ಹಾವೇರಿ | ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಿ ಘನತೆಯ ಬದುಕು ಖಾತ್ರಿಪಡಿಸಬೇಕು: ಎಂ ಬಿ ನಾಡಗೌಡ

Date:

ಗ್ರಾಮಗಳ ಸ್ವಚ್ಚತೆಯ ಜವಾಬ್ದಾರಿ ನಿರ್ವಹಿಸಿ ಗ್ರಾಮೀಣ ಜನತೆಯ ನೈರ್ಮಲ್ಯ ಕಾಪಾಡುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಸರ್ಕಾರ ಕೆಲಸ ಒದಗಿಸಿ, ಘನತೆಯ ಬದುಕನ್ನು ಖಾತ್ರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎಂ ಬಿ ನಾಡಗೌಡ ಒತ್ತಾಯಿಸಿದರು.

ಹಾವೇರಿ ಪಟ್ಟಣದ ಸರ್ಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತ ಸ್ವಚ್ಛವಾಹಿನಿ ನೌಕರರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ವಿ ಕೆ ಶಿವಲಿಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಸ ವಿಲೇವಾರಿ ಮಾಡುವ ಕಾರ್ಮಿಕರಿಗೆ ಕನಿಷ್ಠ ಮೂಲಸೌಕರ್ಯಗಳನ್ನು ಒದಗಿಸದೇ ಶೋಷಣೆಗೆ ಒಳಪಡಿಸುತ್ತಿರುವುದು ಖಂಡನೀಯ. ಕೂಡಲೇ ಸರ್ಕಾರ ತರಬೇತಿ ಪಡೆದ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನೀಡಬೇಕು. ಪ್ರತಿ ತಿಂಗಳು ವೇತನ ಪಾವತಿ ಮಾಡಬೇಕು” ಎಂದು ಎಂ ಬಿ ನಾಡಗೌಡ ಆಗ್ರಹಿಸಿದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಸಮಾಜದ ನೈರ್ಮಲ್ಯ ಕಾಪಾಡುವ ಸ್ವಚ್ಛವಾಹಿನಿ ಸಿಬ್ಬಂದಿಗಳ ಜೀವನವೂ ಸಹ ನಮ್ಮ ನಾಗರಿಕ ಸಮಾಜದಲ್ಲಿ ಘನತೆಯಿಂದ ಕೂಡಿರಬೇಕು. ಆದರೆ ಸರ್ಕಾರಗಳು ಕನಿಷ್ಠ ಮೂಲಸೌಲಭ್ಯಗಳನ್ನು ಒದಗಿಸದಿರುವುದು ನಾಚಿಕೆಗೇಡಿನ ಸಂಗತಿ. ಎಲ್ಲ ನೌಕರರು ಸಂಘಟಿತರಾಗಿ ಐಕ್ಯತೆಯಿಂದ ಹೋರಾಡಿ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಬೇಕು” ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂದಾನೆಪ್ಪ ಹೆಬಸೂರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾವೇಶದಲ್ಲಿ ರಾಜ್ಯ ಮುಖಂಡ ಡಿ.ಎಂ ಮರಿಯಪ್ಪ, ಸಂಘಟನೆಯ ಜಿಲ್ಲಾ ಮುಖಂಡ ಸುಭಾಸ್ ಸೊಟ್ಟಪ್ಪನವರ, ಶಿಲ್ಪಾ ಶೇಷಗಿರಿ, ಗೀತಾ ಬಾಗಿಲದ, ರಚನಾ ಎಚ್, ಫಕ್ಕಿರೇಶ ಹಕ್ಕಿಮರೆಣ್ಣನವರ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ತಾಲೂಕುಗಳ ನೂರಾರು ಸ್ವಚ್ಛವಾಹಿನಿ ಸಿಬ್ಬಂದಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...