ಹಾವೇರಿ | ಆರೋಗ್ಯ ಇಲಾಖೆಯ ಅವೈಜ್ಞಾನಿಕ ಆದೇಶವನ್ನು ಹಿಂಪಡೆಯಲು ರೈತ ಸಂಘ ಮನವಿ

Date:

“ಪ್ರತಿ ತಿಂಗಳಿನಲ್ಲಿ 30 ಹೆರಿಗೆಗಳು ಇಲ್ಲದ ಕಾರಣ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಪರಿವರ್ತನೆ ಮಾಡಿದ್ದಾರೆ. ಇದು ಜನಸಾಮಾನ್ಯರ ಮೇಲೆ ಕೈಗೊಂಡ ಕರಾಳ ಆದೇಶ. ಈ ಆದೇಶವನ್ನು ಹಿಂಪಡೆಯಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಕಿಡಿಕಾರಿದರು.

ಹಾವೇರಿ ಪಟ್ಟಣದಲ್ಲಿ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಆರೋಗ್ಯ ಇಲಾಖೆಯ ಅವೈಜ್ಞಾನಿಕ ಆದೇಶವನ್ನು ಹಿಂಪಡೆಯುವ ಕುರಿತು ಕರ್ನಾಟಕ ರಾಜ್ಯ ರೈತ ಸಂಘಹಾಗು ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿ ಅವರು ಮಾತನಾಡಿದರು.

“ಆಸ್ಪತ್ರೆಗಳಲ್ಲಿ ಹೆರಿಗೆ ತಜ್ಞರು ನೇಮಕ ಇಲ್ಲ. ಅರವಳಿಕೆ ತಜ್ಞರು ಇರುವುದಿಲ್ಲ. ಒಳ್ಳೆಯ ಸೌಲಭ್ಯದಿಂದ ಕೂಡಿದ ಪ್ರಯೋಗಾಲಯಗಳು ಇಲ್ಲ. ಸೌಲಭ್ಯಗಳನ್ನು ನೀಡದೇ ಈ ರೀತಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುವುದು ಮಹಾ ತಪ್ಪು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ತಾಲೂಕ ಕೇಂದ್ರದಿಂದ ಸುಮಾರು 30-35 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಗಳ ಜನಸಾಮಾನ್ಯರಿಗೆ ಹಾವು ಕಚ್ಚಿದರೆ, ವಿದ್ಯುತ್ ಸ್ಪರ್ಶ, ಕಾಡು ಮೃಗಗಳಿಂದ ಹಾನಿಯಾದರೆ, ವಿಷಪ್ರಾಶನವಾದರೆ, ಅಪಘಾತ ಸಂಭವಿಸಿದರೆ, ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಾದರೆ, ತುರ್ತು ಸಮಸ್ಯೆಗಳು, ಹೆರಿಗೆ ಸಮಸ್ಯೆಯಾದಾಗ, ದೂರದಿಂದ ಬರುವುದು ಬಹಳ ಕಷ್ಟವಾಗುತ್ತದೆ. ತುರ್ತು ಚಿಕಿತ್ಸೆ ಸಿಕ್ಕರೆ ಅವರ ಜೀವ ಉಳಿಸಬಹುದು. ಇಂತಹ ಅವೈಜ್ಞಾನಿಕ ತೀರ್ಮಾನದ ಆದೇಶದಿಂದ ಜನರ ಜೀವಕ್ಕೆ ಅಪಾಯವಾಗುತ್ತದೆ ಇದನ್ನು ಸರ್ಕಾರಕ್ಕೆ ಮಾನ್ಯ ಶಾಸಕರು ಮನವರಿಕೆ ಮಾಡಿಸಬೇಕು” ಎಂದು ಮನವಿ ಮಾಡಿದರು. 

“ಪ್ರತಿ ಸಮುದಾಯ ಕೇಂದ್ರದಲ್ಲಿ ಡಯಾಲಿಸಿಸ್ ಸೌಲಭ್ಯ ಕಲ್ಪಿಸಬೇಕು. ತಜ್ಞ ವೈದ್ಯರನ್ನು ನೇಮಿಸಬೇಕು. ಅರವಳಿಕೆ ತಜ್ಞರನ್ನು ನೇಮಿಸಬೇಕು. ಪ್ರಯೋಗಾಲಯಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಆಸ್ಪತ್ರೆಯ ಮೇಲ್ವಿಚಾರಣೆಗೆ ಅನುಭವಿಕರ ಮಾರ್ಗದರ್ಶನ ಸಮಿತಿ ರಚನೆ ಆಗಬೇಕು. ತಾತ್ಕಾಲಿಕವಾಗಿ ನೇಮಕಗೊಂಡ ಸಿಬ್ಬಂದಿಗಳು ರೋಗಿಗಳ ಜೊತೆಗೆ ಸರಿಯಾಗಿ ನಡೆದುಕೊಳ್ಳುವಂತೆ ಸೂಚಿಸಬೇಕು. ಈ ಎಲ್ಲಾ ವಿಚಾರಗಳನ್ನು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲಿಯ ವಸ್ತು ಸ್ಥಿತಿಯನ್ನು ಸರ್ಕಾರಕ್ಕೆ ವಿವರಿಸಿ ತಕ್ಷಣದಿಂದ ಈ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯ ಮಾಡಬೇಬೇಕು” ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಘಟಕ ಹಾವೇರಿ ಒತ್ತಾಯಿಸುತ್ತದೆ

ಈ ಸಂದರ್ಭದಲ್ಲಿ ಶಿವಯೋಗಿ ಚ ಹೊಸಗೌಡ್ರ, ಸುರೇಶ ಚಲವಾದಿ, ವಿರುಪಾಕ್ಷಪ್ಪ ಗುಡಗೂರ, ಮುಂತಾದವರು ಉಪಸ್ಥಿತರಿದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...