ಹಾವೇರಿ | ಮೇವು ಕೊರತೆ ನೀಗಿಸಲು ಊರೂರು ಅಲೆಯುತ್ತಿರುವ ರೈತರು

Date:

ಈ ಬಾರಿಯ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ರೈತರು ಪರದಾಡುವಂತಾಗಿದ್ದು, ದನ-ಕರುಗಳಿಗೆ ಮೇಲು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಭಾರೀ ಮೇವಿನ ಕೊರತೆಯಾಗಿದ್ದು ದುಂಡಶಿ ಹೋಬಳಿ ಸೇರಿದಂತೆ, ರೈತರು ಮೇವು ಸಂಗ್ರಹಿಸಲು ನಿತ್ಯ ಊರೂರು ತಿರುಗುವಂತಾಗಿದೆ.

ಮೇವಿನ ಕೊರತೆ ತೀವ್ರವಾಗುವುದಕ್ಕೂ ಮುಂಚೆಯೇ ಎಚ್ಚೆತ್ತುಕೊಂಡು, ಅಗತ್ಯ ಪ್ರಮಾಣದ ಮೇವು ಬೆಳೆಯುವುದಕ್ಕೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ರೈತರಿಗೆ ಮೆಕ್ಕೆಜೋಳ, ಅಲಸಂದೆ, ಬಿಳಿಜೋಳ ಹಾಗೂ ಇತರ ಮೇವಿನ ಬೀಜಗಳನ್ನೊಳಗೊಂಡ ಮೇವಿನ ಕಿಟ್ ವಿತರಣೆ ಮಾಡಲು ಮುಂದಾಗಬೇಕಾಗಿದೆ ಎನ್ನುತ್ತಿದ್ದಾರೆ ಈ ಭಾಗದ ರೈತರು.

ಸಮರ್ಪಕ ಮಳೆಯಾಗದೆ ಭತ್ತದ ಬೆಳೆಯು ಬೆಳೆಯದೇ ಮೇವು ಸಾಲದಾಗಿದೆ. ಇದರಿಂದಾಗಿ, ಮುಂದೆ ಮೇವು ಕೊರತೆ ಉಲ್ಭಣಿಸುವ ಆತಂಕ ರೈತರನ್ನು ಕಾಡುತ್ತಿದೆ. ಜಾನುವಾರುಗಳ ಮೇವಿನ ವಿಷಯದಲ್ಲೂ ಸರ್ಕಾರದ ನಿರ್ಲಕ್ಷ್ಯ ಕುರಿತು ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಮೇವು ಪೂರೈಕೆ ವಿಷಯದಲ್ಲಿ ಮೀನಮೇಷ ಎಣಿಸಬಾರದು. ಜಾನುವಾರುಗಳು ನಮ್ಮ ರೈತರ ಜೀವನಾಡಿಗಳು. ಹಾಲು ಉತ್ಪಾದನೆ ಜೊತೆಗೆ, ಕೃಷಿ ಚಟುವಟಿಕೆಗಳಿಗೆ ರೈತರು ಜಾನುವಾರುಗಳನ್ನೇ ನೆಚ್ಚಿಕೊಂಡಿದ್ದಾರೆ. ಬರದಿಂದ ಬೆಳೆ ನಷ್ಟದಲ್ಲಿರುವ ರೈತರಿಗೆ ಜಾನುವಾರುಗಳಿಗೆ ಅಗತ್ಯ ಮೇವು ಕೊಡಲಾಗದ ಸ್ಥಿತಿ ಎದುರಾಗಿದೆ. ಸರ್ಕಾರ ಅಂತಹವರಿಗೆ ಅಗತ್ಯ ಪ್ರಮಾಣದ ಮೇವು ಪೂರೈಕೆ ಮಾಡಬೇಕು ಎಂದು ರೈತ ಮುಖಂಡ ಹಸಿರು ಸೇನೆ ವರುಣಗೌಡ ಪಾಟೀಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೀರಾವರಿ ಹೊಂದಿರುವ ರೈತರು ತಮ್ಮ ಹೊಲದಲ್ಲಿ ಹಸಿ ಮೇವನ್ನು ಬೆಳೆಯಲು ಹೋಬಳಿ ಮಟ್ಟದ ಪಶು ಆಸ್ಪತ್ರೆ ಸಂಪರ್ಕಿಸಿ ಬೀಜ ಪಡೆಯಬಹುದು.

ಶಿಗ್ಗಾಂವಿ ತಾಲೂಕಿನ ಹೊಸೂರು ಎತ್ತಿನಹಳ್ಳಿ ಗ್ರಾಮದ ರೈತರು ಭತ್ತ ಬಂದಿಲ್ಲ ಎಂದು ಹುಲ್ಲನ್ನು ಬೇರೆ ತಾಲೂಕು ಜಿಲ್ಲೆಗೆ ಕಳುಹಿಸುತ್ತಿದ್ದು, ಹಿಂಗಾರು ಬೆಳೆಯು ಸರಿಯಾಗಿ ಬರದಿದ್ದರೆ ತಾಲೂಕಿಗೆ ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಮೇವು ಕೊರತೆಯಾಗುವ ಸಂಭವ ಇದೆ ಎಂದು ಸಹಾಯಕ ಪಶು ನಿರ್ದೇಶಕರು ಡಾ.ರಾಜೇಂದ್ರ ಅರಳೇಶ್ವರ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...