ಹಾವೇರಿ | ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು‌ ಸಿಗಬೇಕು: ಕರವೇ ಸ್ವಾಭಿಮಾನಿ ಬಣ

Date:

ಹಾವೇರಿ ಜಿಲ್ಲಾದ್ಯಂತ ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು‌ ಸಮರ್ಪಕವಾಗಿ ಸಿಗಬೇಕಾದಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬೃಹತ್ ಪ್ರತಿಭಟನೆ ಪ್ರತಿಭಟನೆ ನಡೆಸಿತು.

ಹಾವೇರಿ ಪಟ್ಟಣದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು ಒಟ್ಟುಗೂಡಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಲಾಖೆ ಅಧಿಕಾರಿ ತರುಂ ಅವರಿಗೆ ಮನವಿ ಸಲ್ಲಿಸಿದರು.

ಕರವೇ ಜಿಲ್ಲಾ ಅಧ್ಯಕ್ಷರಾದ ಯಲ್ಲಪ್ಪ ಮರಾಣಿ ಮಾತನಾಡಿ, “ಹಾವೇರಿ ಜಿಲ್ಲಾದ್ಯಂತ ಸರ್ಕಾರದಿಂದ ಪರವಾನಗಿ ಪಡೆದ ಕೆಲವೊಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಲಾಖೆಯಿಂದ ಸಂಘ ಸಂಸ್ಥೆಗಳು ಕಲವೊಂದು ಅಧಿಕಾರಿಗಳ ಜೊತೆ ಶಾಮೀಲಾಗಿದ್ದು, ನಿಜವಾದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಾರ್ಡ್‌ಗಳನ್ನು ಮಾಡಲು ಹಣದ ಬೇಡಿಕೆಯನ್ನು ಇಟ್ಟು, ₹1000ದಿಂದ ₹15,000ದವರೆಗೆ ಲಂಚ ಪಡೆದು ಕಾರ್ಡ್‌ಗಳನ್ನು ನೀಡುತ್ತಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಮದುವೆಗೆ ಹಾಗೂ ಹೆರಿಗೆ ಭತ್ಯೆ ಮಂಜೂರು ಮಾಡಿಸಿಕೊಳ್ಳಲು ₹10000 ₹15,000ದವರೆಗೆ ಹಣ ಪಡೆದುಕೊಳ್ಳುತ್ತಿದ್ದಾರೆ. ಆದ ಕಾರಣ ತಾವುಗಳು ಈ ಅಕ್ರಮದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮಧ್ಯವರ್ತಿ ಸಂಘ ಸಂಸ್ಥೆಗಳ ಪರವಾನಗಿಯನ್ನು ರದ್ದುಗೊಳಿಸಬೇಕು. ನಿಜವಾದ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ನ್ಯಾಯ ಒದಗಿಸಿ ಕೊಡಬೇಕು. ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಸರ್ಕಾರದ ಸೌಲಭ್ಯಗಳು ಕಾರ್ಮಿಕರಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಗೆ ಬರುವ ಅಧಿಕಾರಿಗಳಿಗೆ ನಿದೇಶನ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಂತಹ ಅಕ್ರಮ ಎಸಗುವ ಮತ್ತು ಹಣದ ಬೇಡಿಕೆಯನ್ನು ಇಟ್ಟು ಬಡಕಾರ್ಮಿಕರಿಗೆ ತೊಂದರೆ ಕೊಡುವ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ವಿರುದ್ಧ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸುಳ್ಳುಗಳೇ ಮೈತ್ರಿಯ ಮಾನದಂಡ: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾಬಾಯಿ ಲಮಾಣಿ, ಜಿಲ್ಲಾಪ್ರಧಾನ ಕಾರ್ಯದರ್ಶಿ ಯೊಸುವ ಸೈಕಲಗಾರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಖಲಂದರ ಎಲೆದಹಳ್ಳಿ, ಹಾವೇರಿ ತಾಲೂಕ ಮಹಿಳಾ ಅಧ್ಯಕ್ಷೆ ನಾಗಮ್ಮ ಕಾಳೇರ, ಹಾನಗಲ್‌ ತಾಲೂಕು ಮಹಿಳಾ ಅಧ್ಯಕ್ಷೆ ನೇತ್ರಾ ಕಟ್ಟಿಮನಿ, ಬ್ಯಾಡಗಿ ತಾಲೂಕು ಅಧ್ಯಕ್ಷ ಬಸವರಾಜ ಪಟ್ಟಿನಶೆಟ್ಟಿ, ದಾದಾಪೀಠ ಮಲ್ಲಾಡದ, ರಾಜಾಭಕ್ಷ ಮಾನೆಗಾರ, ಮೈಮುದ್ದಿನ ಸಾಬ ಮುಲ್ಲಾ, ಹಬೀಬ ದಾರುಗಾರ, ಚಂದ್ರಕಲಾ ಕಟ್ಟಿಮನಿ, ನೇತ್ರಾವತಿ ಕನವಳ್ಳಿ, ಮಮತಾ ಹೊನ್ನಜ್ಜಿಯವರ, ಸನ್ನಾವುಲ್ಲಾ ಪುರದಗೇರಿ, ದ್ಯಾಮಕ್ಕ ನಾಯಕರ, ಕಮಲ್ಲಮ್ಮ ಲಕಮಾಪುರ, ಹೊನ್ನುರಸಾಬ ಕೊಪ್ಪಳ, ಶರನಪ್ಪ ಲಕಮಾಪುರ, ರವಿ ಮಾಮುನಿ, ಯಲ್ಲಮ್ಮ ಹಂಚಿನಮನಿ, ನಿಂಗಮ್ಮ ಕಟ್ಟಿಮನಿ, ಶಾಂತಮ್ಮ ವಾಲ್ಮೀಕಿ ಸೇರಿದಂತೆ ಇತರೆ ಕಾರ್ಯಕರ್ತರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...