ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಅನ್ಯಾಯ; ಸಮಿತಿ ರಚನೆಗೆ ರೈತರ ಆಗ್ರಹ

Date:

ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ ಹಾವೇರಿ ಜಿಲ್ಲಾಧ್ಯಕ್ಷ ಎಂ ಎನ್ ನಾಯಕ್ ಆಗ್ರಹಿಸಿದರು.

ಹಾವೇರಿ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ, ಕೃಷಿ ಸಚಿವರು ಹಾಗೂ ಕೃಷಿ ಇಲಾಖೆಗೆ ಮನವಿ ಸಲ್ಲಿಸಿ ಮಾತಮಾಡಿದರು.

“ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಟೆಂಡರ್ ನಂತರ ರೈತರು ಅನ್ಯಾಯಕ್ಕೆ ಒಳಗಾಗಿ ತನ್ನ ಧೈರ್ಯ ಮತ್ತು ಆತ್ಮವಿಶ್ವಾಸ ಕಳೆದುಕೊಂಡಿದ್ದು, ಮಾರ್ಚ್‌ 11ರಂದು ಅನಿರೀಕ್ಷಿತ ಘಟನೆ ನಡೆದಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಾದರೂ ರೈತರಿಗರ ಕಮಿಟಿ ರಚನೆ ಮಾಡಿ ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಕೆಲಸ ದೇಶಕ್ಕೆ ಕೃಷಿ ಉತ್ಪನ್ನಗಳನ್ನು ಬೆಳೆದು ಕೊಡುವುದು. ಅದಕ್ಕೆ ರೈತರು ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ದುಬಾರಿ ಬೀಜಗಳನ್ನು ಮತ್ತು ಕೀಟನಾಶಕಗಳನ್ನು ಬಳಸಿ ಒಳ್ಳೆಯ ಬೆಳೆಯನ್ನು ಬೆಳೆದು ಕರ್ನಾಟಕಕ್ಕೆ ಒಣ ಮೆಣಸಿನಕಾಯಿ ರೂಪದಲ್ಲಿ ಕೊಟ್ಟಿದ್ದಾರೆ. ರೈತರು ಕಳೆದ ವರ್ಷ ಬ್ಯಾಡಗಿ ಡಬ್ಬಿ ಹಾಗೂ ಕಡ್ಡಿ ಮೆಣಸಿನಕಾಯಿಗೆ ₹40,000 ಬೆಲೆ ನೋಡಿ ಈ ವರ್ಷ ತೆಗೆದುಕೊಂಡಿರುವ ಸಾಲವನ್ನು ತೀರಿಸಬಹುದೆಂದು ಉತ್ತಮ ಗುಣಮಟ್ಟದ ಮೆಣಸಿನಕಾಯಿಯನ್ನು ಬೆಳೆದು ಮಾರುಕಟ್ಟೆಗೆ ತಂದಿದ್ದಾರೆ” ಎಂದು ಹೇಳಿದರು.

“ಮಾರುಕಟ್ಟೆಯಲ್ಲಿ ಕೆಲವು ಮಧ್ಯವರ್ತಿಗಳ ಹಾವಳಿ ಹಾಗೂ ಗುಜರಾತಿನ ಗುಂದಲ್ ಮಾರ್ಕೆಟ್‌ನ ಬೆಲೆ ಏರಿಳಿತದ ಕಾರಣ ಮತ್ತು ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಸರ್ಕಾರಿ ಗೋದಾಮುಗಳಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಇಡಲು ಖಾಸಗಿ ಮಾರಾಟಗಾರರ ಹಾವಳಿಯಿಂದ ಅವಕಾಶ ಇಲ್ಲದಂತಾಗಿದ್ದು, ಹಾವೇರಿ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗ ಸಂವಹನ ಅಂತರದಿಂದ ಈ ಘಟನೆ ಉಂಟಾಗಿದೆ. ಹಾಗಾಗಿ ರೈತರ ವಿರುದ್ಧ ಯಾವುದೇ ಮೊಕದ್ದಮೆ ದಾಖಲು ಮಾಡಬಾರದು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ರಸ್ತೆ ತಡೆಯುವುದಕ್ಕೆ ಯಾರಿಗೂ ಅವಕಾಶವಿಲ್ಲ: ಜಿಲ್ಲಾಧಿಕಾರಿ

“ಜಿಲ್ಲಾಧಿಕಾರಿಗಳಾದ ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವರು, ರೈತರಿಗೆ ಒಳ್ಳೆಯ ಮಾರುಕಟ್ಟೆ ಒದಗಿಸಬೇಕು. ರೈತರ ಕೆಲಸ ದೇಶಕ್ಕೆ ಹಾಗೂ ರಾಜ್ಯಕ್ಕೆ ಕೃಷಿ ಉತ್ಪನ್ನಗಳನ್ನು ಉತ್ಪಾದಿಸಿ ಕೊಡುವುದು, ಬ್ಯಾಡಗಿ ಮೆಣಸಿನಕಾಯಿ ಇಡೀ ಜಗತ್ತಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದು, ಇಡೀ ಜಗತ್ತಲ್ಲಿ ಬ್ಯಾಡಗಿ ಮೆಣಸಿನಕಾಯಿಗೆ ಒಳ್ಳೆಯ ಮಾರ್ಕೆಟ್ ಇದ್ದಮೇಲೆ ಯಾಕೆ ಇಂಥ ಘಟನೆ ಉಂಟಾಯಿತು. ತಾವು ಒಂದು ತಂಡವನ್ನು ರಚನೆ ಮಾಡಿ ಶೀಘ್ರದಲ್ಲೇ ತಪ್ಪಿಸ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು, ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಎಸಿ ಹಾಗೂ ಎಸಿ ರಹಿತ ಗೋಡೌನ್‌ಗಳನ್ನು ಕಟ್ಟಿಸಿಕೊಟ್ಟು ರೈತ ಬೆಳೆದ ಕೃಷಿ ಉತ್ಪನ್ನಗಳಿಗೆ ಶೇಖರಣ ಸೌಲಭ್ಯ ಮಾಡಿದ್ದಲ್ಲಿ ಇಂತಹ ಅನಿರೀಕ್ಷಿತ ಹಾಗೂ ಕಾನೂನು ಬಾಹಿರ ಘಟನೆಗಳನ್ನು ತಡೆಗಟ್ಟಬಹುದು” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...