ಹಾವೇರಿ | ಆರೋಗ್ಯವನ್ನು ವಿಶಾಲ ದೃಷ್ಟಿಯಿಂದ ನೋಡಬೇಕು: ಡಾ ಅಕಿಲಾ

Date:

“ಆರೋಗ್ಯವನ್ನು ವಿಶಾಲ ದೃಷ್ಟಿಯಿಂದ ನೋಡಬೇಕು. ಸಾಮಾಜಿಕ ಸಮಸ್ಯೆ, ಅನ್ಯಾಯ, ಅಸಮಾನತೆ, ತಾರತಮ್ಯದಿಂದ ಸಾಮಾಜದಲ್ಲಿ ಅಸಮತೋಲನ ಕಾಣುತ್ತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ಶೈಕ್ಷಣಿಕವಾಗಿ   ಒಳಗೊಂಡ ವ್ಯವಸ್ಥೆ ಇಲ್ಲಿ ಅವಕಾಶ ಇರುತ್ತದೆಯೋ ಅಲ್ಲಿ ಆರೋಗ್ಯವು ಒಳಗೊಂಡಿದೆ” ಎಂದು ಸಂಪನ್ಮೂಲ ವ್ಯಕ್ತಿ ಡಾ. ಅಕಿಲಾ ಅವರು ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೋಯಲಾ ವಿಕಾಸ ಕೇಂದ್ರದಲ್ಲಿ ಜನವೇದಿಕೆ, ವಿವಿಧ ಸಂಘಟನೆಗಳು ಹಾಗೂ ಕರ್ನಾಟಕ ಜನಾರೋಗ್ಯ ಚಳುವಳಿ ಸಹಯೋಗದಲ್ಲಿ ಸರ್ಕಾರಿ ಆರೋಗ್ಯ ವ್ಯವಸ್ಥೆ ಉಳಿಸಿ ಜನರ ರಕ್ಷಸಿ ಶೀರ್ಷಿಕೆ ಅಡಿಯಲ್ಲಿ ಹಾವೇರಿ ಜಿಲ್ಲಾ ಅಭಿಯಾನ ಸಭೆಯಲ್ಲಿ ಅವರು ಮಾತನಾಡಿದರು.

“ನೀರು, ವಸತಿ ಹೀಗೆ ಅನೇಕ ಹಕ್ಕುಗಳಿಗಾಗಿ ಹೋರಾಟ ಮಾಡಿದ ಹಾಗೆ ಆರೋಗ್ಯದ ಬಗ್ಗೆ ನಾವ್ಯಾಕೆ ಹೋರಾಟ ಮಾಡ್ತಿಲ್ಲ. ಆರೋಗ್ಯದ ಬಗ್ಗೆ ಚಿಂತನೆ ಮಾಡ್ತಿಲ್ಲ. ಆರೋಗ್ಯ ಅಂದರೆ ಆಸ್ಪತ್ರೆ, ಡಾಕ್ಟರ್, ರೋಗಿಗಳು, ದೈಹಿಕ ಅಷ್ಟೇ ಸಂಕುಚಿತ ಅಲ್ಲ. ಒಳ್ಳೆ ಆಹಾರ, ಗಾಳಿ, ಶೌಚಾಲಯ, ಶಿಕ್ಷಣ, ಉದ್ಯೋಗ ಇವೆಲ್ಲವೂ ಮನುಷ್ಯನಿಗೆ ಇದ್ದರೆ ಆರೋಗ್ಯ ಇದ್ದ ಹಾಗೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಲೋಯಲಾ ವಿಕಾಸ ಕೇಂದ್ರದ ನಿರ್ದೇಶಕರು ಫಾದರ್ ವಿನ್ಸಂಟ್ ಜೇಸನ್ ಮಾತನಾಡಿ, “ಕೊರೊನಾ ಸಂದರ್ಭದಲ್ಲಿ ಬೆಡ್ ಕೊರತೆ ಇದ್ದಾಗ, ಒಂದು ಬೆಡ್ ಗೆ ನಾಲ್ಕು ಲಕ್ಷ ಕೊಡಿ ಕೊಡುತ್ತೇವೆಂದು ಹೇಳಿದ್ದರು. ಬಡವರಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಇಂತಹ ಕೆಟ್ಟವ್ಯವಸ್ಥೆ ವ್ಯವಸ್ಥೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಿದರೆ ಬದಲಾವಣೆ ಆಗಲು ಸಾಧ್ಯ” ಎಂದು ಹೇಳಿದರು.

ಕಾರ್ಯಕ್ರಮದ ಪ್ರಸ್ತಾವಿಕವಾಗಿ ರೋಶನಿ ಟ್ರಸ್ಟ್ ಕೆ. ಎಫ್ ನಾಯ್ಕರ ಮಾತನಾಡಿ, “ಹಾನಗಲ್ಲ ತಾಲ್ಲೂಕಿನಲ್ಲಿ ಇರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಕೊರತೆ, ಸೌಲಭ್ಯಗಳ ಕೊರತೆ ಇರುವಾಗ ಜನಸಾಮಾನ್ಯರಿಗೆ ಹೇಗೆ ಆರೋಗ್ಯ ಕೊಡಲು ಆಗುತ್ತದೆ ಎಂಬ ಪ್ರಶ್ನೆ ಕಾಡುತ್ತದೆ. ಇಪ್ಪತ್ತು ಸಾವಿರ ಜನಸಂಖ್ಯೆಗೆ ಒಂದು ಸರಕಾರಿ ಆಸ್ಪತ್ರೆ ಇರಬೇಕು. ಆದರೆ ಕೆಲವು ಕಡೆ ನಲವತ್ತು ಸಾವಿರ ಜನಸಂಖ್ಯೆಗೆ ಆಸ್ಪತ್ರೆ ಇದೆ. ಪ್ರಾಥಮಿಕ ಆರೋಗ್ಯ ಕೇಂದ್ರ (ಪಿ.ಎಚ್.ಸಿ) ಇಪ್ಪತ್ನಾಲ್ಕು ಗಂಟೆಗಳ ಕಾಲ ತೆರೆದಿರಬೇಕು. ಆದರೆ ಅನೇಕ ಕಡೆ ಎಂಟು ಗಂಟೆ ಮಾತ್ರ ತೆರೆದಿರುತ್ತವೆ. ಹೀಗಾದರೆ ಬಡವರು ಚಿಕಿತ್ಸೆ ಹೇಗೆ ಪಡೆಯಲು ಸಾಧ್ಯ” ಎಂದು ಹೇಳಿದರು.

“ನಾವು ಸಮೀಕ್ಷೆಯಲ್ಲಿ ಕಂಡುಕೊಂಡ ಹಾಗೆ ಐದು ಜಿಲ್ಲೆಗಳಲ್ಲಿ 172 ಆಶಾ ಕಾರ್ಯಕರ್ತರ ಕೊರತೆ ಇದೆ. ಇದನ್ನು ಯಾರು ಕೇಳಬೇಕು? ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ಸಿಗದೆ, ಬಡವರೂ ಸಹಿತ ಖಾಸಗಿ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ಇದ್ದು, ಹಣ ಕಟ್ಟಲಾಗದೆ ಹೆಣ ತರಲು ಒದ್ದಾಡುವ ಪರಿಸ್ಥಿತಿ ಇದೆ. ಹಾಗಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಉತ್ತಮ ಚಿಕೆತ್ಸೆ ಸಿಗಬೇಕು” ಎಂದು ಹೇಳಿದರು.

ಸಂವಿಧಾನ ಪೀಠಿಕೆ ಓದುವುದರ ಮೂಲಕ ಕಾರ್ಯಕ್ರಮ ಆರಂಭವಾಯಿತು. 

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೆಹಲಿ ಸ್ಪೋಟ ಹಿನ್ನೆಲೆ; ನಗರ, ಜಿಲ್ಲೆಯಾದ್ಯಂತ ಪೊಲೀಸರ ಕಟ್ಟೆಚ್ಚರ, ತಪಾಸಣೆ

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಬಸವರಾಜ ಕೊತಂಬರಿ, ಚಂದ್ರಪ್ಪ ಹೊಸಳ್ಳಿ, ಮಹಾಲಿಂಗಪ್ಪ ಅಕ್ಕಿವಳ್ಳಿ, ನಿವೃತ್ತ ಅಧಿಕಾರಿ ಡಾ. ಕಮ್ಮಾರ, ಗ್ರಾಕೂಸ್ ಸಂಘಟನೆಯ ಗಂಗಮ್ಮ, ನಿವೃತ್ತ ಅಧಿಕಾರಿ ಬಿ ಆರ್ ಶೆಟ್ಟರ್, ಚೈತ್ರಾ ಕಂಬಾಳಿಮಠ, ಸುವರ್ಣ ಆರ್. ಎಚ್ ಮಂಜುನಾಥ್ ಕರ್ಜಗಿ, ಕಲೀಮ್ ಮಾಸಣಕಟ್ಟಿ, ಮಂಜುನಾಥ ಕುದರಿ, ಹಾಲೇಶ್ ಗೊಲ್ಲರ್ ಇನ್ನೂ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...