ಹಾವೇರಿ | ಭಾರತದ ಅಭಿವೃದ್ಧಿಗೆ ಬಡವರಿಗೆ ಅನ್ನ, ಅಕ್ಷರ ಹರಡಬೇಕು: ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್

Date:

ಭಾರತ ಅಭಿವೃದ್ಧಿಯಾಗಬೇಕಾದರೆ ಬಡವರಿಗೆ ಅನ್ನ ಹಾಗೂ ಅಕ್ಷರ(ಶಿಕ್ಷಣ)ವನ್ನು ಹರಡಬೇಕು. ಪೂಜಾರಿ, ಪೌರೋಹಿತ್ಯವನ್ನು ನಿರ್ಮೂಲನೆ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್‌ ಅಭಿಪ್ರಾಯಪಟ್ಟರು.

ಹಾವೇರಿ ನಗರದಲ್ಲಿ ಎಸ್ಎಫ್ಐ ಹಾಸ್ಟೆಲ್ ಘಟಕದಿಂದ ಆಯೋಜಿಸಿದ್ದ ಯುವಜನರ ಸ್ಪೂರ್ತಿ, ಮಹಾ ಮಾನವತಾವಾದಿ ಸ್ವಾಮಿ ವಿವೇಕಾನಂದರ ಜನ್ಮದಿನ ಹಾಗೂ ಯುವಜನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಾನವೀಯತೆಯನ್ನು ಮರೆತ ಧರ್ಮಗಳು ಸಂಘರ್ಷಕ್ಕ ದಾರಿ ಮಾಡಿಕೊಡುತ್ತಿವೆ. ಚಿಕಾಗೋ ಸಮ್ಮೇಳನದಲ್ಲಿ ಸಹೋದರ-ಸಹೋದರಿಯರೆ ಎನ್ನುವ ಮೂಲಕ ಇಡೀ ಭಾರತ ದೇಶದ ಬೌದ್ಧಿಕ ಶ್ರೀಮಂತಿಕೆ ತೆರೆದಿಟ್ಟ ವಿವೇಕಾನಂದರನ್ನು ವಿದ್ಯಾರ್ಥಿ-ಯುವಜನರು ಆದರ್ಶವಾಗಿ ತೆಗೆದುಕೊಂಡು ಅವರ ವಿಚಾರಗಳನ್ನು ಅಭ್ಯಾಸ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುವೆಂಪು ಹಾಗೂ ವಿವೇಕಾನಂದರ ವಿಚಾರಧಾರೆಗಳು ಒಂದೇ ಆಗಿದ್ದವು. ವಿವೇಕಾನಂದರ ಹೆಸರಲ್ಲಿಯೂ ಇಂದು ಕೋಮುಗಲಭೆ, ಧರ್ಮಗಳ ಹೆಸರಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಕೆಲ ಮೂಲಭೂತವಾದಿಗಳು ಹೊರಟಿದ್ದಾರೆ. ಮೂಲಭೂತವಾದಿಗಳು ವಿವೇಕಾನಂದರನ್ನು ಕೇವಲ ಧರ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಹಾಗಾಗಿ ಇಂದಿನ ಯುವಜನತೆ ವಿವೇಕಾನಂದರ ನಿಜ ಇತಿಹಾಸವನ್ನು ಓದುವ ಮೂಲಕ ಮೂಲಭೂತವಾದಿಗಳಿಂದ ಅವರ ಸಿದ್ಧಾಂತಗಳನ್ನು ಬಿಡುಗಡೆಗೊಳಿಸಿ ಸೌಹಾರ್ದತೆಯನ್ನು ಕಾಪಾಡಬೇಕಿದೆ” ಎಂದು ಯುವಜನರನ್ನು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಹಾವೇರಿ | ಎತ್ತಿನಗಾಡಿಗೆ ಬೈಕ್ ಡಿಕ್ಕಿ ; ತಾಯಿ ಮಗ ಸ್ಥಳದಲ್ಲೇ ಸಾವು

ಕಾರ್ಯಕ್ರಮದಲ್ಲಿ ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಮುತ್ತುರಾಜ್ ದೊಡ್ಡಮನಿ, ತಾಲೂಕು ಅಧ್ಯಕ್ಷ ಸುಲೆಮಾನ್ ಮತ್ತಿಹಳ್ಳಿ, ಹಾಸ್ಟೆಲ್ ಘಟಕ ಅಧ್ಯಕ್ಷ ಪ್ರಜ್ವಲ್ ಹರಿಜನ, ಮುಖಂಡರಾದ ವಿರೂಪಾಕ್ಷ ಕೆ, ಧನುಷ್ ದೊಡ್ಡಮನಿ, ತೇಜಸ್ ಎನ್ ಡಿ, ಮನು ಕೆ, ಅಜೇಯ ಎಚ್, ಸಂಜೀವ್ ಪಾಟೀಲ್, ಪ್ರಕಾಶ್ ಕೆ ಆರ್, ನಾಗರಾಜ ಎಲ್, ನವೀನ ಲಮಾಣಿ, ವಿನಾಯಕ ಅಸುಂಡಿ, ರಘು ಎಲ್, ಪುನೀತ್ ಲಮಾಣಿ, ಸಿಬ್ಬಂದಿಗಳಾದ ವೆಂಕಟೇಶ ಕೊರಗರ, ರವಿ ಹಾವೇರಿ, ಫಕೀರಪ್ಪ ಭಜಂತ್ರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...