ಹಾವೇರಿ | ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಮಧ್ಯಾಹ್ನದ ಊಟಕ್ಕೆ ಚಾಲನೆ

Date:

ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಮಧ್ಯಾಹ್ನದ ಊಟ ವಿತರಣೆಯ ಸಮಾಜಮುಖಿ ಫಲಹಿ ಕಾರ್ಯಕ್ರಮವನ್ನು ಉಮ್ಮತ್ ವೆಲ್ಫೇರ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (UWECT) ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಸರಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಟ್ರಸ್ಟ್ ಸದಸ್ಯರು ರಾಣೇಬೆನ್ನೂರು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಮುನಾವರ್ ಅವರನ್ನು ಭೇಟಿ ಮಾಡಿ, ಪ್ರತಿ ಮಂಗಳವಾರ ರೋಗಿಗಳು ಮತ್ತು ಅವರ ಜತೆಗಾರರಿಗೆ ಉಚಿತ ಮಧ್ಯಾಹ್ನದ ಊಟ ವಿತರಣೆ ಮಾಡಲು ಕೇಳಿದಾಗ, ಸಂತೋಷದಿಂದ ಒಪ್ಪಿಕೊಂಡರು ” ಎಂದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಮುಷ್ಟಾಕ್ ಅಹ್ಮದ್ ಸೈಕಲಗಾರ ಮಾತನಾಡಿ, “ದೂರದ ಊರುಗಳಿಂದ ಚಿಕಿತ್ಸೆಗಾಗಿ ಬರುವ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟ ಅಥವಾ ರೋಗಿಯ ಆರೈಕೆಯಿಂದಾಗಿ ಊಟವನ್ನೇ ತಪ್ಪಿಸಿಕೊಳ್ಳುವ ಪರಿಸ್ಥಿತಿಗೆ ಒಳಗಾಗುತ್ತಾರೆ. ಅಂತವರಿಗೆ ಈ ಕಾರ್ಯಕ್ರಮ ಪ್ರಯೋಜನ ಆಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಮ್ಮತ್ ವೆಲ್ಫೇರ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಪ್ರತೀ ವಾರ ಸ್ವಚ್ಛ, ಆರೋಗ್ಯಕರ ಹಾಗೂ ತಾಜಾ ಆಹಾರ ಒದಗಿಸಲು ಮುಂದಾಗಿದೆ” ಎಂದರು.

“ಟ್ರಸ್ಟ್ ತಂಡವು ಆಸ್ಪತ್ರೆಯ ಆಡಳಿತಕ್ಕೆ ಆಹಾರವನ್ನು ಸಂಪೂರ್ಣ ಹೈಜಿನಿಕ್ ರೀತಿಯಲ್ಲಿ ತಯಾರಿಸಿ, ಸುರಕ್ಷಿತವಾಗಿ ಸಾಗಿಸಿ, ಯಾವುದೇ ಅಡಚಣೆ ಉಂಟಾಗದಂತೆ ಶಿಸ್ತುಬದ್ಧವಾಗಿ ವಿತರಿಸಲಾಗುತ್ತದೆ ಎಂದು ಭರವಸೆ ನೀಡಿತು. 

“ಆಸ್ಪತ್ರೆಯ ಎಲ್ಲಾ ಸ್ವಚ್ಛತೆ, ಭದ್ರತೆ ಮತ್ತು ಆಡಳಿತ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು” ಎಂದೂ ತಿಳಿಸಿದರು.

1002524431

ಟ್ರಸ್ಟ್‌ನ ಈ ಸಮಾಜಮುಖಿ ಕಾರ್ಯವನ್ನು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮುನಾವರ್ ಅವರು ಶ್ಲಾಘಿಸಿದರು.

ಕಾರ್ಯಕ್ರಮದ ಆರಂಭದ ದಿನ ರಾಣೇಬೆನ್ನೂರು ತಹಶೀಲ್ದಾರ್ ಶ್ರೀ R. H. ಭಗವಾನ್ ಆಸ್ಪತ್ರೆಯನ್ನು ಭೇಟಿ ಮಾಡಿ ಕಾರ್ಯಕ್ರಮವನ್ನು ವೀಕ್ಷಿಸಿದ ಅವರಿಗೆ ಟ್ರಸ್ಟ್ ಅಧ್ಯಕ್ಷ ಮುಷ್ಟಾಕ್ ಅಹ್ಮದ್ ಸೈಕಲಗಾರ ಅವರು ಶಾಲ್ ಹೊದಿಸಿ ಗೌರವಿಸಿದರು.

ಕಾರ್ಯಕ್ರಮದ ನಂತರ ಅಧ್ಯಕ್ಷ ಮುಷ್ಟಾಕ್ ಅಹ್ಮದ್ ಸೈಕಲ್ಗರ್ ಹೇಳುವಂತೆ, “ಈ ಮೊದಲ ಕಾರ್ಯಕ್ರಮದ ಯಶಸ್ಸು ಕಂಡಿದೆ. ಇಂತಹ ಸೇವಾ ಚಟುವಟಿಕೆಗಳ ಅಗತ್ಯ ಮತ್ತು ಪರಿಣಾಮಕಾರಿತ್ವವನ್ನು ಸಾಬೀತುಪಡಿಸಿದೆ. UWECT ಮುಂದೆಯೂ ಇದೇ ಉತ್ಸಾಹದಿಂದ ಸೇವೆ ಮುಂದುವರಿಸುತ್ತದೆ” ಎಂದರು. 

ಟ್ರಸ್ಟ್‌ನ ಸಂಪೂರ್ಣ ತಂಡ ಎ. ಎ. ಬಣಕಾರ, ಎ.ಎಚ್.ರೋಟಿವಾಲೆ, ಅನ್ಸಾರ್ ಖಾಜಿ, ಘೌಸ್ ಮತ್ತು ಎಲ್ಲಾ ಟ್ರಸ್ಟಿ ಸದಸ್ಯರು ಸಮಾಜದ ಹಿತಕ್ಕಾಗಿ ಇನ್ನಷ್ಟು ಫಲಹಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಬದ್ಧತೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿ ಮುಖಂಡರು ಜಾಕೀರ‍್ ಚಿಕ್ಕೇನೂರು, ಸರ್ಫರಾಜ್ ಕಲೆದೇವರ, ನೌಷಾದ್ ಖಾಜಿ, ಮುನೀರ್ ಕ್ಯಾದಗಿಕೊಪ್ಪ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...