದ್ಯಾರ್ಥಿಗಳು ಗಾಂಜಾ ಚಟಕ್ಕೆ ಬಲಿಯಾಗಿದ್ದು, ಮಾನಸಿಕ ಕಾಯಿಲೆಯಾಗಿ ಬದಲಾಗುತ್ತಿದೆ. ಪ್ರತಿವರ್ಷ ಸುಮಾರು ಐವತ್ತು ಸಾವಿರದಷ್ಟು ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಎಲ್ಲರೂ ವ್ಯಸನದ ವಿರುದ್ಧ ಹೋರಾಡುವ ದಿಟ್ಟ ನಿರ್ಧಾರ ಮಾಡಬೇಕಾಗಿದೆ” ಎಂದು ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಅನಿತಾ ಡಿಸೋಜಾ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ವಿಶ್ವಮಾದಕ ವಿರೋಧಿ ದಿನದ ಅಂಗವಾಗಿ ರೋಶನಿ ಸಮಾಜ ಸೇವಾ ಸಂಸ್ಥೆ, ರೋಶನಿ ವ್ಯಸನಮುಕ್ತಿ ಕೇಂದ್ರ ಹಾಗೂ ಪೊಲೀಸ್ ಠಾಣೆ, ರೈಟ್ ಗೈಡೆನ್ಸ್ ಪಿಯು ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾದಕವಸ್ತು ದಿನಾಚರಣೆಯ ಅಂಗವಾಗಿ ಜಾಥಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

“ಮದ್ಯಪಾನದಿಂದ ದೇಶದಲ್ಲಿ ವರ್ಷಕ್ಕೆ ಸುಮಾರು ಹದಿನೆಂಟು ಲಕ್ಷ ಜನರು ಸಾಯುತ್ತಿದ್ದಾರೆ. ಗುಟಕಾದಿಂದ ಸುಮಾರು ಹದಿನಾಲ್ಕು ಲಕ್ಷ ಜನರು ಸಾಯುತ್ತಿದ್ದಾರೆ. ಧೂಮಪಾನದಿಂದ ಮೂವತ್ತು ಲಕ್ಷ ಜನರು ಸಾಯುತ್ತಿದ್ದಾರೆ. ಇದರಿಂದ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ರೈಟ್ ಗೈಡೆನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಆರ್ ರವಿಕುಮಾರ್ ಮಾತನಾಡಿ, “ದುಶ್ಚಟಗಳು ಇಂದಿನ ಸಮಾಜಕ್ಕೆ ಅಂಟಿದ ಜಾಡ್ಯವಾಗಿದೆ. ಸಿಗರೇಟಿನಲ್ಲಿ ಸುಮಾರು ಏಳುಸಾವಿರ ವಿಷಪದಾರ್ಥಗಳಿವೆ. ಗುಟಕಾದಲ್ಲಿ ಸುಮಾರು ನಾಲ್ಕು ಸಾವಿರದಷ್ಟು ವಿಷಪದಾರ್ಥಗಳಿವೆ. ಮದ್ಯಪಾನವು ಅನೇಕ ದೈಹಿಕ ಕಾಯಿಲೆಗಳೊಂದಿಗೆ ಮಾನಸಿಕ ಕಾಯಿಲೆಗಳನ್ನೂ ತರುತ್ತದೆ. ಇದರ ವಿರುದ್ಧ ಜಾಗೃತಿ ಮೂಡದಿದ್ದರೆ ಯುವಜನತೆ ಹಾಳಾಗುವುದು ನಿಶ್ಚಿತ. ದೇಶದ ಪ್ರಗತಿಗೂ ಇದು ಮಾರಕವಾಗುತ್ತಿದೆ” ಎಂದರು.

IMG 20250627 WA0020 1

ಹಾನಗಲ್ಲ ಪೊಲೀಸ್ ಠಾಣೆಯ ಚನ್ನವೀರಸ್ವಾಮಿ ಎಂ ಹಿರೇಮಠ ಮಾತನಾಡಿ, “ಪ್ರತಿ ಹಳ್ಳಿ ಹಳ್ಳಿಯಲ್ಲೂ ವ್ಯಸನದಿಂದಾಗಿ ಯುವಜನತೆ ಹಾಳಾಗುತ್ತಿದೆ. ವ್ಯಸನದಿಂದಾಗಿ ಇಂದು ಅತ್ಯಾಚಾರಗಳು, ಕೊಲೆಗಳು, ದರೋಡೆಗಳಂತಹ ಅಪರಾಧಗಳು ಇಂದು ಹೆಚ್ಚುತ್ತಿವೆ. ಇದರ ವಿರುದ್ಧ ನಾವು ದಿಟ್ಟ ಕ್ರಗಳನ್ನು ಕೈಗೊಳ್ಳುತ್ತಿದ್ದೇವೆ. ಸಮಾಜದ ನಾಗರಿಕರು ಈ ವಿಷಯದಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು” ಎಂದರು.

ಆಪ್ತಸಮಾಲೋಚಕ ಸುಮಂತ್ ನಿರ್ದೇಶಿಸಿದ ಬೀದಿ ನಾಟಕವನ್ನು ಮುಖ್ಯ ಸರ್ಕಲ್ ನಲ್ಲಿ ಪ್ರದರ್ಶಿಸಲಾಯಿತು.

ಕಾರ್ಯಕ್ರದಲ್ಲಿ ಸಾಹಿತಿ ಪ್ರಸನ್ನಕುಮಾರ್ ಅರಿವು ಮೂಡಿಸಿದರು. ಅಮಿತಾ ಮಸ್ಕರೇನಸ್ ನಿರೂಪಿಸಿದರು. ಸಿಸ್ಟರ್ ಶಾಂತಿ ಪ್ರತಿಜ್ಞಾವಿಧಿ ಭೋದಿಸಿದರು. ಸುಮಂತ್ ಕೆ ವಂದಿಸಿದರು. ಸಿಸ್ಟರ್ ಬೆನಿಟಾ, ಸಿಸ್ಟರ್ ನಿರ್ಮಲಾ, ಸಿಸ್ಟರ್ ಐರಿನ್, ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೇಣುಕಾ ಪವಾರ್,  ರೈಟ್ ಗೈಡೆನ್ಸ್ ಕಾಲೇಜು  ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು  ರೋಶನಿ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...