ಹಾವೇರಿ | 65 ಲಕ್ಷ ರೂ ಬಾಳಂಬೀಡ-ಚನ್ನಾಪುರ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ

Date:

“ಹಾನಗಲ್ಲ ತಾಲೂಕಿನ ಹಲವೆಡೆ ಗ್ರಾಮೀಣ ಭಾಗದ ರಸ್ತೆಗಳು ಆಧುನಿಕ ಸ್ವರೂಪ ಹೊಂದುತ್ತಿದ್ದು, ಬಹಳ ದಿನಗಳಿಂದ ಹಾಳಾಗಿ ಸಂಚಾರಕ್ಕೆ ತೀವ್ರ ಅನಾನುಕೂಲ ಉಂಟಾಗಿದ್ದ ಬಾಳಂಬೀಡ-ಚನ್ನಾಪುರ ರಸ್ತೆಯನ್ನು ಅಭಿವೃದ್ಧಿ ಪಡಿಸಿ, ಹೊಸರೂಪ ನೀಡಲಾಗುತ್ತಿದೆ” ಎಂದು ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 65 ಲಕ್ಷ ರೂ ಕಾಮಗಾರಿ ಭೂಮಿಪೂಜೆ ಸಲ್ಲಿಸಿ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್  ತಾಲೂಕಿನ ಬಾಳಂಬೀಡ ಗ್ರಾಮದ ಬಳಿ ಪಂಚಾಯತರಾಜ್ ಇಂಜನೀಯರಿಂಗ್ ವಿಭಾಗದಿಂದ 2023-24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 65 ಲಕ್ಷ ರೂ. ವೆಚ್ಚದಲ್ಲಿ ಬಾಳಂಬೀಡ-ಚನ್ನಾಪುರ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

“ಸಂಪರ್ಕ ರಸ್ತೆಗಳ ಸುಧಾರಣೆಯಿಂದ ಗ್ರಾಮೀಣರ ಬದುಕಿನ ಚಿತ್ರಣ ಬದಲಾಗಲಿದೆ. ಹಾಗಾಗಿ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ತಾಲೂಕಿನಲ್ಲಿ ಇನ್ನಷ್ಟು ರಸ್ತೆಗಳ ಅಭಿವೃದ್ಧಿಗೆ ಶೀಘ್ರ ಮತ್ತೆ ಅನುದಾನ ದೊರಕುವ ವಿಶ್ವಾಸವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮೀಣ ಭಾಗಗಳ ಸಂಪರ್ಕಕ್ಕೆ ಅನುಕೂಲಕರವಾದ ರಸ್ತೆಗಳ ನಿರ್ಮಾಣಕ್ಕೆ ನೆರವು ನೀಡುವುದು ರಾಜ್ಯ ಸರ್ಕಾರದ ಆದ್ಯತೆಗಳಲ್ಲಿ ಒಂದಾಗಿದೆ. ಗ್ರಾಮಗಳಿಂದ ನಗರ ಪ್ರದೇಶಗಳನ್ನು ಜೋಡಿಸುವ ರಸ್ತೆಗಳು ಗ್ರಾಮೀಣರ ಬದುಕು ಸುಧಾರಿಸಲಿವೆ. ಈ ನಿಟ್ಟಿನಲ್ಲಿ ರಸ್ತೆಗಳ ಸುಧಾರಣೆಗೆ ಕಾಳಜಿ ವಹಿಸಲಾಗಿದೆ” ಎಂದು ಜನರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಹಿರಿಯ ಬಸ್ ಏಜೆಂಟ್ ಆತ್ಮ*ಹತ್ಯೆ, ಪ್ರಕರಣ ದಾಖಲು

ಗ್ರಾಪಂ ಸದಸ್ಯ ಭರಮಗೌಡ ನಂದಿಹಳ್ಳಿ, ಜಿಪಂ ಮಾಜಿ ಸದಸ್ಯ ಎಂ.ಎಂ.ಕಂಬಳಿ, ಮುಖಂಡರಾದ ಅಶೋಕ ಮೋರೆ. ಮಂಜಣ್ಣ ತಡಸದ, ನಾಗಯ್ಯ ಹಿರೇಮಠಮ ರಾಜೇಂದ್ರ ಜಿನ್ನಣ್ಣನವರ, ಮಹ್ಮದ್ರಪೀಕ್ ಉಪ್ಪುಣಸಿ, ಇಸ್ಟೈಲ್ ಹಲಸೂರ. ನಿಂಗಪ್ಪ ನಂದಿಹಳ್ಳಿ ಮಾರುತಿ ದೇವಸೂರ, ಸಂತೋಷ್ ದುಂಡಣ್ಣವರ್ ಮಕ್ಯೂಲ್ಅಹ್ಮದ್ ಚಂದಗಿರಿ. ಮೌಲಾಸಾಬ ನರೇಗಲ್, ಹಜರತ್ ಅಲಿ ನರೇಗಲ್, ನಾಗರಾಜ ಬೊಮ್ಮಣ್ಣನವರ, ಫಕ್ಕೀರಪ್ಪ ಚಿಕ್ಕಣ್ಣನವರ, ಮಾರುತಿ ನಂದಿಹಳ್ಳಿ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...