ಹಾವೇರಿ | ಮಹಿಳೆಯರ ಆರೋಗ್ಯ ಕಾಪಾಡಲು ಆಹಾರ ಮುಖ್ಯ: ಡಾಕ್ಟರ್ ಉಮಾ ಬಳಿಗಾರ

Date:

“ಮಹಿಳೆಯರು ಇಂದಿನ ದಿನದಲ್ಲಿ ಆರೋಗ್ಯ ಕಾಪಾಡಲು ಆಹಾರ ಬಹಳ ಮುಖ್ಯ. ಮನೆಯ ಆಹಾರ, ತಾಜಾ ಆಹಾರ, ಬಹಳ ಆವಶ್ಯಕವಾಗಿದೆ. ಪರಿವಾರದ ಎಲ್ಲರ ಯೋಗ ಕ್ಷೇಮ ಮಹಿಳೆಯದೆ ಆಗಿರುತ್ತದೆ” ಎಂದು ಆಪ್ತ ಸಮಾಲೋಚಕ ತಜ್ಞ ವೈದ್ಯೆ ಡಾಕ್ಟರ್ ಉಮಾ ಬಳಿಗಾರ ಹೇಳಿದರು.

ಹಾವೇರಿ ಪಟ್ಟಣದ ಶ್ರೀ ಬೀರೇಶ್ವರ ಸಮುದಾಯ ಭವನದಲ್ಲಿ ಆರೋಗ್ಯ ಭಾರತಿ ಹಾಗೂ ಕನಕ ಮಹಿಳಾ ಬಳಗ ಸಹಯೋಗದಲ್ಲಿ ಮಹಿಳಾ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ‘ಮಹಿಳೆಯರ ಆರೋಗ್ಯ ಹಾಗೂ ಮನೆ ಮದ್ದಿನ ಮಾಹಿತಿ ಕುರಿತು ಅವರು ಮಾತನಾಡಿದರು.

“ಮಹಿಳೆ ತನ್ನ ಆರೋಗ್ಯವನ್ನು ಗಮನಿಸದೆ, ಬೆಳಗಿನಿಂದ ರಾತ್ರಿಯವರಿಗೆ ಸದಾ ಕ್ರಿಯಾಶೀಲಳಾಗಿ ಎಲ್ಲರ ಆರೋಗ್ಯದ ಬಗ್ಗೆ ಗಮನವಿಟ್ಟು ದಿನ ಕಳೆಯುವುದು ಸರ್ವೇಸಾಮಾನ್ಯವಾಗಿದೆ. ತನ್ನ ಶರೀರದ ಸಹಜ ಕ್ರಿಯೆಗಳನ್ನು ಗಮನಿಸದೇ, ವಿಶ್ರಾಂತಿಯನ್ನು ಪಡೆಯದೆ ಕೆಲಸ ಮಾಡುತ್ತಾರೆ. ಇದರಿಂದ ಅನಾರೋಗ್ಯ, ಕಾಯಿಲೆಗಳಿಗೆ ತುತ್ತಾಗುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರು ನಿತ್ಯ ಸ್ವಚ್ಛತೆ, ಆಹಾರ, ಯೋಗ, ಧ್ಯಾನ,ರೂಡಿಸಿಕೊಂಡರೆ ಆರೋಗ್ಯ ಸುಧಾರಿಸುತ್ತದೆ. ಅದಕ್ಕಾಗಿ ಪ್ರತಿನಿತ್ಯ ಆರೋಗ್ಯಕ್ಕಾಗಿ ಒಂದಿಷ್ಟು ಸಮಯವನ್ನು ಮೀಸಲೀಡಬೇಕು” ಎಂದು ಮಹಿಳೆಯರಿಗೆ ಸಲಹೆ ನೀಡಿದರು.

ಮನೆ ಮದ್ದಿನ ಕುರಿತು ಆರೋಗ್ಯ ಭಾರತೀಯ ನಾಗೇಶ್ ಅವರು, “ನಮ್ಮ ಮನೆ, ರಸ್ತೆ ಬದಿಯಲ್ಲಿ ಇರುವಂತ ಅನೇಕ ಔಷಧಿ ಸಸ್ಯಗಳ ಕುರಿತು, ಮನೆಯ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಭಾರತೀಯ ಗೌರವಾಧ್ಯಕ್ಷರು ಪ್ರಭಾಕರ ಮಂಗಳೂರು, ಆರೋಗ್ಯ ಭಾರತಿಯ ಮಹಿಳಾ ಪ್ರಮುಖರಾದ ಚಂಪಾ ಹುಣಸೆ ಮರದ, ಕನಕ ಮಹಿಳಾ ಬಳಗದ ಅಧ್ಯಕ್ಷರು ಕವಿತಾ ಮುದುಕಣ್ಣನವರ ಸ್ವಾಗತಿಸಿದರು. ಕನಕ ಮಹಿಳಾ ಬಳಗದ ಕೋಶಾಧ್ಯಕ್ಷರು ರೇಣುಕಾ ಅಂಗಡಿ ಕಾರ್ಯಕ್ರಮದ ಪ್ರಾರ್ಥನೆ ಹಾಗೂ ನಿರೂಪಣೆಯನ್ನು ಕನಕ ಮಹಿಳಾ ಬಳಗದ ಕಾರ್ಯದರ್ಶಿಯಾದ ಶ್ರೀಮತಿ ಶಿಲ್ಪಾ ಚುರ್ಚಿಹಾಳ ನಡೆಸಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...