ಹಾವೇರಿ | ಸರ್ಕಾರಿ ಆಸ್ಪತ್ರೆ ವೈದ್ಯರ ವರ್ಗಾವಣೆ: ಕರವೇ ಗಜಸೇನೆ ಖಂಡನಿಯ

Date:

“ಬ್ಯಾಡಗಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅನೇಕ ವರ್ಷಗಳಿಂದ ಕಿವಿ ಮೂಗು ಹಾಗೂ ಗಂಟಲು ತಜ್ಞರಾದ ಡಾ// ಪುಟ್ಟರಾಜ ವೈದ್ಯರನ್ನ ಏಕಾ-ಏಕಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದು ಖಂಡನೀಯ” ಎಂದು ಕರವೇ ಗಜಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ ಹೇಳಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ವೈದ್ಯ daa// ಪುಟ್ಟರಾಜ ಅವರನ್ನು ವರ್ಗಾವಣೆ ಖಂಡಿಸಿ, ಮತ್ತೆ ವೈದ್ಯರನ್ನು ನಿಯೋಜನೆ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಕಾರ್ಯಕರ್ತರು ಮನವಿ ಸಲ್ಲಿಸಿ ಮಾತನಾಡಿದರು.

 “ಡಾ// ಪುಟ್ಟರಾಜ ರವರು ಯಾವುದೇ ರೋಗಿಗಳಿಂದ ಪಲಾಪೆಕ್ಷವಿಲ್ಲದೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದರು ಅಂಥವರನ್ನ ಆರೋಗ್ಯ ಇಲಾಖೆ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಬ್ಯಾಡಗಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಉತ್ತಮ ವೈದ್ಯರು ಎಂದು ಮಾತನಾಡುತ್ತಿದ್ದಾರೆ. ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತಮ ವೈದ್ಯರನ್ನು ತಮ್ಮ ಇಲಾಖೆ ಯಾವ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂಬ ಸ್ಪಷ್ಟೀಕರಣ ನೀಡಬೇಕು. ಅಲ್ಲದೆ ಈಗಾಗಲೆ ವರ್ಗಾವಣೆ ಮಾಡಿರುವ ಡಾಕ್ಟರ್ ಪುಟ್ಟರಾಜರವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ, ಪುನ: ಅವರನ್ನು ಬ್ಯಾಡಗಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ನಿಯೋಜಿಸಬೇಕು” ಎಂದು ಒತ್ತಾಯಿಸಿದರು.

“ವೈದ್ಯರನ್ನು ನಿಯೋಜನೆ ಮಾಡದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಬ್ಯಾಡಗಿ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಎದುರು ಬೃಹತ್  ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಬಂಜಾರ ಸಮುದಾಯದ ಶ್ರೀಮತ ಸಾಹಿತ್ಯ ಕಲೆ ಸಂಸ್ಕೃತಿ ಮಾದರಿಯದು: ಪ್ರೊ. ಎಸ್. ವ್ಹಿ. ಸಂಕನೂರ 

ಈ ಸಂದರ್ಬದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಪುಟ್ಟಪ್ಪ ಹಿತ್ತಲಮನಿ, ಜಿಲ್ಲಾ ಉಪಾಧ್ಯಕ್ಷ ಫಕೀರೇಶ ಕಟ್ಟಿಮನಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷಣಿ ಮಮತಾ ಕಟ್ಟೆಪ್ಪನವರ, ಉತ್ತರ ಕರ್ನಾಟಕ ವಿಭಾಗದ ಸಂಚಾಲಕಿ ಸುಧಾ ಪಾಟೀಲ, ಉತ್ತರ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಗೌರಮ್ಮ ಬೆಲ್ಲದ, ಉತ್ತರ ಕರ್ನಾಟಕ ಮಹಿಳಾ ಗೌರವಾಧ್ಯಕ್ಷ ಪ್ರೇಮ ನಾರಾಯಣಸ್ವಾಮಿ ಉತ್ತರ ಕರ್ನಾಟಕದ ಮಹಿಳಾ ಕಾರ್ಯದರ್ಶಿ, ಲತಾ ಕಳ್ಳಿಹಾಳ, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷಣಿ ಲಕ್ಷ್ಮಿ ಗಂಗಮ್ಮನವರು, ಜಿಲ್ಲಾ ಕಾರ್ಯದರ್ಶಿ ಪಾರ್ವತಿ ಕುಂಬಾರ, ಬ್ಯಾಡಗಿ ತಾಲೂಕ್ ಅಧ್ಯಕ್ಷ ಪವನ್ ವಡ್ಡರ, ಶಿಗ್ಗಾವಿ ತಾಲೂಕ ಅಧ್ಯಕ್ಷ ಶೇಕಪ್ಪ ದೀಪಾವಳಿ, ಬ್ಯಾಡಗಿ ತಾಲೂಕ ಯುವ ಘಟಕದ ಅಧ್ಯಕ್ಷ ಸಂದೀಪ್ ಹಂಸಭಾವಿ, ಪೃಥ್ವಿ ಒಳಗುಂದಿ, ವಿನೋದ ಮ್ಯಾಗಲಮನಿ, ಶಶಿಕುಮಾರ್ ಚಕ್ರಸಾಲಿ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...