ಹಾವೇರಿ | ಸಾಮಾಜಿಕ ಕಾರ್ಯಕರ್ತರ ಆರೋಗ್ಯ ಬಹಳ ಮುಖ್ಯ: ಜಯಶ್ರೀ ಪಾಟೀಲ್

Date:

“ಸಮುದಾಯದಲ್ಲಿ ಬೆರೆತು ಕೆಲಸ ಮಾಡುವಾಗ ಸಾಮಾಜಿಕ ಕಾರ್ಯಕರ್ತರ ಆರೋಗ್ಯ ಬಹಳ ಮುಖ್ಯ. ಹಲವು ಸ್ವಭಾವದ ಜನರೊಡನೆ ಒಳಗೊಳ್ಳಲು ಆರೋಗ್ಯ ಸಂಪತ್ತು ಬೇಕು. ಅಂದಾಗ ಮಾತ್ರ ಉತ್ತಮ ಸಮಾಜ ಸೇವಕರಾಗಲು ಸಾಧ್ಯ” ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಹೇಳಿದರು.

ಹಾವೇರಿ ಪಟ್ಟಣದ ಶಿವಾಜಿ ನಗರದ ಮೂರನೇಯ ಕ್ರಾಸ್ ನಲ್ಲಿರುವ ಮಹಿಳಾ ಶಕ್ತಿ ಸದನದಲ್ಲಿ ನಡೆದ ಎರಡು ದಿನಗಳ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರಿಗೆ ಮಾನಸಿಕ ಆರೋಗ್ಯ ಕಾರ್ಯಾಗಾರವನ್ನು ಉದ್ಘಾಟಿಸಿ ನುಡಿದರು.

ಮನೋವೈದ್ಯಕೀಯ ಸಮಾಜ ಕಾರ್ಯ ವಿಭಾಗ ಮತ್ತು ರಾಷ್ಟ್ರೀಯ ಮಾನಸಿಕ ನರವಿಜ್ಞಾನ ಸಂಸ್ಥೆಯ ಸಂಶೋಧಕ ಡಾ. ಶಿವಾನಂದ ಯರೇಶೀಮಿ ಶಿಬಿರದ ನಿರ್ದೇಶಕರು ಮಾತನಾಡಿ, “ನನ್ನ ತವರು ಜಿಲ್ಲೆಯಾದ ಹಾವೇರಿಯನ್ನೇ ಸಮೂದಾಯ ಮಾನಸಿಕ ಆರೋಗ್ಯ ಅಧ್ಯಯನಕ್ಕ ಆಯ್ಕೆ ಮಾಡಿಕೊಂಡಿದ್ದು ಇನ್ನೂ ಅನೇಕ ಕಾರ್ಯಾಗಾರಗಳನ್ನು ನಡೆಸಲಿಚ್ಚಿಸುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆಯನ್ನು ವಹಿಸಿದ್ದ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು ಪರಿಮಳಾ ಜೈನ್ ಮಾತನಾಡಿ, “ಮಹಿಳಾ ಸ್ವಧಾರದಲ್ಲಿ ಮಾನಸಿಕವಾಗಿ ತೊಂದರೆಗೊಳಗಾದ ಅನೇಕ ಮಹಿಳೆಯರು ಆಗಾಗ ದಾಖಲಾಗುತ್ತಿದ್ದಾರೆ. ಅಂಥವರ ಮನೋರೋಗವನ್ನು ಗುಣ ಪಡಿಸಿ ಮುಖ್ಯವಾಹಿನಿಗೆ ತರುವುದೇ ಕಾರ್ಯಾಗಾರದ ಉದ್ದೇಶ” ಎಂದರು.

ಬೆಂಗಳೂರಿನ ನಿಮಾಮ್ಸ್ ಮತ್ತು ನಗರದ ಇಡಾರಿ ಸಂಸ್ಥೆಗಳು ಜಂಟಿಯಾಗಿ ಏರ್ಪಡಿಸಿದ್ದ ಈ ಕಾರ್ಯಾಗಾರದಲ್ಲಿ ಜಿಲ್ಲೆಯ  ಸ್ವಯಂಸೇವಾ ಸಂಸ್ಥೆಗಳ ೩೫ ಕಾರ್ಯಕರ್ತರು ಎರಡು ದಿನಗಳ ಕಾಲ ತರಬೇತಿ ಪಡೆದರು.

ಕಾರ್ಯಕ್ರಮದಲ್ಲಿ ಬಸವರಾಜ ಪೂಜಾರ, ರೇಣುಕಾ ಕಹಾರ, ಡಾ. ಬಸನಗೌಡ ಪಾಟೀಲ, ನಾಗರಾಜ ಹುಡೇದ, ಮಂಜುನಾಥ ಸಂಣ್ಣಿಂಗಮ್ಮನವರ, ಎಚ್.ಎಫ್ ಮಜೀದ್, ಡಾ. ಶಂಕರ ಪೇಠಕರ, ಶೈಲಾ ಎನ್, ಹಾಲಮ್ಮಾ ಕಳಸಾಪೂರ, ಲೇಖಕಿ ಭಾಗ್ಯಾ ಎಂ.ಕೆ, ನಾಗರಾಜ ಹುಡೇದ ಮುಂತಾದವರು ಭಾಗವಹಿಸಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...