ಹಾವೇರಿ | ಲಕ್ಷ್ಮೀಪುರ ಗ್ರಾಮದಲ್ಲಿ ಲಿಂಗ ಸಮಾನತೆ ಜಾಗೃತಿ ಜಾಥಾ ಕಾರ್ಯಕ್ರಮ

Date:

“ಲಿಂಗ ಸಮಾನತೆ ಎಂಬುವುದು ಒಂದು ಪ್ರಮುಖ ಸಾಮಾಜಿಕ ತತ್ವವಾಗಿದ್ದು, ಪುರುಷರು, ಮಹಿಳೆಯರು ಮತ್ತು ಇತರ ಲಿಂಗಿಗಳೆಲ್ಲರೂ ಸಮಾನ ಹಕ್ಕು, ಅವಕಾಶ, ಗೌರವ ಮತ್ತು ತಿರ್ಮಾನಗಳಲ್ಲಿ ಸಮನಾಗಿ ಪಾಲ್ಗೊಳ್ಳಬೇಕು ಎಂಬುವುದನ್ನು ಒತ್ತಿ ಹೇಳುತ್ತದೆ” ಎಂದು ಲಿಂಗ ಸಮಾನತೆ ಜಾಗೃತಿ ಜಾಥದಲ್ಲಿ ಲೊಯೋಲ ವಿಕಾಸ ಕೇಂದ್ರ ಸಂಸ್ಥೆಯ ನಿರ್ದೇಶಕರಾದ ಫಾದರ್ ವಿನ್ಸೆಂಟ್ ಜೇಸನ್ ಹೇಳಿದರು.

 ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಹಾನಗಲ್ಲ, ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಮಂಗಳೂರು, ಗ್ರಾಮ ಪಂಚಾಯತ್ ಮಂತಗಿ ಹಾಗೂ ಲಕ್ಷ್ಮೀಪುರ ಗ್ರಾಮ ಸಂಯುಕ್ತ ಆಶ್ರಯದಲ್ಲಿ ಲಿಂಗ ಸಮಾನತೆ ಜಾಗೃತಿ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

“ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಾನ ಸಾಧನೆ ಸಾಧ್ಯ ಮಹಿಳೆಯರು ಬಲಿಷ್ಠರಾಗಲಿ ಎಂಬುವುದಲ್ಲ, ಅವರು ಈಗಾಗಲೆ ಬಲಿಷ್ಠರು, ಅವರ ಬಲವನು ಗುರುತಿಸಿ ಅವಕಾಶ ನೀಡಿದರೆ ಸ್ವಾವಲಂಭಿಯಾಗಿ ಬೆಳೆಯುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಊರಿನ ಪ್ರಮುಖ ಬೀದಿಗಳಲ್ಲಿ ಘೋಷಣಾ ಫಲಕಗಳೊಂದಗೆ ಜಾಥಾ ಹೊರಟು ಘೋಷಣೆ ಕೂಗಿದರು. ಬೀದಿ ನಾಟಕದ ಪ್ರದರ್ಶನದೊಂದಿಗೆ ಲಿಂಗಸಮಾನತೆ ಕುರಿತು ಜಾಗೃತಿ ಮೂಡಿಸಿದರು.

ಲಕ್ಷ್ಮೀಪುರ ಗ್ರಾಮದ ಶಾಲೆಯ ಕೌಂಪೌಂಡ ಗೋಡೆಯ ಮೇಲೆ ಪರಿಸರ ಸಂರಕ್ಷಣೆ ಕುರಿತು ಚಿತ್ರ ಬಿಡಿಸುವ ಮೂಲಕ ಶಾಲಾ ಹೊರಾಂಗಣದಲ್ಲಿ ಶ್ರಮಧಾನ ಮಾಡಿದರು.

ಕಾರ್ಯಕ್ರಮದಲ್ಲಿ ಲಕ್ಷ್ಮೀಪುರ ಗ್ರಾಮಸ್ಥರು, ಲೊಯೋಲ ವಿಕಾಸ ಕೇಂದ್ರದ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಸಂತ ಅಲೋಶಿಯಸ್ ವಿಶ್ವವಿಧ್ಯಾಲಯದ ವಿಧ್ಯಾರ್ಥಿಗಳು, ಗ್ರಾಮ ಪಂಚಾಯತ ಸಿಬ್ಬಂದಿಗಳು, ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು. ಕಾರ್ಯಕ್ರವನ್ನು ಫಕ್ಕೀರೇಶ ಗೌಡಳ್ಳಿ ನಿರೂಪಿಸಿದರು. ಹೊನ್ನಮ್ಮ ಸ್ವಾಗತಿಸಿದರು, ಮೈಲಾರಿ ಅವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...