ಹಾವೇರಿ | ಭೀಕರ ಬರದಲ್ಲೂ ಉತ್ತಮ ಇಳುವರಿ; ರೈತನ ಕೈಹಿಡಿದ ಕಲ್ಲಂಗಡಿ

Date:

ಬರಗಾಲ, ಮಳೆ ಕೊರತೆ, ಬತ್ತಿದ ಅಂರ್ತಜಲ, ಅಧಿಕ ಉಷ್ಣಾಂಶ ಸೇರಿದಂತೆ ಸಾಲು ಸಾಲು ಸಮಸ್ಯೆಗಳಿಂದ ಹೈರಾಣಾಗಿದ್ದ ರೈತರ ನಡುವೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ರೈತರೊಬ್ಬರು ಕಲ್ಲಂಗಡಿ ಬೆಳೆದು ಉತ್ತಮ ಆದಾಯ ಪಡೆದು ಮಾದರಿಯಾಗಿದ್ದಾರೆ.

ಹತ್ತಾರು ವರ್ಷಗಳಿಂದ ಏಕ ಬೆಳೆ ಬೆಳೆದಿದ್ದ ಶಿವಪ್ಪ ನವಲಿ ಅವರು ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಯಶಸ್ವಿಯಾಗಿದ್ದಾರೆ. ರಾಸಾಯನಿಕ ಗೊಬ್ಬರವನ್ನು ಬಿಟ್ಟು, ಸಾವಯವ ಕೃಷಿ ಬಳಕೆ ಮಾಡಿ, ಹೆಚ್ಚು ನಿಗಾ ವಹಿಸಿ ಬೆಳೆ ಆರೈಕೆ ಮಾಡಿದ ಪರಿಣಾಮ ಉತ್ತಮ ಇಳುವರಿ ಪಡೆಯುತ್ತಿದ್ದಾರೆ. ಇವರು ಬೆಳೆದಿರುವ ದೊಡ್ಡ ಗಾತ್ರದ, ರುಚಿಕರ ಕಲ್ಲಂಗಡಿ ಹಣ್ಣಿಗೆ ಭಾರೀ ಬೇಡಿಕೆ ಇದೆ. ಬಿಸಿಲು, ಜಾತ್ರೆ, ಶಿವರಾತ್ರಿ ನೆಪದಲ್ಲಿ ಮಾರುಕಟ್ಟೆಯಲ್ಲಿ ಅಧಿಕ ಬೇಡಿಕೆ ದೊರೆತಿದೆ.

ಅವರ 22 ಎಕರೆ ಜಮೀನಿನಲ್ಲಿ ಒಟ್ಟು 6 ಬೋರ್‌ವೆಲ್‌ಗಳಿದ್ದು, 3 ಬೋರ್‌ವೆಲ್‌ಗಳಲ್ಲಿ ಮಾತ್ರ ಅಲ್ಪ ಪ್ರಮಾಣ ನೀರಿದೆ. ಅದೂ ಸಾಲದಿದ್ದಾಗ ದಿನಕ್ಕೆ ₹1,500ರಂತೆ 20 ದಿನಕ್ಕೂ ಹೆಚ್ಚು ಕಾಲ ಬಾಡಿಗೆ ನೀರು ಪಡೆದು ಕಲ್ಲಂಗಡಿ ಬೆಳೆ ಉಳಿಸಿಕೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ಔಷಧಿ ಹಾಗೂ ಹನಿ ನೀರಾವರಿಯಿಂದ ನೀರು ನಿರ್ವಹಣೆ ಮಾಡಿದ್ದರಿಂದ ಉತ್ತಮ ಬೆಳೆ ಪಡೆಯಲು ಸಾಧ್ಯವಾಗಿರುವುದಾಗಿ ರೈತ ಶಿವಪ್ಪ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟು ನಾಲ್ಕು ಎಕರೆ ಭೂಮಿಯಲ್ಲಿ ಕಲ್ಲಂಗಡಿ ಬೆಳೆದಿದ್ದು, ಅದರಲ್ಲಿ ಈಗಾಗಲೇ ಎರಡು ಎಕರೆ ಜಮೀನಿನಲ್ಲಿ ಎರಡು ಬಾರಿ ಕಟಾವು ಮಾಡಿದ್ದಾರೆ. ಒಟ್ಟು 25 ಟನ್ ಉತ್ತಮ ಇಳುವರಿ ಪಡೆದಿದ್ದಾರೆ. ಉಳಿದಿರುವ ಎರಡು ಎಕರೆಯಲ್ಲಿ ಇನ್ನು 25 ಟನ್ ಕಲ್ಲಂಗಡಿ ಬೆಳೆ ಬರುವ ನಿರೀಕ್ಷೆ ಇದೆ. ಈವರೆಗೆ ಒಟ್ಟು ₹1.5 ಲಕ್ಷ ನಿವ್ವಳ ಆದಾಯ ಲಭಿಸಿದೆ. 4 ಎಕರೆ ಶೇಂಗಾ, 2 ಎಕರೆ ಜೋಳ ಕೂಡ ಬೆಳೆದಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಗದಗ | ನ್ಯಾಯಸಮ್ಮತ ಹಾಗೂ ನಿರ್ಭೀತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಭೀಕರ ಬರದ ಪರಿಸ್ಥಿತಿಯಲ್ಲೂ ಉತ್ತಮ ಇಳುವರಿ ತೆಗೆದಿದ್ದಕ್ಕಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಹಾವೇರಿ ಜಿಲ್ಲಾ ಘಟಕದಿಂದ ರೈತ ಜಾಗೃತಿ ಕಾರ್ಯಕ್ರಮದಲ್ಲಿ ರೈತ ಶಿವಪ್ಪ ಚನ್ನಬಸಪ್ಪ ನವಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...