ಪಟಾಕಿ ಅವಘಡ | ಸಾವಿಗೀಡಾದವರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ ಸಿಎಂ

Date:

ಹಾವೇರಿಯ ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಐದು ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.

ಪಟಾಕಿ ಗೋದಾಮಿಗೆ ಬೆಂಕಿ ಬಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟಿಯಲ್ಲಿ ನಡೆದಿದೆ. ಪಟಾಕಿ ಗೋದಾಮಿನ ಮಾಲೀಕನನ್ನು ಹಾವೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಂಗಳವಾರ ಮಧ್ಯಾಹ್ನದ ವೇಳೆಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ದ್ಯಾಮಪ್ಪ​​, ರಮೇಶ್ ಬಾರ್ಕಿ, ಶಿವಲಿಂಗ ಅಕ್ಕಿ, ಜಯಣ್ಣ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ತಿಂಗಳು ಗಣೇಶ ಚತುರ್ಥಿ ಇದ್ದುದರಿಂದ ಗೋದಾಮಿನಲ್ಲಿ ಪಟಾಕಿಗಳನ್ನು ದಾಸ್ತಾನು ಮಾಡಲಾಗಿತ್ತು. ಈ ನಡುವೆ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪಟಾಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.

ಗೋದಾಮಿನ ಬಳಿ ವೆಲ್ಡಿಂಗ್​ ಕೆಲಸ ನಡೆಯುತ್ತಿತ್ತು. ವೆಲ್ಡಿಂಗ್ ಮಾಡುವಾಗ ಸಿಡಿದ ಬೆಂಕಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...