ಹಾವೇರಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಇನ್ಸೂರೆನ್ಸ್ ಕಂಪನಿ ರೈತ ಹೋರಾಟಕ್ಕೆ ಮಣಿದು ಮಧ್ಯಂತರ ಪರಿಹಾರ 129 ಕೋಟಿ ಹಣ ರೈತರ ಖಾತೆಗೆ ಜಮಾ ಮಾಡಿತ್ತು. ಉಳಿದ 69 ಕೋಟಿ ಬಾಕಿ ಹಣ ಕೊಡುವಲ್ಲಿ 2023-24ನೇ ಸಾಲಿನ ಬೆಳೆ ವಿಮಾ ವಿಷಯದಲ್ಲಿ ಸಾಕಷ್ಟು ತಾರತಮ್ಯ ನಡೆದಿದೆ. ಕೇಂದ್ರ ಸರ್ಕಾರ ತಕ್ಷಣ ರೈತರ ನೆರವಿಗೆ ಬರಬೇಕು.

ಜಿಲ್ಲೆಯಲ್ಲಿ 2 ತಿಂಗಳಿಂದ ಜಿಟಿ-ಜಿಟಿ ಸುರಿಯುತ್ತಿರುವ ಮಳೆಯಿಂದ ಬೆಳೆ ನಾಶವಾಗಿದ್ದು ಸರಕಾರ ತಕ್ಷಣ ಬೆಳೆ ಪರಿಹಾರ ಕೊಡಬೇಕು. ಹೆಸ್ಕಾಂ ಕಂಪನಿ ಒಂದು ವರ್ಷದಿಂದ ಹೊಸ ಪಂಪ್‌ಸೆಟ್‌ಗಳಿಗೆ ಅರ್ಜಿ ಪಡೆಯುವುದನ್ನು ನಿಲ್ಲಿಸಿರುವುದರಿಂದ ಬಹಳ ತೊಂದರೆಯಾಗಿದ್ದು ಅರ್ಜಿ ಪಡೆಯಬೇಕು. ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಕೆಲವು ಹಳ್ಳಿಗಳಿಗೆ ರೇಲ್ವೇ ಟ್ರ್ಯಾಕ್ ನಿರ್ಮಿಸಲು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಂಗಾ ಮೇಲ್ದಂಡೆ ಕಾಲುವೆಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಜಮೀನು ಕಳೆದುಕೊಂಡಿದ್ದು ಕೆ.ಐ.ಡಿ.ಬಿ. ಬಲವಂತವಾಗಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ಕೈ ಬಿಡಬೇಕು. ಶಾಶ್ವತ ಬರಗಾಲ ಎದುರಿಸುತ್ತಿರುವ ಜಿಲ್ಲೆಯಲ್ಲಿ ತುಂಗಭದ್ರ, ವರದಾ, ಕುಮದ್ವತಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಆಮೆಗತಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಸಾವಿರಾರು ಕೋಟಿ ಹಣವೆಚ್ಚ ಮಾಡಿ ಕಾಮಗಾರಿ ಹಿಂದಿನ ಕೆಲವು ಕೆರೆಗಳಿಗೆ ನೀರು ಬೀಳದೆ ಇರುವುದು ಅಧಿಕಾರಿಗಳ ಅವೈಜ್ಞಾನಿಕ ನೀತಿ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಆರ್ ವಿ ಕೆಂಚಳ್ಳೆರ ಮಾತನಾಡಿ, ಜಿಲ್ಲೆಯಲ್ಲಿ ಕಳೆದ 6 ತಿಂಗಳಿಂದ ಹಾಲಿನ ಸಹಾಯಧನ ನೀಡಿಲ್ಲ. ಹಾಲಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಳೆದ ನಾಲ್ಕೈದು ತಿಂಗಳಿಂದ ಬರಗಾಲ ಹಾಗೂ ಅತಿವೃಷ್ಟಿಯಿಂದ ಬೆಳೆ ಬಾರದೆ ಇರುವುದರಿಂದ ಬ್ಯಾಂಕುಗಳಲ್ಲಿ ಕೃಷಿ ಸಾಲವನ್ನು ಪಡೆದಿದ್ದು ಸಕಾಲಕ್ಕೆ ಮರುಪಾವತಿ ಮಾಡಲು ಸಾದ್ಯವಾಗಿಲ್ಲ. ಕಟ್ಟುಬಾಕಿಯಾದ ರೈತರಿಗೆ ಒ.ಟಿ.ಎಸ್ ನಲ್ಲಿ ಸಾಲ ಕಟ್ಟಿಸಿಕೋಳ್ಳಬೇಕು.

ಇದನ್ನೂ ಓದಿ ಹಾವೇರಿ | ವಕ್ಫ್‌ ಮಸೂದೆ ಮೂಲಕ ಮುಸ್ಲಿಮರ ಆಸ್ತಿ ಕಸಿಯಲು ಬಿಜೆಪಿ ಹುನ್ನಾರ: ಅಪ್ಸರ್ ಕೊಡ್ಲಿಪೇಟೆ

ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ವಿವಿಧ ತಾಲೂಕು, ಹಳ್ಳಿಗಳ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...