“ದೇಶದ ಪ್ರಗತಿಗೆ ಕೊಡುಗೆ ನೀಡಬೇಕಾಗಿದ್ದ ಯುವಕರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ ಮತ್ತು ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳತ್ತಿದ್ದಾರೆ. ಈ ಯುವ ಸಮುದಾಯ ವ್ಯಸನಕ್ಕೆ ತುತ್ತಾಗದಂತೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರದಾಗಬೇಕು” ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲ್ಯಾಣಾಧಿಕಾರಿ ಆಶು ನಧಾಪ್ ಕರೆ ಕೊಟ್ಟರು.
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ನಾಲ್ಕರ್ ಕ್ರಾಸ್ ರೋಶನಿ ವ್ಯಸನಮುಕ್ತಿ ಕೇಂದ್ರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ರೋಶನಿ ಟ್ರಸ್ಟ್ (ರಿ), ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ನಶಾ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಶನಿ ಸಂಶ್ಥೆಯ ನಿರ್ದೇಶಕಿ ಅನಿತಾ ಡಿಸೋಜಾ ಮಾತನಾಡಿ, “ವ್ಯಸನಮುಕ್ತ ಸಮಾಜದ ನಿರ್ಮಾಣವನ್ನು ಮಾಡೋಣ. ದೇಶವನ್ನು ಸದೃಡಗೊಳಿಸೋಣ. ಮಾದಕ ವಸ್ತುಗಳ ನಾವಿಣ್ಯತೆಯನ್ನು ಅರಿಯದೆ ಹೋದರೆ ಮುಂದೆ ನಾವು ದೊಡ್ಡ ದುರಂತವನ್ನು ಅನುಭವಿಸಬೇಕಾಗುತ್ತದೆ. ಮದ್ಯ ಮಾಧಕ ವಸ್ತುಗಳು ಎಲ್ಲೆಂದರಲ್ಲಿ ಸಿಗುತ್ತಿರುವಾಗ ಮಕ್ಕಳು ಮತ್ತು ಯುವಕರನ್ನು ಅವುಗಳಿಂದ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.
ಯುವತಿಯರು ಮತ್ತು ಮಹಿಳಿಯರಿಗೆ ಮಾಧಕ ವಸ್ತುಗಳ ಅರಿವಿನ ಕುರಿತು ರಂಗೋಲಿ ಸ್ಫರ್ಧೆಯನ್ನು ಏರ್ಪಡಿಸಲಾಯಿತು, ವಿಜೇತರಿಗೆ ಬಹುಮಾನಗಳನ್ನು ವಿರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೂಡಲ್ ಅಧಿಕಾರಿ ಪೂರ್ಣಿಮಾ ಮಠದ ಮತ್ತು ಡಾ| ಅಂಕಿತ್ ಉಪಸ್ಥಿತರಿದ್ದರು.ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ವ್ಯಸಮುಕ್ತಿ ಕೇಂದ್ರದ ಆಪ್ತ ಸಮಾಲೋಚಕ ಸುಮಂತ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಿವಕುಮಾರ ಮಾಂಗ್ಲೇನವರ ನಿರೂಪಿಸಿದರು. ಸಿ ಶಾಂತಿರವರು ವಂದಿಸಿದರು.





