ಹಾವೇರಿ | ಕರಿಯಪ್ಪ ಹಾಗೂ ವೀರಮ್ಮ ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು: ಡಾ. ಎಫ್.ಟಿ ಹಳ್ಳಿಕೇರಿ

Date:

“ದೇಶದ ಸ್ವಾತಂತ್ರ್ಯಕ್ಕಾಗಿ ವಿರೋಚಿತವಾಗಿ ಹೋರಾಡಿದವರಲ್ಲಿ ಕರಿಯಪ್ಪ ಯರೇಶೀಮಿ ಹಾಗೂ ವೀರಮ್ಮ ಯರೇಶೀಮಿ ಅತ್ಯಂತ ಪ್ರಮುಖರು. ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು” ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಡೀನ್ ಡಾ. ಎಫ್.ಟಿ ಹಳ್ಳಿಕೇರಿ ಅಭಿಪ್ರಾಯಪಟ್ಟರು.

ಹಾವೇರಿ ಪಟ್ಟಣದ ಡಾ. ಮಹದೇವ ಬಣಕಾರ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾ ಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ, “ಸ್ವಾತಂತ್ರ್ಯ ಸಿಂಹ ಕರಿಯಪ್ಪ ಯರೇಶೀಮಿ” ಹಾಗೂ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪ್ರಕಟಿಸಿದ ‘ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ’ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಮಹಾತ್ಮ ಗಾಂಧೀಜಿ ಅವರ ಅನುಯಾಯಿ ಆಗಿದ್ದುಕೊಂಡು ಕರಿಯಪ್ಪನವರು ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಸ್ವಾತಂತ್ರ್ಯ ಸಮರದಲ್ಲಿ ನಾಡಬಾಂಬ್ ತಯಾರಿಸುವಾಗ ಸ್ಪೋಟಗೊಂಡು ಬಲಗೈ ಮುಂಗೈ ಕಳೆದುಕೊಂಡರೂ ಆಂಗ್ಲರ ವಿರುದ್ಧ ಜೀವಮಾನವಿಡೀ ಹೋರಾಡಿದ ಕರಿಯಪ್ಪನವರು ನಮ್ಮ ನಾಡಿನ ಮಹಾನ್ ಚೇತನ” ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೇಖಕ ಲಿಂಗದಹಳ್ಳಿ ಹಾಲಪ್ಪ ಮಾತನಾಡಿ, “ಕರಿಯಪ್ಪ ಯರೇಶೀಮಿ ಅವರು ಅತ್ಯಂತ ಬಡತನದಲ್ಲಿಯೇ ಬಾಲ್ಯವನ್ನು ಕಳೆದರು. ಸಹೋದರರ ಸಹಕಾರದೊಂದಿಗೆ ಹಾಗೂ ಗಾಂಧೀಜಿಯವರ ಮಾರ್ಗದರ್ಶನದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಧುಮಕಿ, ಭಾರತ ದೇಶ ಎಂದಿಗೂ ಮರೆಯದ ಮಹಾನ್ ಸ್ವಾತಂತ್ರ್ಯ ಸೇನಾನಿಯಾದರು” ಎಂದರು.

“ಮಹಾತ್ಮ ಗಾಂಧೀಜಿಯವರ ಅಣತಿಯಂತೆ ಗಾಂಧೀಜಿ-ಕಸ್ತೂರಬಾ ಅವರ ಸಾಕು ಮಗಳಾದ ದಲಿತ ಸಮುದಾಯದ ವೀರಮ್ಮ ಅವರನ್ನು ಅಂತರ್ಜಾತಿ ವಿವಾಹವಾದರು. ಬಹುದೊಡ್ಡ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರೂ ಅಂತರ್ಜಾತಿ ವಿವಾಹವಾದ ಪರಿಣಾಮವಾಗಿ ಜಿಡ್ಡುಗಟ್ಟಿದ ಜಾತಿ ವ್ಯವಸ್ಥೆಯಲ್ಲಿ ಮೇಲ್ಜಾತಿಯವರಿಂದ ಸಾಕಷ್ಟು ನೋವು ಅವಮಾನಗಳನ್ನು ಅನುಭವಿಸಿದರು” ಎಂದು ಲಿಂಗದಹಳ್ಳಿ ಹಾಲಪ್ಪ ಹೇಳಿದರು.

ಮುಖ್ಯ ಅತಿಥಿ ಶಾಸಕ ಬಸವರಾಜ ಎನ್ ಶಿವಣ್ಣನವರ ಮಾತನಾಡಿ, “ಸಂಗೂರು ಕರಿಯಪ್ಪ ಅವರ ಹೆಸರನ್ನು ಚಿರಸ್ಥಾಯಿಗೊಳಿಸುವ ನಿಟ್ಟಿನಲ್ಲಿ ಸ್ಮಾರಕ ಟ್ರಸ್ಟ್ ಪುಸ್ತಕ ಪ್ರಕಟಣೆ ಮೂಲಕ ಮಾಡುತ್ತಿದೆ. ಹಾವೇರಿ ನಗರದಲ್ಲಿರುವ ಜಿಲ್ಲಾ ಕೆಂದ್ರ ಬಸ್ ನಿಲ್ದಾಣಕ್ಕೆ ಸಂಗೂರು ಕರಿಯಪ್ಪ ವೀರಮ್ಮ ದಂಪತಿಗಳ ಹೆಸರಿನಲ್ಲಿ ನಾಮಕರಣ ಮಾಡಲು ಸರಕಾರದ ಮಟ್ಟದಲ್ಲಿ ಈಗಾಗಲೇ ಪ್ರಯತ್ನಗಳು ನಡೆದಿದ್ದು ಶೀಘ್ರದಲ್ಲಿಯೇ ಈ ಪ್ರಕ್ರೀಯೆಯನ್ನು ಪೂರ್ಣಗೊಳಿಸಲಾಗುವುದು”ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಎಫ್.ಟಿ ಹಳ್ಳಿಕೇರಿ, ಡಾ. ಲಿಂಗದಹಳ್ಳಿ ಹಾಲಪ್ಪ, ಯಶೋಧಮ್ಮ ಯರೇಶೀಮಿ (ಅಮೇರಿಕಾ), ಶ್ರೀಮತಿ ನಿಶಾ (ಅಮೇರಿಕಾ), ವತ್ಸಲ್ (ಅಮೇರಿಕಾ), ಹೇಮಲತಾ ಕೂರಗುಂದ, ಮೃತ್ಯಂಜಯ ಫ ಕುಲಕರ್ಣಿ, ಕುಮಾರ್ ಎನ್.ಜಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಟ್ರಸ್ಟ್ ಅಧ್ಯಕ್ಷ ಎಸ್ಎಫ್ಎನ್ ಗಾಜಿಗೌಡರ ವಹಿಸಿದ್ದರು. ಪ್ರಾಸ್ತಾವಿಕವಾಗಿ ಟ್ರಸ್ಟ್ ಸದಸ್ಯ ಬಸವರಾಜ ಪೂಜಾರ ಮಾತನಾಡಿದರು. ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಸಾಹಿತಿ ಸತೀಶ ಕುಲಕರ್ಣಿ, ಸಂಕಮ್ಮ ಸಂಕಣ್ಣನವರ, ಡಾ. ಮೋಹನ್ ಹಂಡೆ, ಅಶೋಕ ನಡಕಟ್ಟಿನ, ಅಬ್ದುಲ್ ಹುಬ್ಬಳ್ಳಿ ಮುಖ್ಯ ಅತಿಥಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಮಂಜುನಾಥ ಚ. ಗಾಜಿ ನಿರ್ವಹಿಸಿದರು. ಶಶಿಕಲಾ ಜಿ. ಕಣಿವೇರ ಸ್ವಾಗತಿಸಿದರು. ಶ್ರೀನಿವಾಸ ಯರೇಶೀಮಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...