ಚಿರತೆ ದಾಳಿಯಿಂದ ರೈತ ಬೀರೇಶ ಬೆಳಗಾವಿ (28) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಣವಿಸಿದ್ಧಗೇರಿ ಗ್ರಾಮದಲ್ಲಿ ನಡೆದಿದೆ.
ಕಣವಿಸಿದ್ಧಗೇರಿ ಗ್ರಾಮದ ನಿವಾಸಿ ಬೀರೇಶ ಅವರು ಶುಕ್ರವಾರ ರಾತ್ರಿ ತಮ್ಮ ಜಮೀನಿನಲ್ಲಿದ್ದ ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಈ ಅವಘಡ ಸಂಭವಿಸಿದೆ.
ಅವಘಡದಲ್ಲಿ ಬೀರೇಶ ಅವರ ಸಹೋದರ ಸಹ ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಸಹೋದರರು ಮೆಕ್ಕೆಜೋಳಕ್ಕೆ ನೀರು ಹಾಯಿಸಲು ರಾತ್ರಿ 11 ಗಂಟೆ ಸುಮಾರಿಗೆ ಜಮೀನಿಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಜಮೀನಿಗೆ ಬಂದಿದ್ದ ಚಿರತೆ, ಬೀರೇಶ ಹಾಗೂ ಅವರ ಸಹೋದರನ ಮೇಲೆ ದಾಳಿ ಮಾಡಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದರು. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.





